Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬಯಲಾಟವು ಗ್ರಾಮೀಣ ಸಂಸ್ಕೃತಿಯ ಸೊಬಗು : ಎಂ.ಮೃತ್ಯುಂಜಯ ಸ್ವಾಮಿ

ಸಿರುಗುಪ್ಪ, ಮಾ.14::..ತಾಲೂಕಿನ ಬಂಡ್ರಾಳ್ ಗ್ರಾಮದಲ್ಲಿ ಶ್ರೀ ಪೊಂಪಯ್ಯ ತಾತನವರ 34ನೇ ಪುಣ್ಯಸ್ಮರಣೆಯ ಅಂಗವಾಗಿ ಶ್ರೀ ಪೊಂಪಯ್ಯತಾತ ಸೇವಾ ಟ್ರಸ್ಟ್ ವತಿಯಿಂದ “ಪಾಂಡು ವಿಜಯ” ಅರ್ಥಾತ್ “ಕೀಚಕನ ವಧೆ” ಬಯಲಾಟ ನಾಟಕವನ್ನು ಗುರುವಾರ ಸಂಜೆ ಆಯೋಜಿಸಲಾಯಿತು.

ಸಂಜೆ 8.30 ಗಂಟೆಗೆ ಆರಂಭವಾದ ಬಯಲಾಟ ಕಾರ್ಯಕ್ರಮವು ಗ್ರಾಮಸ್ಥರ ಹಾಗೂ ಸದ್ಭಕ್ತರ ಸಹಕಾರದಿಂದ ಭಕ್ತಿಪೂರ್ವಕವಾಗಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬಂಡ್ರಾಳ್ ಗ್ರಾಮದ ಎಂ. ಮೃತ್ಯುಂಜಯ ಸ್ವಾಮಿ (ವಕೀಲರು) ವಹಿಸಿದ್ದರು.

ಅವರು ಮಾತನಾಡಿ, ಬಯಲಾಟವು ಬಳ್ಳಾರಿ ಜಿಲ್ಲೆಯ ಜನರಿಗೆ ಬಹಳ ಮೆಚ್ಚಿನ ಜನಪದ ಕಲೆಯಾಗಿದ್ದು ಸಮಾಜವನ್ನು ತಿದ್ದುವ ಶಕ್ತಿ ಹೊಂದಿದೆ ಎಂದು ಹೇಳಿದರು. ಬಯಲಾಟಗಳ ಮೂಲಕ ಗ್ರಾಮೀಣ ಭಾಗದ ಅನಕ್ಷರಸ್ಥ ಪ್ರತಿಭಾವಂತ ಕಲಾವಿದರು ಹೊರಹೊಮ್ಮಿದ್ದು, ಈ ಕಲೆಯನ್ನು ಉಳಿಸಿ ಬೆಳೆಸಲು ಸರ್ಕಾರದಿಂದ ಹೆಚ್ಚಿನ ಪ್ರೋತ್ಸಾಹ ದೊರೆಯಬೇಕೆಂದು ಅಭಿಪ್ರಾಯಪಟ್ಟರು. ಶ್ರೀ ಪೊಂಪಯ್ಯ ತಾತನವರ ಪುಣ್ಯಸ್ಮರಣೆಯ ಅಂಗವಾಗಿ ಬಯಲಾಟ ಆಯೋಜಿಸಿರುವುದು ಸಂತಸದ ಸಂಗತಿಯಾಗಿದೆ ಎಂದು ಹೇಳಿದರು.

ಕಾರ್ಯಕ್ರಮವನ್ನು ಸಮಾಜ ಸೇವಕರೂ ಉದ್ಯಮಿಗಳೂ ಆದ ಆರ್. ಸದಾಶಿವ ಅವರು ಜ್ಯೋತಿ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಬಯಲಾಟಗಳಲ್ಲಿ ಮಹಾಭಾರತ ಹಾಗೂ ರಾಮಾಯಣದಂತಹ ಐತಿಹಾಸಿಕ ಕಥೆಗಳು ಜೀವಂತವಾಗಿ ಮೂಡಿ ಬರುತ್ತವೆ. ಇವು ಜನರ ಮನಸ್ಸಿನ ಮೇಲೆ ದೊಡ್ಡ ಪ್ರಭಾವ ಬೀರುತ್ತವೆ. ಆದ್ದರಿಂದ ಎಲ್ಲರೂ ಬಯಲಾಟಗಳಿಗೆ ಪ್ರೋತ್ಸಾಹ ನೀಡುವ ಮೂಲಕ ಈ ಕಲೆಯನ್ನು ಉಳಿಸಿ ಬೆಳೆಸಬೇಕೆಂದು ಕರೆ ನೀಡಿದರು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ನಿವೃತ್ತ ಶಿಕ್ಷಕರಾದ ನರಸಿಂಹ ಜೋಶಿ ಮತ್ತು ವೆಂಕಟೇಶ್ ಭಾಗವಹಿಸಿದ್ದರು.

ಈ ಸಂದರ್ಭದಲ್ಲಿ ಊರಿನ ಪ್ರಮುಖರಾದ ಮರೆಗೌಡ (ತಾ.ಪಂ. ಮಾಜಿ ಸದಸ್ಯರು), ಹನುಮಯ್ಯ, ಸಣ್ಣಪ್ಪ, ದಬಾಡಿ ಮಲ್ಲಯ್ಯ, ವೆಂಕಟೇಶ್ ರೆಡ್ಡಿ, ಬಸವರಾಜ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ರಾತ್ರಿ 8.30 ಗಂಟೆಯಿಂದ ಬೆಳಗಿನ ಜಾವ 6 ಗಂಟೆಯವರೆಗೆ ನಡೆದ “ಪಾಂಡು ವಿಜಯ (ಕೀಚಕನ ವಧೆ)” ಬಯಲಾಟವನ್ನು ಬಂಡ್ರಾಳ್ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳಿಂದ ಆಗಮಿಸಿದ ಸಾವಿರಕ್ಕೂ ಹೆಚ್ಚು ಪ್ರೇಕ್ಷಕರು ಕಣ್ತುಂಬಿಕೊಂಡರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ