Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬಸವಾದಿ ಶರಣರ ತತ್ವಾದರ್ಶಗಳು ವಿಶ್ವವ್ಯಾಪಿಯಾಗಲಿ: ಕಡಕೋಳ ಶ್ರೀಗಳು

ಯರಗಟ್ಟಿ: ಜಗತ್ತಿನಲ್ಲಿಯೇ ಮೊತ್ತಮೊದಲು ಸಮಾನತೆ, ಸಹಬಾಳ್ವೆ, ಕಾಯಕ, ದಾಸೋಹದಂತಹ ಸಾರ್ವಕಾಲಿಕ ಮಾನವೀಯ ಮೌಲ್ಯಗಳನ್ನು ಜಾರಿಗೊಳಿಸಿದ ಬಸವಾದಿ ಶರಣರ ತತ್ವಾದರ್ಶಗಳು ವಿಶ್ವವ್ಯಾಪಿಯಾಗಲಿ ಎಂದು ಕಡಕೋಳದ ವಿರಕ್ತಮಠದ ಶ್ರೀ ಮ.ನಿ.ಪ್ರ.ಸ್ವ. ಸಚ್ಚಿದಾನಂದ ಮಹಾಸ್ವಾಮಿಗಳು ಹೇಳಿದರು.

ಪಟ್ಟಣದ ಮಹಾಂತ ದುರದುಂಡೀಶ್ವರ ಮಠದಲ್ಲಿ ಶ್ರಾವಣ ಮಾಸದ ಮೂರನೆಯ ಶಿವಾನುಭವಗೋಷ್ಠಿ ಹಾಗೂ ದಾನಮ್ಮದೇವಿ ವಿವಾಹ ಮಹೋತ್ಸವ ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ವಹಿಸಿ ಆಶೀರ್ವಚನ ನೀಡಿದ ಅವರು, ಶರಣರು ಒಂದಿಲ್ಲೊಂದು ಕಾಕಯದಲ್ಲಿ ನಿರತರಾಗಿದ್ದು ಪ್ರತಿಫಲವನ್ನು ಪ್ರಸಾದವೆಂದು ಭಾವಿಸುತ್ತಿದ್ದರು. ಹೆಚ್ಚಿನದನ್ನು ದಾಸೋಹಕ್ಕೆ ಅರ್ಪಿಸುತ್ತಿದ್ದರು. ಸಂಗ್ರಹಬುದ್ಧಿ ಇಲ್ಲದ ಕಾರಣ ಅವರ ಬದುಕು ನೆಮ್ಮದಿಯುತವಾಗಿತ್ತು ಎಂದು ಪ್ರತಿಪಾದಿಸಿದರು.

ಇದಕ್ಕೂ ಮೊದಲು ಪಟ್ಟಣದ ಶ್ರೀ ಸಿ.ಎಂ. ಮಾಮನಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ಪ್ರಾಧ್ಯಾಪಕ ಡಾ. ರಾಜಶೇಖರ ಬಿರಾದಾರ ಅವರು ’ಕಾಯಕಯೋಗಿ ನುಲಿಯ ಚಂದಯ್ಯ ಅವರ ಜೀವನ ಹಾಗೂ ಸಾಧನೆ’ಗಳನ್ನು ಕುರಿತು ಉಪನ್ಯಾಸ ನೀಡಿದರು.

ಇತ್ತೀಚೆಗೆ ಕೇಂದ್ರ ಲೋಕ ಸೇವಾ ಆಯೋಗದ ಪರೀಕ್ಷೆಯಲ್ಲಿ ಉತ್ತೀರ್ಣರಾದ ಕೊಡ್ಲಿವಾಡದ ಹನುಮಂತ ನಂದಿ ಹಾಗೂ ಮೂರು ಕಾದಂಬರಿಗಳು ಸೇರಿದಂತೆ ನೂರಾರು ಕವಿತೆಗಳನ್ನು ರಚಿಸಿ ಸಾರಸ್ವತ ಲೋಕದಲ್ಲಿ ಮಿನುಗುತ್ತಿರುವ ಕಡಬಿಯ ಅಂಕಿತಾ ಹುಂಡೇಕಾರ ಅವರನ್ನು ಸನ್ಮಾನಿಸಲಾಯಿತು.

 

ಅಕ್ಕನ ಬಳಗದ ಅಧ್ಯಕ್ಷರಾದ ಉಮಾದೇವಿ ಪೂರ್ವಿಮಠ ಅಧ್ಯಕ್ಷತೆ ವಹಿಸಿದ್ದರು. ಓಂ ಶಾಂತಿಯ ಜಯಶ್ರೀ ಅಕ್ಕ, ಹಿರಿಯರಾದ ಅಶೋಕ ಹಾದಿಮನಿ, ಮಹಾಂತೇಶ ಜಕಾತಿ, ರಾಜೇಂದ್ರ ವಾಲಿ, ಗಜಾನನ ಚಿನಗುಡಿ, ಶಿವಾನಂದ ಪಟ್ಟಣಶೆಟ್ಟಿ ಸೇರಿದಂತೆ ದಾನಮ್ಮ ದೇವಿಯ ಅಪಾರ ಭಕ್ತವೃಂದದವರು ಸಡಗರದಿಂದ ದಾನಮ್ಮ ದೇವಿ ಹಾಗೂ ಸೋಮನಾಥರ ವಿವಾಹ ಮಹೋತ್ಸವದಲ್ಲಿ ಭಾಗವಹಿಸಿದರು. ಶಿಕ್ಷಕಿಯರಾದ ಪೂರ್ಣಿಮಾ ಕತ್ತಿಶೆಟ್ಟಿಯವರು ಕಾರ್ಯಕ್ರಮವನ್ನು ನಿರೂಪಿಸಿದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ