Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಪ್ರಾಣಿಜನ್ಯ ರೋಗಗಳ ತಡೆಗೆ ಜಾಗೃತಿ ಅಗತ್ಯ

ಬಳ್ಳಾರಿಯಲ್ಲಿ ವಿಶ್ವ ಝೂನೋಸಿಸ್ ಜಾಗೃತಿ ದಿನ ಆಚರಣೆ



ಬಳ್ಳಾರಿ,ಜು.22 : ಪ್ರಾಣಿಜನ್ಯ ರೋಗಗಳ ತಡೆಗೆ ಜಾಗೃತಿ ಅಗತ್ಯವಾಗಿದ್ದು, ಪ್ರಾಣಿಗಳಿಂದ ಮನುಷ್ಯರಿಗೆ ಹರಡುವ ರೋಗಗಳ (ಝೂನೋಟಿಕ್ ಕಾಯಿಲೆಗಳು) ನಿಯಂತ್ರಣದ ಬಗ್ಗೆ ಅರಿವು ಮೂಡಿಸುವುದು ಈ ದಿನಾಚರಣೆಯ ಪ್ರಮುಖ ಉದ್ದೇಶವಾಗಿದೆ ಜಿಲ್ಲಾ ಸರ್ವೇಕ್ಷಣಾ ಘಟಕದ ಸಾಂಕ್ರಾಮಿಕ ರೋಗ ತಜ್ಞೆ ಡಾ. ವಿಶಾಲಾಕ್ಷಿ ಅವರು ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಸರ್ವೇಕ್ಷಣಾಧಿಕಾರಿಗಳ ಘಟಕ, ಪಶುಸಂಗೋಪನೆ ಇಲಾಖೆ ಹಾಗೂ ಚೈತನ್ಯ ಪದವಿಪೂರ್ವ ಕಾಲೇಜಿನ ಸಂಯುಕ್ತಾಶ್ರಯದಲ್ಲಿ ಕಾಲೇಜಿನ ಸಭಾಭವನದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ “ವಿಶ್ವ ಝೂನೋಸಿಸ್ ಜಾಗೃತಿ ದಿನ” ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ರೇಬೀಸ್, ಬರ್ಡ್ಫ್ಲೂö್ಯ, ಬ್ರುಸೆಲ್ಲೋಸಿಸ್, ಲೆಪ್ಟೋಸ್ಪೆöÊರೋಸಿಸ್ ಮುಂತಾದ ಕಾಯಿಲೆಗಳು ಹರಡದಂತೆ ತಡೆಯಲು ಸ್ವಚ್ಛತೆ, ಸುರಕ್ಷಿತ ಆಹಾರ ಪದ್ಧತಿ ಹಾಗೂ ಸಾಕುಪ್ರಾಣಿಗಳಿಗೆ ನಿಯಮಿತವಾಗಿ ಲಸಿಕೆ ಹಾಕುವುದು ಅತ್ಯಗತ್ಯ. ಮಾನವ, ಪ್ರಾಣಿ ಮತ್ತು ಪರಿಸರ ಆರೋಗ್ಯವನ್ನು ಸಮನ್ವಯಗೊಳಿಸುವ ‘ಒನ್ ಹೆಲ್ತ್' ಪರಿಕಲ್ಪನೆಯನ್ನು ಪ್ರತಿಯೊಬ್ಬರೂ ಅಳವಡಿಸಿಕೊಳ್ಳಬೇಕು ಎಂದು ಅವರು ಪ್ರತಿಪಾದಿಸಿದರು.
ದೇವಿನಗರ ನಗರ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಸುಧಾರಾಣಿ ಅವರು ಮಾತನಾಡಿ, ಪ್ರಾಣಿಗಳನ್ನು ಮುಟ್ಟಿದ ನಂತರ ಸೋಪಿನಿಂದ ಕೈ ತೊಳೆಯುವುದು, ಮಾಂಸ, ಹಾಲು ಹಾಗೂ ಮೊಟ್ಟೆಗಳನ್ನು ಸರಿಯಾಗಿ ಬೇಯಿಸಿ ಸೇವಿಸುವುದು ಮುಖ್ಯ. ಒಂದು ವೇಳೆ ಯಾವುದೇ ಪ್ರಾಣಿ ಕಚ್ಚಿದರೆ, ಕಚ್ಚಿದ ಗಾಯವನ್ನು ತಕ್ಷಣವೇ ಹರಿಯುವ ನೀರು ಮತ್ತು ಸೋಪಿನಿಂದ 15 ರಿಂದ 20 ನಿಮಿಷಗಳ ಕಾಲ ಸ್ವಚ್ಛಗೊಳಿಸಬೇಕು. ಇದರಿಂದ ರೇಬೀಸ್ ವೈರಾಣು ನಿಷ್ಕಿçಯಗೊಳ್ಳುತ್ತದೆ ಎಂದು ವಿದ್ಯಾರ್ಥಿಗಳಿಗೆ ತಿಳಿಸಿದರು.
ಪ್ರಾಣಿ ಕಚ್ಚಿದ ತಕ್ಷಣವೇ ಸಮೀಪದ ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿ ಉಚಿತ ಚಿಕಿತ್ಸೆ ಪಡೆಯುವಂತೆ ತಮ್ಮ ತಮ್ಮ ವಾರ್ಡ್ ಹಾಗೂ ಗ್ರಾಮಗಳಲ್ಲಿ ಅರಿವು ಮೂಡಿಸಲು ವಿದ್ಯಾರ್ಥಿಗಳಿಗೆ ಕರೆ ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ಹರಿಕೃಷ್ಣ ಅವರು ವಹಿಸಿದ್ದರು.
ಈ ಸಂದರ್ಭದಲ್ಲಿ ಪಶುಸಂಗೋಪನೆ ಇಲಾಖೆಯ ಉಪನಿರ್ದೇಶಕ ಡಾ. ಸದಾಶಿವ, ಸಹಾಯಕ ನಿರ್ದೇಶಕ ಡಾ. ಶ್ರೀನಿವಾಸ್, ವೈದ್ಯಾಧಿಕಾರಿ ಡಾ. ವಿಭಾ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಶಿವಾನಂದ ವಿ.ಪಿ., ಮುಖ್ಯ ಅತಿಥಿಗಳಾದ ಕಲ್ಪನಾ, ವೆಂಕಟರಮಣರೆಡ್ಡಿ, ಉಪ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ರೇಣುಕಾ ಜಡಗನ್ನವರ, ತಾಲ್ಲೂಕು ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಶಾಂತಮ್ಮ, ಕ್ಷೇತ್ರ ಶಿಕ್ಷಣಾಧಿಕಾರಿ ಖುರ್ಷಿದ್ ಬೇಗಂ ಸೇರಿದಂತೆ ಜಿಲ್ಲಾ ಸರ್ವೇಕ್ಷಣಾ ಘಟಕದ ಅಧಿಕಾರಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.

Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಲಾ ಮಕ್ಕಳಿಗೆ ಕಂಪಾಸ, ನೋಟಬುಕ್ ವಿತರಿಸಿದ ಶಾಸಕ ಪಾಟೀಲ ನೇಗಿನಹಾಳ ಗ್ರಾಮದಲ್ಲಿ  ಪಾಟೀಲರಿಂದ  ಹೈಟೆಕ್ ಬಸ್ ನಿಲ್ದಾಣ ಉದ್ಘಾಟನೆಮುಂದಿನ ಎರಡು ವರ್ಷದಲ್ಲಿ  ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿಗೆ ಶಾಸಕ ಬಾಬಾಸಾಹೇಬ ಪಾಟೀಲ ಹೊಸ ಸಂಕಲ್ಪಪರಿಸರ ಸ್ನೇಹಿ ಗಣೇಶೋತ್ಸವ ಅಭಿಯಾನಜಿಲ್ಲೆಯಲ್ಲಿ ಮುಂಗಾರು ಕ್ಷೀಣ: ರೈತರ ನೆರವಿಗೆ ಜಿಲ್ಲಾಡಳಿತ ಸದಾ ಸಿದ್ದಒಳಮೀಸಲಾತಿ ಜಾರಿಗೊಳಿಸಿ  ಕೆಎಂಎಫ್ ನೇಮಕಾತಿ ಮಾಡಿ  : ಎಲ್ ಮಾರೆಣ್ಣ ಒತ್ತಾಯ ಅಧಿಕಾರದಿಂದ ವಿದ್ಯುತ್ ದುರ್ಬಳಕೆ, ಸಾರ್ವಜನಿಕರ ಕೆಲಸಗಳಿಗೆ ನಿರ್ಲಕ್ಷ್ಯ : ಶಂಕರ ಬಂಡೆ  ಗ್ರಾಮಸ್ಥರ ಆಕ್ರೋಶಮಾಸಿಕ ವೇತನವನ್ನು ಹೆಚ್ಚಿಸಿ : ಹೊರಗುತ್ತಿಗೆ ನೌಕರರಿಂದ ಡಿ ಎಚ್ ಓ ಗೆ  ಮನವಿ ಶಿಸ್ತು, ಶ್ರಮ ಮತ್ತು ಸಂಕಲ್ಪವೇ ಯಶಸ್ಸಿನ ಮೆಟ್ಟಿಲುಗಳು : ಜಯಪ್ರಕಾಶ್  ಜೆ.ಗುಪ್ತಾಕುರುಗೋಡು ತಾಲೂಕಿನ ವಿವಿಧ ಗ್ರಾ.ಪಂ.ಗಳಿಗೆ ಜಿಪಂ ಉಪ ಕಾರ್ಯದರ್ಶಿ ಶಶಿಕಾಂತ್ ಶಿವಪುರೆ ಭೇಟಿ: ವಿಬಿ-ಜಿ ರಾಮ್-ಜಿ ಕಾಮಗಾರಿಗಳ ಪರಿಶೀಲನೆ