ಬೆಂಗಳೂರು: ಕಿರಿಯ ವಯಸ್ಸಿನಲ್ಲಿ ರಂಗ ಪ್ರವೇಶ ಮಾಡಿ, ಭರತನಾಟ್ಯದಲ್ಲಿ ಸಾಧನೆ ಮಾಡಿರುವ ತೇಜೋಮಯಿ ರಾಮಪ್ಪ ಗದ್ದಿಗೆ ಆರ್ಯಭಟ ಸಾಂಸ್ಕೃತಿಕ ವೇದಿಕೆ ವತಿಯಿಂದ ನೀಡಲಾಗುವ ಆರ್ಯಭಟ ಅಂತಾರಾಷ್ಟ್ರೀಯ ಪ್ರಶಸ್ತಿಗೆ ಭಾಜನಳಾಗಿದ್ದಾಳೆ. ಮೇ 23 ರಂದು ನಗರದ ರವೀಂದ್ರ ಕಲಾಕ್ಷೇತ್ರದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಈ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುತ್ತದೆ ಎಂದು ಸಂಸ್ಥಾಪಕ ಅಧ್ಯಕ್ಷ ಡಾ.ಎಚ್.ಎಲ್.ಎನ್.ರಾವ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
