Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕರ್ನಾಟಕ ಸರ್ಕಾರ ಜೆಟ್​ಗೆ ಮುನ್ನವೇ ಬಿಯರ್​ ದರ ಏರಿಕೆ

ಬೆಂಗಳೂರು, ಜನವರಿ 10: ಬಸ್​ ಟಿಕೆಟ್​ ದರ ಏರಿಕೆ ಮಾಡಿ ಪ್ರಯಾಣಿಕರಿಗೆ ಬಿಸಿ ಮುಟ್ಟಿಸಿದ್ದ ಸರ್ಕಾರ ಇದೀಗ ಮದ್ಯ ಪ್ರಿಯರಿಗೆ ಶಾಕ್​ ನೀಡಿದೆ. ಪ್ರಸಕ್ತ ಆರ್ಥಿಕ ವರ್ಷದ ಮೊದಲ 9 ತಿಂಗಳಲ್ಲಿ ಅಬಕಾರಿಯಿಂದ ನಿರೀಕ್ಷಿತ ಆದಾಯ ಬಾರದ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ಜೆಟ್​ಗೆ ಮುನ್ನವೇ ಬಿಯರ್​ ದರ ಏರಿಕೆ ಮಾಡಿದೆ.

ಪ್ರೀಮಿಯಂ ಮದ್ಯದ ಬಾಟಲ್​ಗೆ ಕನಿಷ್ಠ 10 ರಿಂದ 50 ರೂ.ವರೆಗೆ ಹೆಚ್ಚಳವಾಗಲಿದೆ. ಪ್ರತಿ ಬಿಯರ್​ನಲ್ಲಿನ ಅಲ್ಕೋಹಾಲ್​ ಅಂಶದ ಮೇಲೆ ದರ ಏರಿಕೆಯಾಗಲಿದೆ. ಈ ಪರಿಷ್ಕೃತ ದರ ಜನವರಿ 20 ರಿಂದ ಜಾರಿಗೆ ಬರಲಿದೆ. ಭಾರತೀಯ ನಿರ್ಮಿತ ಮದ್ಯದ (ಐಎಂಎಲ್​) ಮಾರಾಟವನ್ನು ರಾಜ್ಯದಲ್ಲಿ ಉತ್ತೇಜಿಸುವ ಸಲುವಾಗಿ ಸರ್ಕಾರ ಈ ನಿರ್ಧಾರ ಕೈಗೊಂಡಿದೆ ಎನ್ನಲಾಗಿದೆ. ಐಎಂಎಲ್​​ ಮದ್ಯದ ಬೆಲೆ ಶೇ 25 ರಷ್ಟು ಕಡಿಮೆಯಾಗುವ ಸಾಧ್ಯತೆ ಇದೆ.

ಬಿಯರ್​ ದರ ಪರಿಷ್ಕರಿಸಲು 2024ರ ಆಗಸ್ಟ್​ನಲ್ಲಿಯೇ ಕರಡು ಅಧಿಸೂಚನೆ ಹೊರಡಿಸಲಾಗಿತ್ತು. ಆದರೆ, ನಾನಾ ಕಾರಣಗಳಿಂದ ದರ ಪರಿಷ್ಕರಣೆ ಕಡತಕ್ಕೆ ಮುಖ್ಯಮಂತ್ರಿಗಳು ಸಹಿ ಹಾಕಿರಲಿಲ್ಲ. ಈಗ, ಮುಖ್ಯಮಂತ್ರಿಗಳು ದರ ಏರಿಕೆಗೆ ಸಮ್ಮತಿಸಿರುವ ಹಿನ್ನೆಲೆಯಲ್ಲಿ ಸರ್ಕಾರ ಆದೇಶ ಹೊರಡಿಸಿದೆ.

ಪ್ರೀಮಿಯಂ ಬಿಯರ್​ ಬೆಲೆ ಏರಿಕೆಗೆ ಬ್ರೂವರ್ಸ್ ಅಸೋಸಿಯೇಷನ್ ಆಫ್ ಇಂಡಿಯಾ (BAI) ತಕರಾರು ವ್ಯಕ್ತಪಡಿಸಿದೆ. ದೇಶದಲ್ಲೇ ಕರ್ನಾಟಕದಲ್ಲಿ ಅತಿ ಹೆಚ್ಚಿನ ​ಬೆಲೆಗೆ ಬಿಯರ್ ಮಾರಾಟವಾಗುತ್ತಿದೆ. ಬೆಲೆ ಏರಿಕೆಯಿಂದ ಬಿಯರ್​ ಮಾರಾಟ ಕಡಿಮೆಯಾಗಿದೆ ಎಂದು ಹೇಳಿದೆ.

ಕಳೆದ ಎರಡು ವರ್ಷಗಳಲ್ಲಿ ಕರ್ನಾಟಕದಲ್ಲಿ ಬಿಯರ್ ಮಾರಾಟ ಎರಡು ಪಟ್ಟು ಹೆಚ್ಚಾಗಿದೆ. ಕೋವಿಡ್ ನಂತರದ ಅವಧಿಯಲ್ಲಿ ಗ್ರಾಹಕರ ನಡವಳಿಕೆಯಲ್ಲಿನ ಬದಲಾವಣೆ ಮತ್ತು ಬೇಸಿಗೆಯ ತಾಪಮಾನದಲ್ಲಿನ ಏರಿಕೆ ಕೂಡ ಬಿಯರ್ ಬೇಡಿಕೆ ಹೆಚ್ಚಲು ಕಾರಣ ಎಂದು ಮೂಲಗಳು ತಿಳಿಸಿವೆ.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ