ಯುವಜನರಲ್ಲಿ ಕ್ರೀಡೆ, ಸಂಸ್ಕೃತಿ, ವೈಜ್ಞಾನಿಕ ಮನೋಭಾವ, ಸಾಮುದಾಯಿಕ ಹಾಗೂ ಸಾಮಾಜಿಕ ಸಾಮರಸ್ಯವನ್ನು ಉತ್ತೇಜಿಸಲು ರಾಜ್ಯ ಸರ್ಕಾರ ಭಾರತ್ ಜೋಡೊ ಯುವ ಸಂಘಗಳನ್ನು ರಚಿಸಲು ಆದೇಶಿಸಿದ್ದು ಶೇಡಬಾಳ ಪಟ್ಟಣ ಪಂಚಾಯತಿ ವ್ಯಾಪ್ತಿಯ ಯುವಜನರು ಹೆಚ್ಚಿನ ಸಂಖ್ಯೆಯಲ್ಲಿ ಸಂಘಗಳ ಸದಸ್ಯತ್ವಕ್ಕೆ ನೋಂಧಾಯಿಸಿಕೊಳ್ಳಬೇಕು ಎಂದು ಮುಖ್ಯಾಧಿಕಾರಿ ಶ್ರೀ ಕೆ. ಕೆ. ಗಾವಡೆ ಕೋರಿದ್ದಾರೆ. ರಾಜ್ಯ ಸರ್ಕಾರ ಯುವಜನರಲ್ಲಿ ನಾಯಕತ್ವ ಗುಣ, ಕ್ರೀಡೆ ಹಾಗೂ ಸಾಮಾಜಿಕ ಸೌಹಾರ್ದತೆ ಬೆಳೆಸಲು ಭಾರತ್ ಜೋಡೊ ಯುವ ಸಂಘಗಳನ್ನು ಸ್ಥಾಪಿಸುವ ಮಹತ್ವಾಕಾಂಕ್ಷಿ ಯೋಜನೆ ಜಾರಿಗೆ ತಂದಿದೆ. ಯುವ ಸಂಘಗಳನ್ನು ರಚಿಸಲು ಉದ್ದೇಶಿಸಲಾಗಿದೆ. ಯುವಜನರು ಸದಸ್ಯತ್ವ ನೋಂದಣಿ ಮಾಡಿಕೊಳ್ಳಬೇಕು ಎಂದು ಸಲಹೆ ಮಾಡಿದರು.
ಪಟ್ಟಣ ಪಂಚಾಯತಿ ವ್ಯಾಪ್ತಿಯಲ್ಲಿ ೪ ಸಾವಿರ ಜನಸಂಖ್ಯೆಗೆ ಒಂದರAತೆ ಸಂಘ ಸ್ಥಾಪಿಸಲಾಗುವುದು. ಸಂಘ ನೋಂದಣಿಯಾದ ಬಳಿಕ ೧೫ ಜನರ ಕಾರ್ಯಕಾರಿ ಸಮಿತಿಯನ್ನು ಆಯ್ಕೆ ಮಾಡಬೇಕಿದೆ. ತಲಾ ಒಬ್ಬ ಅಧ್ಯಕ್ಷ, ಉಪಾಧ್ಯಕ್ಷ ಮತ್ತು ಖಜಾಂಚಿ ಹಾಗೂ ೧೨ ಕಾರ್ಯಕಾರಿ ಸಮಿತಿ ಇರುವುದು ಕಡ್ಡಾಯ. ಅಧ್ಯಕ್ಷ ಅಥವಾ ಉಪಾಧ್ಯಕ್ಷ ಹುದ್ದೆಗಳಲ್ಲಿ ಯಾವುದಾದರೂ ಒಂದಕ್ಕೆ ಯುವತಿ ಇರಬೇಕು. ಸಮಿತಿಯಲ್ಲಿ ಪರಿಶಿಷ್ಟರಿಗೆ ೩ ಸ್ಥಾನ, ಓಬಿಸಿಗೆ ೪ ಸ್ಥಾನ ಮೀಸಲು ಕಡ್ಡಾಯವಾಗಿದೆ ಎಂದರು.
೧೬ ರಿಂದ ೩೫ ವರ್ಷಗೊಳಗಿನ ಯುವಜನರು ಸಂಘದ ವೆಬ್ಸೈಟ್ ಮೂಲಕವೂ ಆಧಾರಿತವಾಗಿ ಸದಸ್ಯತ್ವಕ್ಕೆ ನೋಂದಾಯಿಸಿಕೊಳ್ಳಬಹುದು. ನೋಂದಣಿಗೆ ರೂ.೧೦/- ಶುಲ್ಕ ನಿಗಧಿಪಡಿಸಲಾಗಿದ್ದು, ಒಬ್ಬರು ಒಂದು ಸಂಘಕ್ಕೆ ಮಾತ್ರ ಸದಸ್ಯರಾಗಲು ಅವಕಾಶವಿದೆ. ಪ್ರತಿ ಸಂಘದ ರಚನೆಗೆ ಕನಿಷ್ಠ ೧೦೦ ಯುವಕರ ಸದಸ್ಯತ್ವ ಕಡ್ಡಾಯ. ಪ್ರತಿ ಸಂಘಕ್ಕೆ ವಾರ್ಷಿಕ ರೂ.೧೦ ಲಕ್ಷ ಅನುದಾನ ಲಭ್ಯವಿದ್ದು, ಒಬ್ಬ ತರಬೇತುದಾರರಿಗೆ ವಾರ್ಷಿಕ ತಲಾ ರೂ.೨೪೦೦೦/- ಗೌರವಧನವಿದೆ ಎಂದರು.
ಈ ಯೋಜನೆಯನ್ನು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಮೂಲಕ ಅನುಷ್ಟಾನ ಮಾಡಲಾಗುವುದು. ಇದಕ್ಕೆ ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಇಲಾಖೆ, ನಗರಾಭಿವೃದ್ದಿ ಇಲಾಖೆ, ಕಂದಾಯ ಇಲಾಖೆ, ಹಾಗೂ ಶಿಕ್ಷಣ ಇಲಾಖೆ ಸಹಕಾರ ನೀಡಲಿದೆ. ಭಾರತ್ ಜೋಡೊ ಯುವ ಸಂಘಗಳ ಮೂಲಕ ಯುವಜನರಲ್ಲಿ ನಾಯಕತ್ವದ ಗುಣಗಳನ್ನು ಬೆಳೆಸಿ, ಅವರನ್ನು ಸಬಲೀಕರಣಗೊಳಿಸಿ, ನಾಡಿನ ಸತ್ಪçಜೆಗಳಾಗಿ ರೂಪಿಸುವ ಉದ್ದೇಶ ಹೊಂದಲಾಗಿದೆ ಎಂದು ತಿಳಿಸಿದರು.