Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಹಕ್ಕುಪತ್ರ ವಿತರಣೆಗೆ ಬಡಾವಣೆಯ ಕ್ಷೇಮಾಭಿವೃದ್ಧಿ ಸಂಘ ಒತ್ತಾಯ

ಬಳ್ಳಾರಿ,ಫೆ.05.: ಬಳ್ಳಾರಿ ಮಹಾನಗರದ ೩೬ನೇ ವಾರ್ಡಿನ ಶಾಸ್ತ್ರಿನಗರ ಬಡಾವಣೆಯ ನಿವಾಸಿಗಳಿಗೆ ೯೪ ಸಿಸಿ ಅಡಿಯಲ್ಲಿ ಹಕ್ಕುಪತ್ರಗಳನ್ನು ವಿತರಿಸಬೇಕೆಂದು ಸದರಿ ಬಡಾವಣೆಯ ಕ್ಷೇಮಾಭಿವೃದ್ಧಿ ಸಂಘ ಒತ್ತಾಯಿಸಿದೆ.

ಶಾಸ್ತಿçÃನಗರ ಬಡಾವಣೆಯ ಕ್ಷೇಮಾಭಿವೃದ್ಧಿ ಸಂಘದ ಸಂಚಾಲಕರಾದ ಜೆ.ವಿ.ಮಂಜುನಾಥ್‌ರವರ ನೇತೃತ್ವದಲ್ಲಿ ಬಡಾವಣೆಯ ನಾಗರೀಕರು ಇಂದು ಬಳ್ಳಾ¬ರಿಯ ಜಿಲ್ಲಾಧಿಕಾರಿಗಳಾದ ನಾಗೇಂದ್ರ ಪ್ರಸಾದ್ ಹಾಗೂ ಸಹಾಯಕ ಆಯುಕ್ತರಾದ ಎಚ್.ಡಿ.ರಾಜೇಶ್, ಹಾಗೂ ತಹಸೀಲ್ದಾರರಾದ ರೇಖಾ, ಹಾಗೂ ನಗರ ಶಾಸಕರ ಸರ್ಕಾರಿ ಆಪ್ತ ಸಹಾಯಕರಾದ ಲಕ್ಷ್ಮೀನಾರಾಯಣ ಶಾಸ್ತ್ರಿ, ಇವರುಗಳನ್ನು ಭೇಟಿ ಮಾಡಿ ಮನವಿ ಸಲ್ಲಿಸಿ, ನಾವುಗಳು ಸುಮಾರು ೩೦೦ ಕುಟುಂಬಗಳು ೪೫ ವರ್ಷಕ್ಕೂ ಮೇಲ್ಪಟ್ಟು ಇಲ್ಲಿ ವಾಸಿಸುತ್ತಿದ್ದೇವೆ, ಮಹಾನಗರ ಪಾಲಿಕೆಗೆ ಆಸ್ತಿ ತೆರಿಗೆ, ವಿದ್ಯುತ್ ತೆರಿಗೆ, ನೀರಿನ ತೆರಿಗೆ, ಒಳಚರಂಡಿ ತೆರಿಗೆ, ಹಾಗೂ ಇತರ ತೆರಿಗೆಗಳನ್ನು ಕಟ್ಟುತ್ತಿದ್ದರು ಸಹ ನಮಗೆ ೯೪ ಸಿಸಿ ಅಡಿಯಲ್ಲಿ ಹಕ್ಕು ಪತ್ರಗಳನ್ನು ನೀಡಿರುವುದಿಲ್ಲ, ಆದ್ದರಿಂದ ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿ, ಕಾನೂನಾತ್ಮಕವಾಗಿ ಕೂಲಂಕುಶವಾಗಿ ಪರಿಶೀಲಿಸಿ ಶೀಘ್ರವಾಗಿ ನಮ್ಮ ಮನೆಗಳಿಗೆ ಹಕ್ಕುಪತ್ರ (ಪಟ್ಟಗಳನ್ನು) ವಿತರಿಸಬೇಕೆಂದು ಮನವಿ ಮಾಡಿದರು.

ಈ ಸಂದರ್ಭದಲ್ಲಿ ಶಾಸ್ತಿç ನಗರ ಬಡಾವಣೆ ನಿವಾಸಿಗಳಾದ ಎರಿಸ್ವಾಮಿ, ಶಾಂತಮೂರ್ತಿ ಸ್ವಾಮಿ, ಈಶ್ವರಪ್ಪ, ಮ-ರಿಸ್ವಾಮಿ, ಅಂಗಡಿ ಬಸವ. ಶರಣಯ್ಯ ಸ್ವಾಮಿ, ಹುಸೇನ್ ಭಾಷಾ, ಉಪ್ಪಾರ ರಂಗಸ್ವಾಮಿ, ಅಜಾರ್‌ಬಾಷಾ, ಮೆಡಿಕಲ್ ಸ್ಟೋರ್ ಶಿವು, ಈರಣ್ಣ, ಚಂದ್ರಶೇಖರ್, ಸರಸ್ವತಿ, ರೇಣುಕಮ್ಮ, ಜಯಶ್ರೀ, ವನಜ, ಮಲ್ಲಮ್ಮ,ಶಾಂಭವಿ, ಜಯಮ್ಮ, ಶಾಂತಿ, ದುರ್ಗಮ್ಮ, ಗೀತಾ, ಲೀಲಾವತಿ, ರೇಣುಕಮ್ಮ, ಲಕ್ಷ್ಮಿ, ಶಿವಮ,್ಮ ಮುಂತಾದವರು ಉಪಸ್ಥಿತ¬ರಿದ್ದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ