Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬಯಲಾಟವು ಗ್ರಾಮೀಣ ಸಂಸ್ಕೃತಿಯ ಸೊಬಗು : ಎಂ.ಮೃತ್ಯುಂಜಯ ಸ್ವಾಮಿ

ಸಿರುಗುಪ್ಪ, ಮಾ.14::..ತಾಲೂಕಿನ ಬಂಡ್ರಾಳ್ ಗ್ರಾಮದಲ್ಲಿ ಶ್ರೀ ಪೊಂಪಯ್ಯ ತಾತನವರ 34ನೇ ಪುಣ್ಯಸ್ಮರಣೆಯ ಅಂಗವಾಗಿ ಶ್ರೀ ಪೊಂಪಯ್ಯತಾತ ಸೇವಾ ಟ್ರಸ್ಟ್ ವತಿಯಿಂದ “ಪಾಂಡು ವಿಜಯ” ಅರ್ಥಾತ್ “ಕೀಚಕನ ವಧೆ” ಬಯಲಾಟ ನಾಟಕವನ್ನು ಗುರುವಾರ ಸಂಜೆ ಆಯೋಜಿಸಲಾಯಿತು.

ಸಂಜೆ 8.30 ಗಂಟೆಗೆ ಆರಂಭವಾದ ಬಯಲಾಟ ಕಾರ್ಯಕ್ರಮವು ಗ್ರಾಮಸ್ಥರ ಹಾಗೂ ಸದ್ಭಕ್ತರ ಸಹಕಾರದಿಂದ ಭಕ್ತಿಪೂರ್ವಕವಾಗಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬಂಡ್ರಾಳ್ ಗ್ರಾಮದ ಎಂ. ಮೃತ್ಯುಂಜಯ ಸ್ವಾಮಿ (ವಕೀಲರು) ವಹಿಸಿದ್ದರು.

ಅವರು ಮಾತನಾಡಿ, ಬಯಲಾಟವು ಬಳ್ಳಾರಿ ಜಿಲ್ಲೆಯ ಜನರಿಗೆ ಬಹಳ ಮೆಚ್ಚಿನ ಜನಪದ ಕಲೆಯಾಗಿದ್ದು ಸಮಾಜವನ್ನು ತಿದ್ದುವ ಶಕ್ತಿ ಹೊಂದಿದೆ ಎಂದು ಹೇಳಿದರು. ಬಯಲಾಟಗಳ ಮೂಲಕ ಗ್ರಾಮೀಣ ಭಾಗದ ಅನಕ್ಷರಸ್ಥ ಪ್ರತಿಭಾವಂತ ಕಲಾವಿದರು ಹೊರಹೊಮ್ಮಿದ್ದು, ಈ ಕಲೆಯನ್ನು ಉಳಿಸಿ ಬೆಳೆಸಲು ಸರ್ಕಾರದಿಂದ ಹೆಚ್ಚಿನ ಪ್ರೋತ್ಸಾಹ ದೊರೆಯಬೇಕೆಂದು ಅಭಿಪ್ರಾಯಪಟ್ಟರು. ಶ್ರೀ ಪೊಂಪಯ್ಯ ತಾತನವರ ಪುಣ್ಯಸ್ಮರಣೆಯ ಅಂಗವಾಗಿ ಬಯಲಾಟ ಆಯೋಜಿಸಿರುವುದು ಸಂತಸದ ಸಂಗತಿಯಾಗಿದೆ ಎಂದು ಹೇಳಿದರು.

ಕಾರ್ಯಕ್ರಮವನ್ನು ಸಮಾಜ ಸೇವಕರೂ ಉದ್ಯಮಿಗಳೂ ಆದ ಆರ್. ಸದಾಶಿವ ಅವರು ಜ್ಯೋತಿ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಬಯಲಾಟಗಳಲ್ಲಿ ಮಹಾಭಾರತ ಹಾಗೂ ರಾಮಾಯಣದಂತಹ ಐತಿಹಾಸಿಕ ಕಥೆಗಳು ಜೀವಂತವಾಗಿ ಮೂಡಿ ಬರುತ್ತವೆ. ಇವು ಜನರ ಮನಸ್ಸಿನ ಮೇಲೆ ದೊಡ್ಡ ಪ್ರಭಾವ ಬೀರುತ್ತವೆ. ಆದ್ದರಿಂದ ಎಲ್ಲರೂ ಬಯಲಾಟಗಳಿಗೆ ಪ್ರೋತ್ಸಾಹ ನೀಡುವ ಮೂಲಕ ಈ ಕಲೆಯನ್ನು ಉಳಿಸಿ ಬೆಳೆಸಬೇಕೆಂದು ಕರೆ ನೀಡಿದರು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ನಿವೃತ್ತ ಶಿಕ್ಷಕರಾದ ನರಸಿಂಹ ಜೋಶಿ ಮತ್ತು ವೆಂಕಟೇಶ್ ಭಾಗವಹಿಸಿದ್ದರು.

ಈ ಸಂದರ್ಭದಲ್ಲಿ ಊರಿನ ಪ್ರಮುಖರಾದ ಮರೆಗೌಡ (ತಾ.ಪಂ. ಮಾಜಿ ಸದಸ್ಯರು), ಹನುಮಯ್ಯ, ಸಣ್ಣಪ್ಪ, ದಬಾಡಿ ಮಲ್ಲಯ್ಯ, ವೆಂಕಟೇಶ್ ರೆಡ್ಡಿ, ಬಸವರಾಜ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ರಾತ್ರಿ 8.30 ಗಂಟೆಯಿಂದ ಬೆಳಗಿನ ಜಾವ 6 ಗಂಟೆಯವರೆಗೆ ನಡೆದ “ಪಾಂಡು ವಿಜಯ (ಕೀಚಕನ ವಧೆ)” ಬಯಲಾಟವನ್ನು ಬಂಡ್ರಾಳ್ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳಿಂದ ಆಗಮಿಸಿದ ಸಾವಿರಕ್ಕೂ ಹೆಚ್ಚು ಪ್ರೇಕ್ಷಕರು ಕಣ್ತುಂಬಿಕೊಂಡರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ