ಮುದ್ದೇಬಿಹಾಳ: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಯಾದ ಭಾರತ ಜೋಡೋ ಯುವ ಸಂಘದ ಕುರಿತು ಅರಿವು ಮೂಡಿಸುವ ಕಾರ್ಯಕ್ರಮವನ್ನು ಮುದ್ದೇಬಿಹಾಳ ವಿಧಾನಸಭಾ ಕ್ಷೇತ್ರದ ರಕ್ಕಸಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನಡೆಸಲಾಯಿತು.
ಕಾರ್ಯಕ್ರಮದಲ್ಲಿ ಶಾಸಕ ಸಿ.ಎಸ್. ನಾಡಗೌಡ ಅಪ್ಪಾಜಿ ಮಾತನಾಡಿ, ಭಾರತ ಜೋಡೋ ಯುವ ಸಂಘ ಯೋಜನೆಯ ಉದ್ದೇಶ ಹಾಗೂ ಪ್ರಯೋಜನಗಳ ಕುರಿತು ಗ್ರಾಮಸ್ಥರಿಗೆ ಮಾಹಿತಿ ನೀಡಿದರು. ಗ್ರಾಮೀಣ ಯುವಕರು ಸೇರಿದಂತೆ ಎಲ್ಲರೂ ಯೋಜನೆಯಲ್ಲಿ ಸಕ್ರಿಯವಾಗಿ ಪಾಲ್ಗೊಂಡು, ಸರ್ಕಾರದ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಕರೆ ನೀಡಿದರು.
ಯುವಜನರ ಭಾಗವಹಿಸುವಿಕೆ ಹಾಗೂ ಸಂಘಟಿತ ಪ್ರಯತ್ನಗಳಿಂದ ಗ್ರಾಮೀಣ ಪ್ರದೇಶದ ಅಭಿವೃದ್ಧಿಗೆ ಮತ್ತಷ್ಟು ವೇಗ ದೊರೆಯಲಿದೆ ಎಂದು ಅವರು ಹೇಳಿದರು.
ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯಿತಿ ಸದಸ್ಯರು, ಮುಖಂಡರು, ಯುವಕರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.