Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕಬಂಧ ಟ್ರೇಲರ್ ಬಿಡುಗಡೆ

     ಕುಂಜರ ಫಿಲಂಸ್‍ ಬ್ಯಾನರ್‍ ಅಡಿ ಪ್ರಸಾದ್‍ ವಸಿಷ್ಠ ಮತ್ತು ಮಿತ್ರರು  ನಿರ್ಮಿಸಿರುವ ‘ಕಬಂಧ’ ಚಿತ್ರದ ಟ್ರೇಲರ್ ಬಿಡುಗಡೆ ಸಮಾರಂಭ ಕಲಾವಿದರ ಸಂಘದ ಡಾ. ಅಂಬರೀಷ್‍ ಆಡಿಟೋರಿಯಂನಲ್ಲಿ ನೆರವೇರಿತು.


     ಖ್ಯಾತ ನಿರ್ಮಾಪಕಿ ಶೈಲಜಾ ನಾಗ್‍ ಚಿತ್ರದ ಟ್ರೇಲರ್‍ ಬಿಡುಗಡೆ ಮಾಡಿದರು. ಅವರು ಮಾತನಾಡಿ "ಟ್ರೇಲರ್ ಬಹಳ ಆಸಕ್ತಿಕರವಾಗಿದೆ. ಚಿತ್ರದ ಬಗ್ಗೆ ಸಾಕಷ್ಟು ಕುತೂಹಲ ಮೂಡಿಸುತ್ತಿದೆ. ಇವತ್ತಿನ ಚಿತ್ರರಂಗದ ಪ್ರತಿಸ್ಥಿತಿ ಬಗ್ಗೆ ಸಾಕಷ್ಟು ಚರ್ಚೆ ನಡೆಯುತ್ತಿದೆ. ಇವತ್ತು ಸಿನಿಮಾ ಮಾಡುವುದು ದೊಡ್ಡ ಸವಾಲಲ್ಲ. ಪ್ರೇಕ್ಷಕರನ್ನು ಚಿತ್ರಮಂದಿರಕ್ಕೆ ಕರೆತರುವುದು ನಿಜವಾದ ಸವಾಲು. ಅದರಲ್ಲಿ ಹೇಗೆ ಗೆಲ್ಲುವುದು ಎಂಬುದು ಬಹಳ ಮುಖ್ಯ ಮತ್ತು ಆ ಬಗ್ಗೆ ಸಾಕಷ್ಟು ಪ್ರಯತ್ನ ಮಾಡಿ, ಜನರಿಗೆ ಚಿತ್ರವನ್ನು ತಲುಪಿಸುವ ಕೆಲಸ ಮಾಡಿ’ ಎಂದು ಚಿತ್ರತಂಡದವರಿಗೆ ಕಿವಿಮಾತು ಹೇಳಿದರು.



     'ಕಬಂಧ' ನಿರ್ದೇಶಕ ಸತ್ಯನಾಥ್‍  "ಎರಡು ವರ್ಷಗಳ ಹಿಂದೆ ಶುರುವಾದ ಚಿತ್ರವಿದು. ಮೊದಲು ಕಿಶೋರ್‍ ಅವರನ್ನು ಭೇಟಿ ಮಾಡಿ ಅವರಿಗೆ ಕಥೆ ಹೇಳಿದೆವು. ಅವರು ಒಪ್ಪಿದ ಮೇಲೆ ಎಲ್ಲವನ್ನೂ ಸಿದ್ಧ ಮಾಡಿಕೊಂಡು ತುಮಕೂರು ಮತ್ತು ದೇವರಾಯನದುರ್ಗ ಸುತ್ತ 55 ದಿನಗಳ ಚಿತ್ರೀಕರಣ ಮಾಡಿದ್ದೇವೆ. ಶೇ. 80ರಷ್ಟು ರಾತ್ರಿ ಭಾಗದ ಚಿತ್ರೀಕರಣವಾಗಿದೆ. ಚಿತ್ರದ ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ಮುಗಿಯುತ್ತಾ ಬಂದಿವೆ. ಇನ್ನೆರಡು ತಿಂಗಳುಗಳಲ್ಲಿ ಚಿತ್ರ ಬಿಡುಗಡೆ ಮಾಡುವ ಯೋಚನೆ ಇದೆ’ .


     "ಕಬಂಧ' ಇದೊಂದು ವ್ಯವಸಾಯದ ಸುತ್ತ ನಡೆಯುವ ಕಥೆ. ಇವತ್ತಿನ ವೇಗದ ಜೀವನಶೈಲಿಯಲ್ಲಿ ಪ್ಲಾಸ್ಟಿಕ್‍ ಮತ್ತು ಟಾಕ್ಸಿಕ್‍ ಅಂಶಗಳು ನಮ್ಮ ಮೇಲೆ ಸಾಕಷ್ಟು ಪರಿಣಾಮ ಬೀರುತ್ತಿದೆ. ಆದರೆ, ನಾವು ಆ ವಿಷಯವಾಗಿ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ. ಈ ವಿಷಯವಾಗಿ ಕಥೆ ಮಾಡಿಕೊಂಡಿದ್ದೇವೆ. ಕಬಂಧ, ರಾಮಾಯಣದಲ್ಲಿ ಬರುವ ಒಬ್ಬ ರಾಕ್ಷಸನ ಹೆಸರು. ಅವನ ಬಾಹುಗಳಿಂದ ಬಿಡಿಸಿಕೊಳ್ಳುವುದು ಕಷ್ಟ. ಅದಕ್ಕೇ ಕಬಂಧ ಬಾಹು ಎನ್ನಲಾಗುತ್ತದೆ. ಅದೇ ರೀತಿ ಈ ವಿಷಕಾರಿ ವಸ್ತುಗಳೆಂಬ ಕಬಂಧ ಬಾಹುಗಳಿಗೆ ಹೇಗೆ ಸಿಕ್ಕಿಕೊಂಡಿದ್ದೇವೆ ಎಂದು ಚಿತ್ರದಲ್ಲಿ ಹೇಳುವ ಪ್ರಯತ್ನ ಮಾಡಿದ್ದೇವೆ. ಇದೊಂದು ನೈಜ ಘಟನೆ ಆಧಾರಿತ ಚಿತ್ರ. ಎರಡು ಕಾಲಘಟ್ಟದಲ್ಲಿ ನಡೆಯುವ ಕಥೆ ಇದು. ಇದನ್ನು ಸೈಕಲಾಜಿಕಲ್‍ ಹಾರರ್‍ ಚಿತ್ರ ಎನ್ನಬಹುದು’ ಎಂದರು.


     ಚಿತ್ರದ ನಾಯಕ ಪ್ರಸಾದ್‍ ವಸಿಷ್ಠ  "ಇಂತಹ ಕಥೆಗಳನ್ನು ಸಿನಿಮಾಗೆ ಅಳವಡಿಸುವುದು ಕಷ್ಟ. ಈ ಚಿತ್ರದಲ್ಲಿ ನಾನು ನಚಿಕೇತ ಎಂಬ ಜಮೀನ್ದಾರಿ ಕುಟುಂಬದ ಯುವಕನಾಗಿ ಕಾಣಿಸಿಕೊಂಡಿದ್ದೇನೆ. ಅವನ ಸುತ್ತಮುತ್ತ ನಡೆಯುವ ಕಥೆ ಇದು" ಎಂದರು.


ಸಮಾರಂಭದಲ್ಲಿ ನಟ ಪ್ರಶಾಂತ್ ಸಿದ್ದಿ, ಪ್ರಿಯಾಂಕಾ ಮಳಲಿ, ಛಾಯಾಗ್ರಾಹಕ ವಿಷ್ಣುಪ್ರಸಾದ್‍, ಸಂಕಲನಕಾರ ಸತ್ಯಜಿತ್‍ ಸಿದ್ಧಕಟ್ಟಿ ಮುಂತಾದವರು ಹಾಜರಿದ್ದು ಚಿತ್ರ ಮತ್ತು ತಮ್ಮ ಪಾತ್ರದ ಬಗ್ಗೆ ಮಾತನಾಡಿದರು.



Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ