Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕಳಪೆ ಗುಣಮಟ್ಟದ ರಸ್ತೆ ಕಾಮಗಾರಿ ; ಸೂಕ್ತ ಕ್ರಮಕ್ಕೆ ಬಾಪೂಜಿನಗರ್ ವೆಂಕಟೇಶ್ ಒತ್ತಾಯ 

ಬಳ್ಳಾರಿ,ಜ.14.: ಸ್ಥಳೀಯ ಬಾಪೂಜಿ ನಗರ ಸರ್ಕಲ್‌ನಿಂದ  ಪಾತ್ರ ಬೂದಿಹಾಳ್ ರಸ್ತೆಯ ಬ್ರಿಡ್ಜ್‌ ವರೆಗೆ ನಡೆಯುತ್ತಿರುವ ರಸ್ತೆ ನಿರ್ಮಾಣ ಕಾಮಗಾರಿ ಕಳಪೆ ಗುಣಮಟ್ಟದ ಕೆಲಸ ನಡೆಯುತ್ತಿದೆ ಅಧಿಕಾರಗಳು ಕೂಡಲೇ ಗಮನಹರಿಸಿ ಸೂಕ್ತ ಕ್ರಮ ಕೈಗೊಂಡು ಗುಣಮಟ್ಟದ ಕಾಮಗಾರಿಯನ್ನು ಕೈಗೊಳ್ಳುವಂತೆ ನಿರ್ದೇಶಿಸಬೇಕೆಂದು ಮಾಜಿನಗರ ಸಭಾ ಸದಸ್ಯರ ಪುತ್ರ ಹಾಗೂ ಸ್ಥಳೀಯ ಕಾಂಗ್ರೆಸ್ ಮುಖಂಡ ಬಾಪೂಜಿ ನಗರ ವೆಂಕಟೇಶ್ ಅಧಿಕಾರಿಗಳನ್ನು ಒತ್ತಾಯಿಸಿದ್ದಾರೆ.

2020 ಫೆ.24 ರಂದು ಆರಂಭವಾದ ಈ ಕಾಮಗಾರಿಗೆ ಹಲವು ವರ್ಷಗಳಾದರೂ ಇನ್ನೂ ಪೂರ್ಣಗೊಳ್ಳದೆ ಅರ್ಧದಲ್ಲೇ ನಿಂತಿದ್ದು, ತೆರೆದ ಚರಂಡಿ ಹಾಗೂ ಅಪೂರ್ಣ ರಸ್ತೆ ಕೆಲಸದಿಂದ ಸಾರ್ವಜನಿಕರಿಗೆ ತೀವ್ರ ತೊಂದರೆ ಉಂಟಾಗಿದೆ ಎಂದು ಬಾಪೂಜಿ ನಗರದಿಂದ ಆಂದ್ರಾಳ್ ಬ್ರಿಡ್ಜ್ ರಸ್ತೆ ಕಾಮಗಾಲಿಯಲ್ಲಿ ನಡೆಯುತ್ತಿರುವ ಕಳಪೆ ಕೆಲಸದ ಬಗ್ಗೆ ಪಿಡಬ್ಲ್ಯೂಡಿ ಇಲಾಖೆಗೆ ಹಲವು ಬಾರಿ ಮೌಖಿಕವಾಗಿ ದೂರು ಸಲ್ಲಿಸಿದ್ದರೂ ಯಾವುದೇ ರೀತಿಯ ಸ್ಪಂದನೆ ಅಥವಾ ಕ್ರಮ ಕೈಗೊಳ್ಳಲಾಗಿಲ್ಲ ಎಂದು, ಸಾರ್ವಜನಿಕರ ಸುರಕ್ಷತೆಯನ್ನು ನಿರ್ಲಕ್ಷ್ಯಮಾಡುತ್ತಿರುವ ಸಂಬಂಧಪಟ್ಟ ಅಧಿಕಾರಿಗಳು ಮತ್ತು ಗುತ್ತಿಗೆದಾರರ ವಿರುದ್ಧ ತಕ್ಷಣ ಕಠಿಣ ಕ್ರಮ ಕೈಗೊಳ್ಳಬೇಕು ಎಂದು  ಕಾಂಗ್ರೆಸ್  ಮುಖಂಡ ಬಾಪೂಜಿ ನಗರ ವೆಂಕಟೇಶ್, ಮತ್ತು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಸ್ತೆಯ ಎಡ-ಬಲ ಭಾಗಗಳಲ್ಲಿ ಮಣ್ಣು ಮತ್ತು ಕಲ್ಲು ಬಿಂಚುಗಳನ್ನು ಹಾಕಿ ನಿಧಾನಗತಿಯಲ್ಲಿ ಕಾಮಗಾರಿಯನ್ನುನಡೆಸಲಾಗುತ್ತಿದ್ದು. ಇದರಿಂದ ವಾಹನ ಸಂಚಾರಕ್ಕೆ  ಅಡಚಣೆ ಯಾಗುತ್ತಿದೆ ಪಾದಚಾರಿಗಳು ಮತ್ತು ದ್ವಿಚಕ್ರ ವಾಹನ ಪ್ರತಿದಿನ ಈ ರಸ್ತೆಯಲ್ಲಿ ಸಂಚರಿಸಲು ಹರಸಾಹದ ಪಡಬೇಕಿದೆ ದ್ವಿಚಕ್ರ ವಾಹನಗಳು ರಸ್ತೆಯಲ್ಲಿ ಸಾಗುವಾಗ ಜಲ್ಲಿಕಲ್ಲು ಸ್ಕಿಡ್ ಆಗಿ ಹಲವಾರು ಅಪಘಾತಗಳು ನಡೆದಿದೆ ಸಂಬಂಧಿಸಿದ ಅಧಿಕಾರಿಗಳು ಕೂಡಲೇ ಸೂಕ್ತ ಕ್ರಮ ಕೈಗೊಂಡು ಗುಣಮಟ್ಟದ ಕಾಮಗಾರಿ ನಡೆಯುವಂತೆ ನೋಡಿಕೊಳ್ಳಬೇಕು ಮತ್ತು ಆದಷ್ಟು ಶೀಘ್ರದಲ್ಲಿ ರಸ್ತೆ ಕಾಮಗಾರಿಯನ್ನು ಮುಗಿಸಲು ಗುತ್ತಿಗೆದಾರರಿಗೆ ಸೂಚಿಸಬೇಕೆಂದು ಒತ್ತಾಯಿಸಿದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ