Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮಾಸಿಕ ಋತುಚಕ್ರವು ಪ್ರತಿ ಬಾಲಕಿಯ ಜೀವನದಲ್ಲಿ ಸಹಜ ಪ್ರಕ್ರಿಯೆ: ಬಸವರಾಜೇಶ್ವರಿ

ಬಳ್ಳಾರಿ ಆ 25. ಶ್ರೀ  ವಾಸವಿ ವಿದ್ಯಾಲಯದಲ್ಲಿ ಶನಿವಾರದಂದು ವಿದ್ಯಾರ್ಥಿನಿಯರ ಆರೋಗ್ಯ ಕಾಪಾಡುವ ದೃಷ್ಟಿಯಿಂದ “ಸ್ಯಾನಿಟರಿ ಪ್ಯಾಡ್ ಗಳ ಬಳಕೆ ಮತ್ತು ವಿಲೇವಾರಿ  ಕುರಿತು ಜಾಗೃತಿ ಕಾರ್ಯಕ್ರಮವನ್ನು” ಆಯೋಜಿಸಲಾಗಿತ್ತು.


ಕಾರ್ಯಕ್ರಮವನ್ನು  ಶಾಲಾ  ಸಹಶಿಕ್ಷಕಿಯರು ಉದ್ಘಾಟಿಸಿ,  ಬಸವರಾಜೇಶ್ವರಿಯವರು  ಮಾತಾನಾಡುತ್ತಾ “ ಮಾಸಿಕ ಋತುಚಕ್ರವು ಪ್ರತಿ ಬಾಲಕಿಯ ಜೀವನದಲ್ಲಿ ಸಹಜ ಪ್ರಕ್ರಿಯೆಯಾಗಿದ್ದು, ಈ ಅವಧಿಯಲ್ಲಿ ಸ್ವಚ್ಛತೆ ಕಾಪಾಡುವುದು ಅತ್ಯಂತ ಮುಖ್ಯ. ವಿದ್ಯಾರ್ಥಿನಿಯರು ಆರೋಗ್ಯದ ಕಡೆ ಹೆಚ್ಚಿನ ಗಮನಹರಿಸಿ,ಸ್ಯಾನಿಟರಿ ಪ್ಯಾಡ್ ಗಳನ್ನು ಸರಿಯಾಗಿ ಬಳಸಿ ವಿಲೇವಾರಿ ಮಾಡಬೇಕು” ಎಂದು ಹೇಳಿದರು.


ಕಾರ್ಯಕ್ರಮದಲ್ಲಿ ಪೋಷಕರ ಉಪಸ್ಥಿತಿಯಲ್ಲಿ ವಿದ್ಯಾರ್ಥಿನಿಯರಿಗೆ ಪ್ಯಾಡ್ ಗಳ ಸರಿಯಾದ ಬಳಕೆ, ಬದಲಾವಣೆ ಮಾಡುವ ಅವಧಿ, ಬಳಸಿದ ಪ್ಯಾಡ್ ಗಳ ವಿಲೇವಾರಿ ವಿಧಾನ ಹಾಗೂ ಸ್ವಚ್ಛತೆಯ ಮಹತ್ವದ ಕುರಿತು ಸಮಗ್ರ ಮಾಹಿತಿ ನೀಡಿ,  ಮಾಸಿಕ ಋತುಚಕ್ರದ  ಸಮಯದಲ್ಲಿ ಸ್ವಚ್ಛತೆಯನ್ನು ಕಾಪಾಡದಿದ್ದಲ್ಲಿ ತೀವ್ರ ಆರೋಗ್ಯ ಸಮಸ್ಯೆಗಳು ಎದುರಾಗುವ ಸಾಧ್ಯತೆ ಇದೆ. ಆದ್ದರಿಂದ ಸ್ವಚ್ಛತೆ ಪಾಲನೆ ಮಾಡುವುದು ಪ್ರತಿಯೊಬ್ಬ ವಿದ್ಯಾರ್ಥಿನಿಯ ಹೊಣೆಗಾರಿಕೆ ಎಂದು ತಿಳಿಸಿದರು.


ಕಾರ್ಯಕ್ರಮದ ಪ್ರಮುಖ ಭಾಗವಾಗಿ, ಸ್ಯಾನಿಟರ್ ಪ್ಯಾಡ್ ಗಳ ಬಳಕೆ ಮತ್ತು ವಿಲೇವಾರಿ ಕುರಿತು ಪ್ರಾತ್ಯಕ್ಷಿಕೆ  ನಡೆಸಲಾಯಿತು.ಇದರಿಂದ ವಿದ್ಯಾರ್ಥಿನಿಯರಿಗೆ ಪ್ಯಾಡ್ ಗಳನ್ನು ಸುರಕ್ಷಿತವಾಗಿ ಬಳಸುವ ವಿಧಾನ ಹಾಗೂ ಅದರ ವಿಲೇವಾರಿ ಬಗ್ಗೆ ಇನ್ನಷ್ಟು ಸ್ಪಷ್ಟತೆ ದೊರೆಯಿತು. ಶಾಲಾ ಶಿಕ್ಷಕಿಯರು  ವಿದ್ಯಾರ್ಥಿನಿಯರಿಗೆ ಆತ್ಮವಿಶ್ವಾಸ ತುಂಬಿ, ಮಾತಾನಾಡುತ್ತ, ದೇಹ ಮತ್ತು ಮನಸ್ಸಿನ ಆರೋ್ಗ್ಯ ಕಾಪಾಡಿಕೊಳ್ಳಲು ತಕ್ಕ ಮುನ್ನೆಚ್ಚರಿಕೆ ಕ್ರಮಗಳನ್ನು ಅನುಸರಿಸುವಂತೆ ಪ್ರೇರೇಪಿಸಿದರು.


ಕಾರ್ಯಕ್ರಮದಲ್ಲಿ ಶಿಕ್ಷಕರು, ವಿದ್ಯಾರ್ಥಿನಿಯರು ಹಾಗೂ ಪೋಷಕರು  ಉಪಸ್ಥಿತರಿದ್ದರು. ಸ್ವಚ್ಛತಾ ಸಿಬ್ಬಂದಿ ಮತ್ತು ವಿಲೇವಾರಿ ಮಾಡುವವರ ಆರೋಗ್ಯದ ಕಾಳಜಿ ಮತ್ತು ಹಿತ ದೃಷ್ಟಿಯಿಂದ ಈ ಜಾಗೃತಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಶಾಲೆಯ ಸಹಶಿಕ್ಷಕಿಯರು  ಮಾತಾನಾಡಿ, “ವಿದ್ಯಾರ್ಥಿನಿಯರ ಆರೋಗ್ಯ ಮತ್ತು ಸ್ವಚ್ಛತೆಯ ಬಗ್ಗೆ ಜಾಗೃತಿ ಮೂಡಿಸಲು ನಮ್ಮ ವಿದ್ಯಾಲಯ  ಸದಾ ಮುಂಚೂಣಿಯಲ್ಲಿರುತ್ತದೆ.ಮುಂದೆಯೂ ಇಂತಹ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು” ಎಂದು ತಿಳಿಸಿದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ