Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬಂಡಿಹಟ್ಟಿಯಲ್ಲಿ ಜಾನಪದ ಕಲಾ ವೈಭವ: ತತ್ವಪದ, ರಂಗಗೀತೆ ಸಂಗೀತ ಸಂಭ್ರಮ

ಬಳ್ಳಾರಿ,ಮಾ,31. : ಶ್ರೀ ಮಾರುತಿ ತೊಗಲುಗೊಂಬೆ ಕಲಾ ಟ್ರಸ್ಟ್ ವತಿಯಿಂದ ಬಳ್ಳಾರಿ ನಗರದ ಬಂಡಿಹಟ್ಟಿಯ ರಾಮನಗರದಲ್ಲಿರುವ ಗಿರಿಜಪ್ಪ ಅವಧೂತರ ಮಠದಲ್ಲಿ ಜಾನಪದ ಕಲಾ ವೈಭವ ಕಾರ್ಯಕ್ರಮ ಅದ್ದೂರಿಯಾಗಿ ನಡೆಯಿತು. ಕಾರ್ಯಕ್ರಮದಲ್ಲಿ ತತ್ವಪದ, ರಂಗಗೀತೆ ಹಾಗೂ ಜಾನಪದ ಸಂಗೀತ ಸಂಭ್ರಮ ಕಾರ್ಯಕ್ರಮ ಅದ್ಧೂರಿಯಿಂದ ನಡೆಯಿತು.


ಕಾರ್ಯಕ್ರಮವನ್ನು ಉದ್ಯಮಿ ಕೊರ್ಲಗುಂದಿ ಬಸವನಗೌಡ ಉದ್ಘಾಟಿಸಿ ಮಾತನಾಡಿ, ಇಂದಿನ ಆಧುನಿಕ ಕಾಲದಲ್ಲಿಯೂ ಜನಪದ ತತ್ವಪದಗಳು ಜನಮನ್ನಣೆ ಗಳಿಸಿರುವುದಕ್ಕೆ ಅವುಗಳಲ್ಲಿರುವ ಗಟ್ಟಿಯಾದ ಸಾಹಿತ್ಯವೇ ಕಾರಣ ಎಂದು ಹೇಳಿದರು. ತತ್ವಪದಗಳಲ್ಲಿ ಮನುಷ್ಯನ ಬದುಕಿನ ಸಾರ, ಮೋಕ್ಷ ಮಾರ್ಗ, ದುಡಿಮೆ, ಧರ್ಮ ಹಾಗೂ ಗುರು-ಶಿಷ್ಯ ಪರಂಪರೆಯ ಮೌಲ್ಯಗಳನ್ನು ಕಾಣಬಹುದು. ಈ ಕಾರಣದಿಂದ ಜನಪದ ತತ್ವಪದಗಳು ಶಾಶ್ವತವಾಗಿ ಬದುಕಿನ ಸತ್ಯವನ್ನು ಸಾರುತ್ತವೆ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಬಳ್ಳಾರಿ ಜಿಲ್ಲಾ ಕಲಾವಿದರ ಸಂಘದ ಅಧ್ಯಕ್ಷ ಯಲ್ಲನಗೌಡ ಶಂಕರ ಬಂಡೆ ಅವರು ಮಾತನಾಡಿ, ಶರೀಫರ ತತ್ವಪದಗಳು ಜಾತಿ-ಧರ್ಮಗಳನ್ನು ಮೀರಿ ಭಾವೈಕ್ಯತೆಯನ್ನು ಬಿಂಬಿಸುತ್ತವೆ. ನಮ್ಮ ಮಣ್ಣಿನ ಜನಪದ ಹಾಗೂ ತತ್ವಪದಗಳಲ್ಲಿ ಅಪಾರ ಶಕ್ತಿ ಅಡಕವಾಗಿದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಕರ್ಚೆಡು ತಿಪ್ಪೇಸ್ವಾಮಿ, ಯುವ ಉದ್ಯಮಿ ವೈ ಮಾರುತಿ (ಸಿರುಗುಪ್ಪ), ಸಪ್ತಸ್ವರ ಸಾಂಸ್ಕೃತಿಕ ಬಯಲಾಟ ಕಲೆ ಟ್ರಸ್ಟ್ ಉಪಾಧ್ಯಕ್ಷೆ ಜಯಲಕ್ಷ್ಮಿ, ಸುಬ್ರಮಣ್ಯಂ (ಸಿರುಗುಪ್ಪ) ಹಾಗೂ ಬೈಲಾಟ ಹಿರಿಯ ಕಲಾವಿದ ಹನುಮವಧೂತ ಭಾಗವಹಿಸಿದ್ದರು. ಟ್ರಸ್ಟ್ ಅಧ್ಯಕ್ಷ ಸುಬ್ಬಣ್ಣ ಸೇರಿದಂತೆ ಟ್ರಸ್ಟ್ ನ ಸದಸ್ಯರು ಉಪಸ್ಥಿತರಿದ್ದರು.

ನಂತರ ಜಡೇಶ್ (ಎಮ್ಮಿಗನೂರು) ಅವರಿಂದ ಜಾನಪದ ಸಂಗೀತ, ಕೆ. ರಮೇಶ್ ತಂಡದಿಂದ ತತ್ವಪದ ಗಾಯನ ಹಾಗೂ ಹನುಮವಧೂತ ತಂಡದಿಂದ ರಂಗಗೀತೆ ಕಾರ್ಯಕ್ರಮಗಳು ಜರುಗಿ, ನೆರೆದ ಪ್ರೇಕ್ಷಕರಿಗೆ ಮನರಂಜನೆ ನೀಡಿದವು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ