LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
International News

ಬಲೂಚಿಸ್ತಾನ ಪಾಕಿಸ್ತಾನವಲ್ಲ, ಮಿರ್‌ ಬಲೂಚ್‌ ಸ್ವಾತಂತ್ರ್ಯ ಘೋಷಣೆ

ಬಲೂಚಿಸ್ತಾನ್: ಬಲೂಚಿಸ್ತಾನ್​ ಬುಧವಾರ ಪಾಕಿಸ್ತಾನದಿಂದ ಸ್ವಾತಂತ್ರ್ಯ ಘೋಷಿಸಿಕೊಂಡಿದೆ. ಬಲೂಚಿಸ್ತಾನ್ ಪ್ರತಿನಿಧಿ ಮಿರ್ ಯಾರ್ ಬಲೂಚ್ ಬುಧವಾರ ಈ ಪ್ರಕಟಣೆ ಮಾಡಿದ್ದಾರೆ. ಈ ಪ್ರದೇಶದಲ್ಲಿ ದಶಕಗಳ ಹಿಂಸಾಚಾರ, ಬಲವಂತದ ಕಣ್ಮರೆಗಳು ಮತ್ತು ಮಾನವ ಹಕ್ಕುಗಳ ಉಲ್ಲಂಘನೆ ಮಾಡಲಾಗಿದೆ ಎಂದು ಅವರು ಉಲ್ಲೇಖಿಸಿದ್ದಾರೆ.


ಎಕ್ಸ್​ ಹ್ಯಾಂಡಲ್​​ ಪೋಸ್ಟ್‌ನಲ್ಲಿ, ಬಲೂಚಿಸ್ತಾನ್‌ನ ಜನರು ತಮ್ಮ "ರಾಷ್ಟ್ರೀಯ ತೀರ್ಪು" ನೀಡಿದ್ದಾರೆ ಮತ್ತು ಜಗತ್ತು ಇನ್ನು ಮುಂದೆ ಮೌನವಾಗಿರಬಾರದು ಎಂದು ಅವರು ಇದೇ ವೇಳೆ ಮನವಿ ಮಾಡಿದ್ದಾರೆ.




‘‘ತುಮ್ ಮಾರೋಗೆ ಹಮ್ ನೆಕ್ಲೆಂಗಿ, ಹಮ್ ನಸಲ್ ಬಚಾನಿ ನೆಕ್ಲಿ ಹೈ, ಆವೋ ಹಮಾರಾ ಸಾಥ್ ದೋ’’ ಪಾಕಿಸ್ತಾನ ಆಕ್ರಮಿತ ಬಲೂಚಿಸ್ತಾನ್‌ನಾದ್ಯಂತ ಬಲೂಚಿಸ್ತಾನ್ ಜನರು ಬೀದಿಗಿಳಿದಿದ್ದಾರೆ. ಇದು ಬಲೂಚಿಸ್ತಾನ್, ಪಾಕಿಸ್ತಾನವಲ್ಲ. ಜಗತ್ತು ಇನ್ನು ಮುಂದೆ ಮೂಕ ಪ್ರೇಕ್ಷಕರಾಗಿರಲು ಸಾಧ್ಯವಿಲ್ಲ ಎಂದು ಎಕ್ಸ್​​ ಹ್ಯಾಂಡಲ್​ ನಲ್ಲಿ ಬರೆಯಲಾಗಿದೆ. ಭಾರತೀಯ ನಾಗರಿಕರು, ವಿಶೇಷವಾಗಿ ಮಾಧ್ಯಮಗಳು, ಯೂಟ್ಯೂಬರ್‌ಗಳು ಮತ್ತು ಬುದ್ಧಿಜೀವಿಗಳು ಬಲೂಚಿಸ್ತಾನ್‌ಗಳನ್ನು ಪಾಕಿಸ್ತಾನದ ಸ್ವಂತ ಜನರು ಎಂದು ಕರೆಯುವುದನ್ನು ನಿಲ್ಲಿಸುವಂತೆ ಅವರು ಇದೇ ವೇಳೆ ಒತ್ತಾಯಿಸಿದ್ದಾರೆ.






ಬಲೂಚಿಸ್ತಾನದ ವಿವರಣೆ ಹೀಗಿದೆ: ಪ್ರಿಯ ಭಾರತೀಯ ದೇಶಭಕ್ತ ಮಾಧ್ಯಮಗಳು, ಯೂಟ್ಯೂಬ್ ಒಡನಾಡಿಗಳು, ಭಾರತವನ್ನು ರಕ್ಷಿಸಲು ಹೋರಾಡುವ ಬುದ್ಧಿಜೀವಿಗಳು ಬಲೂಚ್‌ಗಳನ್ನು ಪಾಕಿಸ್ತಾನದ ಸ್ವಂತ ಜನರು ಎಂದು ಕರೆಯಬೇಡಿ ಎಂದು ಇದೇ ವೇಳೆ ಮನವಿ ಮಾಡಲಾಗಿದೆ. ನಾವು ಪಾಕಿಸ್ತಾನಿಗಳಲ್ಲ, ನಾವು ಬಲೂಚಿಸ್ತಾನಿಗಳು. ಪಾಕಿಸ್ತಾನದ ಸ್ವಂತ ಜನರು ಪಂಜಾಬಿಗಳು, ಅವರು ಎಂದಿಗೂ ವಾಯು ಬಾಂಬ್ ದಾಳಿಗಳು, ಬಲವಂತದ ಕಣ್ಮರೆಗಳು ಮತ್ತು ನರಮೇಧವನ್ನು ಎದುರಿಸಲಿಲ್ಲ ಎಂದು ಬಲೂಚ್ ನಾಯಕ ಹೇಳಿಕೊಂಡಿದ್ದಾರೆ.


Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್