Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ರಾಷ್ಟಿçÃಯ ಶಸ್ತçಚಿಕಿತ್ಸಕರ ವಾರಾಚರಣೆ ಅಂಗವಾಗಿ ಜಾಗೃತಿ ಕಾರ್ಯಕ್ರಮ

ಆಶೀರ್ವಾದ ಪ್ರೌಢಶಾಲೆಯಲ್ಲಿ ಮಕ್ಕಳ ಕಲಾ ಸ್ಪರ್ಧೆ



ಬಳ್ಳಾರಿ,ಜೂ.12
ರಾಷ್ಟಿçÃಯ ಶಸ್ತçಚಿಕಿತ್ಸಕರ ವಾರಾಚರಣೆಯ ಅಂಗವಾಗಿ ನಗರದ ಆಶೀರ್ವಾದ ಹೈಸ್ಕೂಲ್‌ನಲ್ಲಿ ಕೆಎಸ್‌ಸಿಎಎಸ್‌ಐ -ಬಳ್ಳಾರಿ ಶಾಖೆ ವತಿಯಿಂದ ಶಾಲಾ ವಿದ್ಯಾರ್ಥಿಗಳಿಗಾಗಿ ‘ಮಕ್ಕಳ ಕಲಾ ಸ್ಪರ್ಧೆ’ ಆಯೋಜಿಸಲಾಗಿತ್ತು.
ಶಾಲಾ ಮಕ್ಕಳಲ್ಲಿ ಸೃಜನಾತ್ಮಕತೆಯನ್ನು ಉತ್ತೇಜಿಸುವುದು ಮತ್ತು ಆರೋಗ್ಯದ ಬಗ್ಗೆ ಜಾಗೃತಿ ಮೂಡಿಸುವುದು ಈ ಸ್ಪರ್ಧೆಯ ಮುಖ್ಯ ಉದ್ದೇಶವಾಗಿತ್ತು. ವಿದ್ಯಾರ್ಥಿಗಳು ಅತ್ಯಂತ ಹರ್ಷಭರಿತರಾಗಿ ಭಾಗವಹಿಸಿದ್ದ ಈ ಚಿತ್ರಕಲೆ ಸ್ಪರ್ಧೆಯನ್ನು ಎರಡು ಪ್ರತ್ಯೇಕ ವಿಭಾಗಗಳಲ್ಲಿ ನಡೆಸಲಾಯಿತು.
1ನೇ ವಿಭಾಗದಲ್ಲಿ 1ನೇ ತರಗತಿಯಿಂದ 5ನೇ ತರಗತಿಯ ವಿದ್ಯಾರ್ಥಿಗಳಿಗೆ, 2ನೇ ವಿಭಾಗದಲ್ಲಿ 6ನೇ ತರಗತಿಯಿಂದ 10ನೇ ತರಗತಿಯ ವಿದ್ಯಾರ್ಥಿಗಳಿಗೆ ಆಯೋಜಿಸಲಾಗಿತ್ತು.
ಎರಡೂ ವಿಭಾಗಗಳ ವಿದ್ಯಾರ್ಥಿಗಳಿಗೆ ಪ್ರತ್ಯೇಕ ವಿಷಯಗಳನ್ನು ನೀಡಲಾಗಿದ್ದು, ಅವರು ತಮ್ಮ ಕಲ್ಪನಾ ಶಕ್ತಿಯ ಮುಖಾಂತರ ಪ್ರಾಯೋಗಿಕವಾಗಿ ಆರೋಗ್ಯದ ಮಹತ್ವವನ್ನು ಚಿತ್ರಗಳಲ್ಲಿ ಅಭಿವ್ಯಕ್ತಪಡಿಸಲು ಮುಕ್ತ ಅವಕಾಶ ಕಲ್ಪಿಸಲಾಗಿತ್ತು.
ಸ್ಪರ್ಧೆಯಲ್ಲಿ ಭಾಗವಹಿಸಿದ ಮಕ್ಕಳು ಬಣ್ಣ ಬಣ್ಣದ ಹಾಗೂ ಅರ್ಥಪೂರ್ಣ ಚಿತ್ರಗಳ ಮೂಲಕ ತಮ್ಮ ಅಪಾರ ಸೃಜನಶೀಲತೆ, ಕಲ್ಪನಾ ಸಾಮರ್ಥ್ಯ ಮತ್ತು ಆರೋಗ್ಯಕ್ಕೆ ಸಂಬAಧಿಸಿದ ವಿಷಯಗಳ ಬಗ್ಗೆ ತಮಗಿರುವ ಅರಿವನ್ನು ಪ್ರದರ್ಶಿಸಿದರು. ವಿದ್ಯಾರ್ಥಿಗಳ ಈ ಸಕ್ರಿಯ ಭಾಗವಹಿಸುವಿಕೆ ಮತ್ತು ಉತ್ಸಾಹವನ್ನು ಶಾಲೆಯ ಶಿಕ್ಷಕರು ಹಾಗೂ ಕಾರ್ಯಕ್ರಮದ ಆಯೋಜಕರು ಶ್ಲಾಘಿಸಿದರು.
ಕಾರ್ಯಕ್ರಮದಲ್ಲಿ ಕೆಎಸ್‌ಸಿಎಎಸ್‌ಐ ಬಳ್ಳಾರಿ ಶಾಖೆಯ ಅಧ್ಯಕ್ಷ ಡಾ. ಶೇಖಪ್ಪ ಮಾಳಗಿಮನಿ, ಕಾರ್ಯದರ್ಶಿ ಡಾ. ಗುಡೇಕೋಟೆ ರವಿಕುಮಾರ್, ಸಹಕಾರ್ಯದರ್ಶಿ ಡಾ. ಶೈಕ್ ಫರ್ಹಾನ್ ಎಂ.ಬಿ ಸೇರಿದಂತೆ ಜನರಲ್ ಸರ್ಜರಿ ವಿಭಾಗದ ವಿದ್ಯಾರ್ಥಿಗಳು, ವೈದ್ಯಕೀಯ ಸಿಬ್ಬಂದಿ, ಶಾಲೆಯ ಶಿಕ್ಷಕ ವೃಂದ ಹಾಗೂ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಕಲೆಯ ಮೂಲಕ ಆರೋಗ್ಯ ಜಾಗೃತಿಯನ್ನು ಮೂಡಿಸುವಲ್ಲಿ ಈ ವೇದಿಕೆಯು ಅತ್ಯಂತ ಪರಿಣಾಮಕಾರಿಯಾಗಿ ಮೂಡಿಬಂದಿತು.

Advertisement
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಬಿತ್ತನೆ ಬೀಜ, ರಸಗೊಬ್ಬರ ಮಾರಾಟ ತಡೆಗೆ ಕ್ರಮ ನಕಲಿ ಬಿತ್ತನೆ ಬೀಜ, ರಸಗೊಬ್ಬರ ಮಾರಾಟ ತಡೆಗೆ ಕ್ರಮ ಆತ್ಮನಿರ್ಭರ ಭಾರತದತ್ತ ಹೆಜ್ಜೆ: ದೇವಲಾಪುರದಲ್ಲಿ ಸೋಯಾಬೀನ್ ಕ್ಷೇತ್ರೋತ್ಸವ ಹಾಗೂ ಬೀಜ ಕಿಟ್ ವಿತರಣೆ"ಬಾಲ ಕಾರ್ಮಿಕ ಪದ್ದತಿ ನಿರ್ಮೂಲನೆಗೆ ಎಲ್ಲರ ಸಹಕಾರ ಅಗತ್ಯ"*ಜುಲೈ 12ರಂದು  ವಿಶ್ವಕರ್ಮರ ಜನ ಜಾಗೃತಿ ಜಿಲ್ಲಾ ಸಮಾವೇಶ ಹಾಗೂ ಪ್ರತಿಭಾ ಪುರಸ್ಕಾರ*ಸುಪ್ರೀಂ ಕೋರ್ಟ್ ವಕಾಲತ್ತು ಕುರಿತು ವಿಶೇಷ ಉಪನ್ಯಾಸ ರಾಜ್ಯಮಟ್ಟದ ಸಿಮೆಂಟ್ ಶಿಲ್ಪಕಲಾ ಶಿಬಿರಕ್ಕೆ ಡಾ. ಬಾಬುರಾವ್ ನಡೋಣಿ ಆಯ್ಕೆ ಪ್ರವಾಹ ಪರಿಸ್ಥಿತಿ ಎದುರಿಸಲು ಸನ್ನದ್ಧರಾಗಲು ತಾಲೂಕಾಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆಜೂನ್ 28 ರಂದು ರಾಷ್ಟಿçÃಯ ಪಲ್ಸ್ ಪೋಲಿಯೋ ಅಭಿಯಾನಸುಪ್ರೀಂ ಕೋರ್ಟ್ ‘ಸಮಾಧಾನ್ ಸಮಾರೋಹ್' ಯಶಸ್ವಿಗೊಳಿಸಲು ಎಲ್ಲಾ ಇಲಾಖೆಗಳಿಗೆ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್ ಸೂಚನೆ