Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಒಳ್ಳೆಯ ವಿಚಾರ ಮತ್ತು ವೈಚಾರಿಕ ಚಿಂತನೆಯಿಂದ ಮಾತ್ರ ಸಾಮಾಜಿಕ ಪರಿವರ್ತನೆ ಸಾಧ್ಯ : ಪ್ರೊ.ಕಡ್ಡಿ

ಜಮಖಂಡಿ: ಮೇಲ್ವರ್ಗದ ಜನರು ತಳಸಮುದಾಯದ ಜನರಿಗೆ ದೇವಾಲಯ ಪ್ರವೇಶಕ್ಕೆ ನಿಷೇಧ ಹೇರಿದ್ದರ ವಿರುದ್ಧ ೧೨ನೇ ಶತಮಾನದಲ್ಲಿ ಬಸವಣ್ಣನವರು ಪ್ರತಿಭಟಿಸಲಿಲ್ಲ. ಬದಲಾಗಿ ದೇಹವೇ ದೇಗುಲ, ಆತ್ಮವೇ ದೇವರು ಎಂಬ ಶರಣ ಸಿದ್ಧಾಂತದ ತಿಳಿವಳಿಕೆ ನೀಡಿ ಧೈರ್ಯ ತುಂಬಿದ್ದರು ಎಂದು ಬಸವಜ್ಯೋತಿ ಶಿಕ್ಷಣ ಸಂಸ್ಥೆಗಳ ಆಡಳಿತಾಧಿಕಾರಿ ಪ್ರೊ.ಬಸವರಾಜ ಕಡ್ಡಿ ಹೇಳಿದರು.

  ಕನ್ನಡ ಸಾಹಿತ್ಯ ಪರಿಷತ್ತಿನ ರಾಜ್ಯ, ಜಿಲ್ಲಾ ಮತ್ತು ತಾಲ್ಲೂಕು ಘಟಕದ ಆಶ್ರಯದಲ್ಲಿ ತಾಲ್ಲೂಕಿನ ಹುನ್ನೂರ ಗ್ರಾಮದ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ತಾರವ್ವಗೌಡ್ತಿ ಬಿರಾದಾರ ಹಾಗೂ ಸಾತವೀರಯ್ಯ ಅಕ್ಕಿ ಅವರ ಸ್ಮರಣಾರ್ಥ ಶನಿವಾರ ಆಯೋಜಿಸಿದ್ದ ದತ್ತಿ ಉಪನ್ಯಾಸ ಕಾರ್ಯಕ್ರಮದಲ್ಲಿ ಅವರು ಶರಣ ಸಿದ್ಧಾಂತ ಕುರಿತು ವಿಶೇಷುಪನ್ಯಾಸ ನೀಡಿದರು.

  ಒಳ್ಳೆಯ ವಿಚಾರ ಮತ್ತು ವೈಚಾರಿಕ ಚಿಂತನೆಯಿAದ ಮಾತ್ರ ಸಾಮಾಜಿಕ ಪರಿವರ್ತನೆ ಸಾಧ್ಯ ಎಂಬ ವಿಶ್ವಾದಿಂದ ಅನುಭವ ಮಂಟಪ ನಿರ್ಮಿಸಿ ಎಲ್ಲ ವರ್ಗದ ಶರಣ-ಶರಣೆಯರಿಗೆ ಅನುಭವ ಹಂಚಿಕೊಳ್ಳಲು ಬಸವಣ್ಣನವರು ಅವಕಾಶ ಮಾಡಿಕೊಟ್ಟಿದ್ದರು. ಸಮಾಜಕ್ಕಾಗಿ ತಮ್ಮ ಕುಲವನ್ನು ತ್ಯಜಿಸಿ ರಾಜಪ್ರಭುತ್ವವನ್ನು ಎದುರು ಹಾಕಿಕೊಂಡಿದ್ದರು ಎಂದರು.

  ಬಸವಜ್ಯೋತಿ ಪದವಿಪೂರ್ವ ಕಾಲೇಜಿನ ಪ್ರಾಚಾರ್ಯ ಡಾ.ಟಿ.ಪಿ. ಗಿರಡ್ಡಿ ಮಾತನಾಡಿ, ಹುಟ್ಟಿದ ಊರಿನಲ್ಲಿ ಬದುಕು ಕಟ್ಟಿಕೊಳ್ಳಲು ಆಗದಿದ್ದರೆ ಜಗತ್ತಿನ ಯಾವ ಮೂಲೆಯಲ್ಲೂ ಬದುಕು ಕಟ್ಟಿಕೊಳ್ಳಲು ಸಾಧ್ಯವಿಲ್ಲ. ಎಷ್ಟೇ ಎತ್ತರಕ್ಕೆ ಬೆಳೆದು ಎಲ್ಲಿಯೇ ನೆಲೆಸಿದ್ದರೂ ಹುಟ್ಟಿದ ಊರಿನಲ್ಲಿಯೇ ಮೂಲ ಬೇರುಗಳು ಇರಬೇಕು ಎಂಬುದನ್ನು ತಾರವ್ವಗೌಡ್ತಿ ಬಿರಾದಾರ ಅವರ ಬದುಕಿನಿಂದ ಕಲಿಯಬೇಕಾದ ಪಾಠವಾಗಿದೆ ಎಂದರು.

  ಹಿರಿಯ ವಕೀಲ ಡಾ.ಟಿ.ಪಿ. ಬಾಂಗಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಕಸಾಪ ತಾಲ್ಲೂಕು ಘಟಕದ ಅಧ್ಯಕ್ಷ ಸಂತೋಷ ತಳಕೇರಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸಾಹಿತಿ ಡಾ.ವಾದಿರಾಜ ದೇಶಪಾಂಡೆ ಮಾತನಾಡಿದರು.

  ದತ್ತಿದಾನಿಗಳ ಪರವಾಗಿ ಡಾ.ಭರತ ಬಿರಾದಾರ, ಭಾಗೀರಥಿ ಅಕ್ಕಿ ಇದ್ದರು. ನಿವೃತ್ತ ಶಿಕ್ಷಣಾಧಿಕಾರಿ ಎಸ್.ಎಚ್. ಕಳಸಣ್ಣಿ ಹಾಗೂ ನಿವೃತ್ತ ಶಿಕ್ಷಕ ಗುರುನಾಥ ಸುತಾರ ಅವರನ್ನು ಸನ್ಮಾನಿಸಲಾಯಿತು. ಪೂಜಾ ಭಜಂತ್ರಿ ಪ್ರಾರ್ಥನೆ ಗೀತೆ ಹಾಡಿದರು. ಶಿಕ್ಷಕ ಬಿ.ಎಸ್. ಹಿರೇಮಠ ನಿರೂಪಿಸಿದರು. ಲಕ್ಷಿö್ಮÃ ಮಗದುಮ ವಂದಿಸಿದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ