Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಇಂದು ಬೆಂಗಳೂರು ನಗರದ ಪ್ರಪ್ರಥಮ ಡಬಲ್ ಡೆಕ್ಕರ್ ಫ್ಲೈ ಓವರ್ ಪ್ರಾಯೋಗಿಕ ಚಾಲನೆ




ಬೆಂಗಳೂರು: ರಾಜಧಾನಿ ಬೆಂಗಳೂರು ನಗರದ ಪ್ರಪ್ರಥಮ ಡಬಲ್ ಡೆಕ್ಕರ್ ಫ್ಲೈ ಓವರ್ ಪ್ರಾಯೋಗಿಕ ಚಾಲನೆ ಇಂದು ಬುಧವಾರ ಅಪರಾಹ್ನ ನಡೆಯಲಿದೆ.

ಬೆಂಗಳೂರಿನ ಸಂಚಾರ ದಟ್ಟಣೆ ಸಮಸ್ಯೆಗೆ ಡಬಲ್ ಡೆಕ್ಕರ್ ಅಸ್ತ್ರ ಬಳಸಿದ್ದು ದಕ್ಷಿಣ ಭಾರತದ ಮೊದಲ ಡಬಲ್ ಡೆಕ್ಕರ್ ಫ್ಲೈ ಓವರ್ ಪ್ರಾಯೋಗಿಕ ಸಂಚಾರಕ್ಕೆ ಇಂದು ಡಿಸಿಎಂ ಡಿ ಕೆ ಶಿವಕುಮಾರ್ ಹಸಿರು ನಿಶಾನೆ ತೋರಿಸಲಿದ್ದಾರೆ.







ಬೆಂಗಳೂರಿನ ಸಂಚಾರ ದಟ್ಟಣೆ ಸಮಸ್ಯೆಗೆ ಡಬಲ್ ಡೆಕ್ಕರ್ ಅಸ್ತ್ರ ಬಳಸಿದ್ದು ದಕ್ಷಿಣ ಭಾರತದ ಮೊದಲ ಡಬಲ್ ಡೆಕ್ಕರ್ ಫ್ಲೈ ಓವರ್ ಪ್ರಾಯೋಗಿಕ ಸಂಚಾರಕ್ಕೆ ಇಂದು ಡಿಸಿಎಂ ಡಿ ಕೆ ಶಿವಕುಮಾರ್ ಹಸಿರು ನಿಶಾನೆ ತೋರಿಸಲಿದ್ದಾರೆ.



ಈ ಹಿಂದೆ ದೇಶದಲ್ಲಿ ಮುಂಬೈ ಜೈಪುರದಲ್ಲಿ ಮಾತ್ರ ಡಬಲ್ ಡೆಕ್ಕರ್ ವ್ಯವಸ್ಥೆ ಇತ್ತು. ಬೆಂಗಳೂರಿನ ಬಹು ನಿರೀಕ್ಷಿತ ಡಬಲ್ ಡೆಕ್ಕರ್ ಫ್ಲೈ ಓವರ್ 3.36 ಕಿಲೋ ಮೀಟರ್‌ ಉದ್ದವಿದೆ. ಇದು ರಾಗಿಗುಡ್ಡ- ಸಿಲ್ಕ್ ಬೋರ್ಡ್ ಜಂಕ್ಷನ್ ವರೆಗೆ ನಿರ್ಮಾಣವಾಗಿದೆ. 449 ಕೋಟಿ ವೆಚ್ಚದಲ್ಲಿ ನಿರ್ಮಾಣ ಆಗಿರುವ ಡಬಲ್ ಡೆಕ್ಕರ್ ಫ್ಲೈ ಓವರ್, ರಾಗಿಗುಡ್ಡ -ಸಿಲ್ಕ್ ಬೋರ್ಡ್ ಜಂಕ್ಷನ್ ಸಂಚಾರ ದಟ್ಟಣೆಯನ್ನು ನಿವಾರಿಸುವಲ್ಲಿ ಪ್ರಮುಖ ಪಾತ್ರ ನಿರ್ವಹಿಸಲಿದೆ. ಸಿಗ್ನಲ್-ಮುಕ್ತ ಕಾರಿಡಾರ್ ಆಗಿ ಪರಿವರ್ತಿಸುವಲ್ಲಿ ಇದು ಮಹತ್ವದ ಪಾತ್ರವಹಿಸಲಿದೆ. ರಾಗಿಗುಡ್ಡದಿಂದ ಇನ್ಮುಂದೆ ಸಿಗ್ನಲ್‌ ಇಲ್ಲದೆ ಸಿಲ್ಕ್ ಬೋರ್ಡ್ ಜಂಕ್ಷನ್​ಗೆ ಪ್ರಯಾಣಿಸಲು ಅವಕಾಶ ಸಿಗಲಿದೆ.

ಈ ಡಬಲ್​​ ಡೆಕ್ಕರ್​ ಫ್ಲೈಒವರ್​​ನಲ್ಲಿ ಮೆಟ್ರೋ ರೈಲು ಹಾಗೂ ವಾಹನ ಸಂಚರಿಸುತ್ತದೆ. ಕೆಳರಸ್ತೆಯಿಂದ ಡಬ್ಬಲ್‌ ಡೆಕ್ಕರ್‌ನ ಮೊದಲ ಫ್ಲೈಓವರ್‌ 8 ಮೀ. ಎತ್ತರದಲ್ಲಿದ್ದರೆ, ಮೆಟ್ರೋ ವಯಡಕ್ಟ್‌ 16 ಮೀ. ಎತ್ತರದಲ್ಲಿದೆ. ಇದೇ ಮೊದಲ ಬಾರಿಗೆ ನಗರದ ಫ್ಲೈಓವರ್ ಮೇಲೆ ಮೆಟ್ರೋ ಲೇನ್ ಹಾದು ಹೋಗಿದೆ. ಎಚ್‌ಎಸ್‌ಆರ್‌ ಲೇಔಟ್‌ ಹಾಗೂ ಹೊಸುರ್ ಲೇಔಟನ್ನು ಇದರಿಂದ ಅಡ್ಡಿಯಿಲ್ಲದೆ ತಲುಬಹುದು.





Advertisement
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ನದಾಫ್-ಪಿಂಜಾರ ಸಂಘ ತಾಲೂಕ ಘಟಕದ ಕಚೇರಿ ಉದ್ಘಾಟನೆ ಟ್ರಕ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ : ಅಕ್ಕ-ತಮ್ಮ ದಾರುಣ ಸಾವುತಾಲೂಕಾ ಅಧಿಕಾರಿಗಳ ಸಾಮಾನ್ಯ ಸಭೆ; ರೈತರಿಗೆ ಬೀಜ, ಗೊಬ್ಬರ ಕೊರತೆಯಾಗದಂತೆ ನೋಡಿಕೊಳ್ಳಿ: ಬಸವರಾಜ್ ಅಡವಿಮಠ್ ಸೂಚನೆಕೊಪ್ಪಳ ಕಾರ್ಯನಿರತ ಪತ್ರಕರ್ತರ ಸಂಘದ ಸಭೆನೂತನ ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಅಭಿನಂದಿಸಿದ ಲಕ್ಷ್ಮೀ  ಹೆಬ್ಬಾಳಕರ.ಸಿದ್ದರಾಮಯ್ಯ ಭೇಟಿ ಮಾಡಿ ಧನ್ಯವಾದ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಸತ್ಕರಿಸಿದ ಯುವ ಮುಖಂಡ  ರಾಹುಲ  ಜಾರಕಿಹೊಳಿ.ಸಚಿವ ಸತೀಶ ಜಾರಕಿಹೊಳಿ, ಕೆಪಿಸಿಸಿ ಅಧ್ಯಕ್ಷ ಹರಿಪ್ರಸಾದ ಬೇಟಿ ಪರಸ್ಪರ ಶುಭ ಕೋರಿಕೆಗ್ಲೋಬಲ್ ಕ್ಯಾಪೆಬಿಲಿಟಿ ಸೆಂಟರ್‌ಗಳ ಬೆಳವಣಿಗೆಗೆ ಉತ್ತೇಜನ*ಶರಣು ಕಾರ್ಯಾಲಯ ಆರಂಭಿಸುವ ಮೂಲಕ ಬಡವರ ಕಣ್ಣಿರು ಒರೆಸುವ ಕಾರ್ಯಕ್ಕೆ ಮುಂದಾಗಿರುವುದು ಶ್ಲಾಘನೀಯ : ಬಳಗಾನೂರು ಶ್ರೀಗಳು,,*