Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬಳ್ಳಾರಿ: ಆಲದಹಳ್ಳಿ ಗ್ರಾಮದ 3.28 ಎಕರೆ ಸರ್ಕಾರಿ ಜಮೀನು ವಶಕ್ಕೆ

 

ಬಳ್ಳಾರಿ,ಜೂ.15 : ಬಳ್ಳಾರಿ ತಾಲ್ಲೂಕು ವ್ಯಾಪ್ತಿಯ ಆಲದಹಳ್ಳಿ ಗ್ರಾಮದಲ್ಲಿ ಅಕ್ರಮವಾಗಿ ಒತ್ತುವರಿಯಾಗಿದ್ದ ಕೋಟ್ಯಂತರ ರೂಪಾಯಿ ಮೌಲ್ಯದ ಸರ್ಕಾರಿ ಜಮೀನನ್ನು ಕಂದಾಯ ಇಲಾಖೆ ಅಧಿಕಾರಿಗಳು ಶನಿವಾರ ಯಶಸ್ವಿಯಾಗಿ ವಶಪಡಿಸಿಕೊಂಡಿದ್ದಾರೆ.

ಆಲದಹಳ್ಳಿ ಗ್ರಾಮದ ಸರ್ವೆ ನಂಬರ್ 38/ಎ ರಲ್ಲಿ ಬರುವ ಒಟ್ಟು 3.28 ಎಕರೆ ವಿಸ್ತೀರ್ಣದ ಜಮೀನು ಸರ್ಕಾರಿ ಈಚಲವನ ಜಮೀನಾಗಿದೆ. ಈ ಜಾಗವನ್ನು ಕೆಲವರು ಅಕ್ರಮವಾಗಿ ಒತ್ತುವರಿ ಮಾಡಿಕೊಂಡಿದ್ದರು.

ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಅವರ ಆದೇಶದನ್ವಯ, ಅಪರ ಜಿಲ್ಲಾಧಿಕಾರಿ ಮಹಮ್ಮದ್ ಝುಬೇರ್ ಮತ್ತು ಸಹಾಯಕ ಆಯುಕ್ತ ರಾಜೇಶ್ ಹೆಚ್.ಡಿ., ಬಳ್ಳಾರಿ ತಾಲ್ಲೂಕು ತಹಶೀಲ್ದಾರರಾದ ಟಿ.ರೇಖಾ ಅವರ ನೇತೃತ್ವದ ತಂಡವು ಸ್ಥಳಕ್ಕೆ ಧಾವಿಸಿ ಜಮೀನನ್ನು ಸರ್ಕಾರದ ಸುಪರ್ದಿಗೆ ಪಡೆದಿದೆ.

ಸರ್ಕಾರಿ ಜಾಗದಲ್ಲಿ ಅಕ್ರಮವಾಗಿ ನಿರ್ಮಿಸಿದ್ದ ಕಾಂಪೌಂಡ್ ಗೋಡೆಗಳು, ಬೇಲಿ ಹಾಗೂ ಇತರೆ ತಾತ್ಕಾಲಿಕ ರಚನೆಗಳನ್ನು ಜೆಸಿಬಿ ಯಂತ್ರಗಳ ಸಹಾಯದಿಂದ ಸಂಪೂರ್ಣವಾಗಿ ಧ್ವಂಸಗೊಳಿಸಲಾಗಿದೆ. ಅಲ್ಲದೆ, ಸಾರ್ವಜನಿಕರ ಮಾಹಿತಿಗಾಗಿ ಅಲ್ಲಿ ಜಾಗೃತಿ ಫಲಕವನ್ನು ಅಳವಡಿಸಲಾಗಿದೆ.

ಸ್ಥಳದಲ್ಲಿದ್ದ ಅಧಿಕಾರಿಗಳು ಒತ್ತುವರಿ ತೆರವು ಪ್ರಕ್ರಿಯೆಯನ್ನು ಹತ್ತಿರದಿಂದ ಪರಿಶೀಲಿಸಿ, ಇಡೀ ಜಾಗವನ್ನು ಮತ್ತೆ ಸರ್ಕಾರದ ಸುಪರ್ದಿಗೆ ಪಡೆದುಕೊಂಡಿದ್ದಾರೆ. ಸ್ಥಳದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಬಿಗಿ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿತ್ತು.

ಸಾರ್ವಜನಿಕ ಆಸ್ತಿ ಮತ್ತು ಸರ್ಕಾರಿ ಜಮೀನುಗಳನ್ನು ಒತ್ತುವರಿ ಮಾಡುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ಈ ಸಂದರ್ಭದಲ್ಲಿ ಎಚ್ಚರಿಕೆ ನೀಡಿದ್ದಾರೆ.

Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ