Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಜಾತ್ರೆಗಳಿಂದ ಬಾಂದವ್ಯ, ಸಂಸ್ಕಾರ ಹೆಚ್ಚಳ : ಬಾಬಾಸಾಹೇಬ ಪಾಟೀಲ 

 
ನೇಸರಗಿ. ದೇಶದಲ್ಲಿ ನಡೆಯುವ ಜಾತ್ರೆ, ಆದ್ಯಾತ್ಮಿಕ ಪ್ರವಚನ, ಅನ್ನ ದಾಸೋಹ ಪರಸ್ಪರ ಮನುಷ್ಯ ಮನುಷ್ಯರು ಬೆರೆತು ಹಬ್ಬ ಜಾತ್ರೆಗಳನ್ನು ಆಚರಿಸಿ, ಸ್ನೇಹಿತರು, ಸಂಬಂದಿಕರು, ಹೊರ ದೂರದ ಊರುಗಳಲ್ಲಿ ವಾಸಿಸುವ ಗ್ರಾಮದ ಜನರು ಇಂತಹ ಜಾತ್ರೆಗಳಲ್ಲಿ ಪಾಲ್ಗೊಂಡು ಬಾಂದವ್ಯ, ಸಂಸ್ಕಾರ ಹೆಚ್ಚಿಸುವ ಸತ್ಕಾರ್ಯ ಆಗುತ್ತದೆ ಎಂದು ಚನ್ನಮ್ಮನ ಕಿತ್ತೂರು ಶಾಸಕರಾದ ಬಾಬಾಸಾಹೇಬ ಪಾಟೀಲ ಹೇಳಿದರು.

     ಅವರು ಶುಕ್ರವಾರದಂದು ಗ್ರಾಮದ ಶ್ರೀ ಚನ್ನವೃಷಬೇಂದ್ರ ದೇವರಕೊಂಡ ಅಜ್ಜನವರ ಜಾತ್ರಾ ಮಹೋತ್ಸವದ ನಿಮಿತ್ಯ ಇಂದು ನಡೆದ ರಥೋತ್ಸವದಲ್ಲಿ ಪಾಲ್ಗೊಂಡು, ದೇವರ ದರ್ಶನ ಪಡೆದು,  ದೇವಸ್ಥಾನದ ಆವರಣದಲ್ಲಿ ನೂತನ ಕೋಣೆ ಉದ್ಘಾಟನೆ ನೆರವೇರಿಸಿ ಮಾತನಾಡಿ ಶ್ರೀ ಚನ್ನವೃಷಬೇಂದ್ರ ಅಜ್ಜನವರ ದೇವಸ್ಥಾನಕ್ಕೆ ಈಗಾಗಲೇ ಅನುಧಾನ ನೀಡಿದ್ದು ಮುಂದಿನ ದಿನಗಳಲ್ಲಿ ಮಠದ ಅಭಿವೃದ್ಧಿಗೆ ಸದಾ ಸಹಕರಿಸುತ್ತೇನೆ ಎಂದರು.

    ಸಾನಿಧ್ಯ ವಹಿಸಿ ನೇಸರಗಿ ಮಲ್ಲಾಪೂರ ಗಾಳೇಶ್ವರ ಮಠದ ಚಿದಾನಂದ ಮಹಾಸ್ವಾಮಿಗಳು ಮಾತನಾಡಿ ಶ್ರೀ ಚನ್ನವೃಷಬೇಂದ್ರ ಅಜ್ಜನವರ ಮಠವು ದಿನದಿಂದ ದಿನಕ್ಕೆ ಅಭಿವೃದ್ಧಿ ಹೊಂದುತ್ತಿದ್ದು ಇದಕ್ಕೆ ಸದ್ಭಕ್ತರ ಭಕ್ತಿಯ ಸೇವೆ, ರಾಜಕೀಯ ಮುಖಂಡರ ಸಹಕಾರ ಎಂದರು.

    ಈ ಸಂದರ್ಭದಲ್ಲಿ ಗ್ರಾಮದ ಮತ್ತು ಸುತ್ತಮುತ್ತಲಿನ ಗ್ರಾಮಗಳ ಮುಖಂಡರು, ಎಲ್ಲ ಸಮಾಜದ ಮುಖಂಡರು, ನೇಸರಗಿ ಗ್ರಾಮಸ್ಥರು,ಸಕಲ  ಸದ್ಭಕ್ತರು  ಭಾಗವಹಿಸಿದ್ದರು.

Advertisement
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ನದಾಫ್-ಪಿಂಜಾರ ಸಂಘ ತಾಲೂಕ ಘಟಕದ ಕಚೇರಿ ಉದ್ಘಾಟನೆ ಟ್ರಕ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ : ಅಕ್ಕ-ತಮ್ಮ ದಾರುಣ ಸಾವುತಾಲೂಕಾ ಅಧಿಕಾರಿಗಳ ಸಾಮಾನ್ಯ ಸಭೆ; ರೈತರಿಗೆ ಬೀಜ, ಗೊಬ್ಬರ ಕೊರತೆಯಾಗದಂತೆ ನೋಡಿಕೊಳ್ಳಿ: ಬಸವರಾಜ್ ಅಡವಿಮಠ್ ಸೂಚನೆಕೊಪ್ಪಳ ಕಾರ್ಯನಿರತ ಪತ್ರಕರ್ತರ ಸಂಘದ ಸಭೆನೂತನ ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಅಭಿನಂದಿಸಿದ ಲಕ್ಷ್ಮೀ  ಹೆಬ್ಬಾಳಕರ.ಸಿದ್ದರಾಮಯ್ಯ ಭೇಟಿ ಮಾಡಿ ಧನ್ಯವಾದ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಸತ್ಕರಿಸಿದ ಯುವ ಮುಖಂಡ  ರಾಹುಲ  ಜಾರಕಿಹೊಳಿ.ಸಚಿವ ಸತೀಶ ಜಾರಕಿಹೊಳಿ, ಕೆಪಿಸಿಸಿ ಅಧ್ಯಕ್ಷ ಹರಿಪ್ರಸಾದ ಬೇಟಿ ಪರಸ್ಪರ ಶುಭ ಕೋರಿಕೆಗ್ಲೋಬಲ್ ಕ್ಯಾಪೆಬಿಲಿಟಿ ಸೆಂಟರ್‌ಗಳ ಬೆಳವಣಿಗೆಗೆ ಉತ್ತೇಜನ*ಶರಣು ಕಾರ್ಯಾಲಯ ಆರಂಭಿಸುವ ಮೂಲಕ ಬಡವರ ಕಣ್ಣಿರು ಒರೆಸುವ ಕಾರ್ಯಕ್ಕೆ ಮುಂದಾಗಿರುವುದು ಶ್ಲಾಘನೀಯ : ಬಳಗಾನೂರು ಶ್ರೀಗಳು,,*