Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬಸವಣ್ಣನವರು ಕಾಯಕ, ದಾಸೋಹ, ಸಮಾನತೆಯ ಹರಿಕಾರರು: ತೋಂಟದ ಸಿದ್ಧರಾಮ ಶ್ರೀಗಳು

ಗದಗ,ಏಪ್ರಿಲ್​ 08:  : ಬಸವಾದಿ ಶಿವಶರಣರು ಜಾತಿ, ವರ್ಗ, ವರ್ಣ, ಲಿಂಗಭೇದವನ್ನು ತೊಡೆದು ಹಾಕಿ ಸರ್ವಸಮಾನತೆಯ ಸಮಾಜವನ್ನು ನಿರ್ಮಾಣ ಮಾಡಬೇಕೆಂದು
ಕನಸು ಕಂಡಿದ್ದರು. ಬಸವಣ್ಣನವರು ಕಾಯಕ, ದಾಸೋಹ, ಸಮಾನತೆಯ ಹರಿಕಾರರು ಎಂದು ಡಾ. ತೋಂಟದ ಸಿದ್ಧರಾಮ ಶ್ರೀಗಳು ಹೇಳಿದರು.

ಲಿಂಗಾಯತ ಪ್ರಗತಿಶೀಲ ಸಂಘದ ೨೬೮೭ನೆಯ ಶಿವಾನುಭವ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಪೂಜ್ಯ ಡಾ. ತೋಂಟದ ಸಿದ್ಧರಾಮ ಮಹಾಸ್ವಾಮಿಗಳು ಮಾತನಾಡಿ, ಜಾಗತಿಕ ಇತಿಹಾಸದಲ್ಲಿ ದಾಖಲೆಯಾಗುವಂತಹ ವಿನೂತನ ಸಮಾಜೋಧಾರ್ಮಿಕ ಚಳುವಳಿಯನ್ನು ಬಸವಾದಿ ಶಿವಶರಣರು ನಡೆಸಿದರು. ಸಾಮಾಜೋಧಾರ್ಮಿಕ ಚಳುವಳಿ ಜಾಗತಿಕ ಇತಿಹಾಸದಲ್ಲಿ ಸುವರ್ಣಾಕ್ಷರಗಳಿಂದ ಬರೆದಿಡುವಂತಹ ಕಾಲಘಟ್ಟ. ಸಕಲ ಜೀವಾತ್ಮರಿಗೆ ಲೇಸನೆ ಬಯಸುವ ನಮ್ಮ ಕೂಡಲಸಂಗನ ಶರಣರೇ ಕುಲಜರು ಎಂದು ಉಲ್ಲೇಖಿಸಿ ಮಾತನಾಡಿದ ಶ್ರೀಗಳು ಸಮಾಜದಲ್ಲಿ ಸಕಲ ಜೀವಿಗಳಲ್ಲಿ ಶ್ರೇಷ್ಠತೆಯನ್ನು ಬಯಸುವ ಪ್ರತಿಯೊಬ್ಬ ವ್ಯಕ್ತಿಯೂ ಶರಣರೇ. ಎನಗಿಂತ ಕಿರಿಯರಿಲ್ಲ, ಶಿವಭಕ್ತಿರಿಗಿಂತ ಹಿರಿಯರಿಲ್ಲ ಎಂದು ಬಸವಣ್ಣನವರು ಎಲ್ಲರಲ್ಲಿಯೂ ಸಮಾನತೆಯನ್ನು ಕಂಡಿದ್ದಾರೆ ಎಂದು ಶ್ರೀಗಳು ಹೇಳಿದರು.

ಡಾ. ರಮೇಶ ಕಲ್ಲನಗೌಡರ ಪ್ರಾಚಾರ್ಯರು, ಸ.ಪ್ರ.ದ. ಮಹಾವಿದ್ಯಾಲಯ, ಮುಳಗುಂದ ಅವರು ಉಪನ್ಯಾಸ ನೀಡಿ, ೧೨ ನೇ ಶತಮಾನ ಜಗತ್ತಿನಲ್ಲಿ ಅದ್ಭುತ ಕ್ರಾಂತಿಗೆ ಸಾಕ್ಷಿಯಾದ ಕಾಲ. ವಿಶ್ವಗುರು ಬಸವಣ್ಣನವರು ಶ್ರೇಷ್ಠ ದಾರ್ಶನಿಕರಲ್ಲಿ ಒಬ್ಬರು. ಅತ್ಯಂತ ಪ್ರಿತ್ಯಾಧಾರದಿಂದ ಡೋಹರ ಕಕ್ಕಯ್ಯನವರನ್ನು ಬಸವಣ್ಣನವರು ತಮ್ಮ ವಚನಗಳಲ್ಲಿ ಸ್ಮರಿಸಿದ್ದಾರೆ.

ಬಸವಾದಿ ಶಿವಶರಣರು ಕಾಯಕ, ದಾಸೋಹ, ಸಮಾನತೆ ತತ್ತ್ವಗಳನ್ನು ಸಾರಿದ್ದಾರೆ. ಡೋಹರ ಕಕ್ಕಯ್ಯನವರು ದಾಸೋಹಂಭಾವಿಗಳು, ಕಾಯಕನಿಷ್ಠರು ಆಗಿದ್ದರು ಎಂದು ಮಾತನಾಡಿದರು.

ಕರ್ನಾಟಕ ಸಾಹಿತ್ಯ ಅಕಾಡೆಮಿಗೆ ಸದಸ್ಯರಾಗಿ ನೇಮಕಗೊಂಡ ನಿಮಿತ್ತ ಡಾ. ಅರ್ಜುನ ಗೊಳಸಂಗಿ ಸಾಹಿತಿಗಳು ಹುಲಕೋಟಿ, ಕರ್ನಾಟಕ ಜಾನಪದ ಅಕಾಡೆಮಿಗೆ ಸದಸ್ಯರಾಗಿ ನೇಮಕಗೊಂಡ ನಿಮಿತ್ತ ಶಂಕ್ರಣ್ಣ ಸಂಕಣ್ಣವರ ಜಾನಪದ ಕಲಾವಿದರು ಕೊತಬಾಳ, ಕರ್ನಾಟಕ ಬಂಜಾರ ಅಕಾಡೆಮಿಗೆ ಸದಸ್ಯರಾಗಿ
ನೇಮಕಗೊಂಡ ನಿಮಿತ್ತ ಶ್ರೀಮತಿ ಸಾವಿತ್ರಿಬಾಯಿ ಲಮಾಣಿ ಜನಪದ ಕಲಾವಿದರು ಪಾಪನಾಶಿ ತಾಂಡೆ ಅವರನ್ನು ಶ್ರೀಗಳು ಸಂಮಾನಿಸಿದರು. ಮೋಹನ ಗಜಾಕೋಶ ಕಾರ್ಯದರ್ಶಿ ಡೋಹರ ಸಮಾಜ ಗದಗ ಅವರು ಮುಖ್ಯಅತಿಥಿಗಳಾಗಿ ಭಾಗವಹಿಸಿದ್ದರು.

ಶ್ರೀಮತಿ ಸುಮತಿ ಮುರಗೋಡ ಪಿ.ಪಿ.ಜಿ. ಸಂಗೀತ ಮಹಾವಿದ್ಯಾಲಯ ಗದಗ ವಚನಸಂಗೀತ ಹಾಡಿದರು. ಗುರುನಾಥ ಸುತಾರ ತಂಡದವರು ತಬಲಾ ಮತ್ತು
ಹಾರ್ಮೋನಿಯಂ ಸಾಥ್ ನೀಡಿದರು. ಧರ್ಮಗ್ರಂಥ ಪಠಣವನ್ನು ಶ್ರೀಗಿರಿ ಗಜಾನನ ವೆರ್ಣೇಕರ, ವಚನ ಚಿಂತನೆಯನ್ನು ಪೂಜಾ ಗಜಾನನ ವೆರ್ಣೇಕರಮಾಡಿದರು.

ಶಿವಾನುಭವದ ದಾಸೋಹ ಭಕ್ತಿಸೇವೆಯನ್ನು ವಹಿಸಕೊಂಡಿದ್ದ  ಚನ್ನಬಸಪ್ಪ ಅಂಗಡಿ ಗದಗ ಅವರನ್ನು ಪೂಜ್ಯರು ಸಂಮಾನಿಸಿದರು.  ಸರ್ವರನ್ನು ಲಿಂಗಾಯತ ಪ್ರಗತಿಶೀಲ ಸಂಘದ ಅಧ್ಯಕ್ಷರಾದ ಶೇಖಣ್ಣ ಕಳಸಾಪೂರ ಸ್ವಾಗತಿಸಿದರು. ರತ್ನಕ್ಕ ಪಾಟೀಲ ಕಾರ್ಯಕ್ರಮ ನಿರೂಪಿಸಿದರು.

ಉಪಾಧ್ಯಕ್ಷ ಬಾಲಚಂದ್ರ ಭರಮಗೌಡರ, ರೇಣುಕಾ ವಿ. ಕರೇಗೌಡ್ರ, ಕಾರ್ಯದರ್ಶಿ ಮಹೇಶ ಗಾಣಿಗೇರ, ಸಹಕಾರ್ಯದರ್ಶಿ ವಿಜಯಕುಮಾರ ಹಿರೇಮಠ, ವಿರುಪಾಕ್ಷಪ್ಪ ಅರಳಿ, ಸಂಘಟನಾ ಕಾರ್ಯದರ್ಶಿ ಅಶೋಕ ಹಾದಿ, ಕೋಶಾಧ್ಯಕ್ಷ ಸುರೇಶ ನಿಲೂಗಲ್, ಶಿವಾನುಭವ ಸಮಿತಿ ಚೇರಮನ್‌ರಾದ ವಿವೇಕಾನಂದಗೌಡ ಪಾಟೀಲ ಉಪಸ್ಥಿತರಿದ್ದರು.

 
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ