Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಏಷ್ಯನ್ ಅಥ್ಲೆಟಿಕ್ಸ್ ನಲ್ಲಿ ಬೆಳ್ಳಿ ಪದಕ ವಿಜೇತೆ ಸುದೀಕ್ಷಾಗೆ ಬಳ್ಳಾರಿ ಜಿಲ್ಲಾಡಳಿತದಿಂದ ಅದ್ಧೂರಿ ಸನ್ಮಾನ


ಬಳ್ಳಾರಿ,ಜು.17 : ಏಷ್ಯನ್ ಚಾಂಪಿಯನ್‌ಶಿಪ್ ಅಂಡರ್-23 ಅಥ್ಲೆಟಿಕ್ಸ್ ನ 4*100 ಮೀಟರ್ ರಿಲೇಯಲ್ಲಿ ಬೆಳ್ಳಿ ಪದಕ ಗೆದ್ದು ದೇಶಕ್ಕೆ ಕೀರ್ತಿ ತಂದ ಬಳ್ಳಾರಿ ಜಿಲ್ಲೆಯ ಹೆಮ್ಮೆಯ ಪ್ರತಿಭೆ ಸುದೀಕ್ಷಾ ಅವರಿಗೆ ಬಳ್ಳಾರಿ ಜಿಲ್ಲಾಡಳಿತದಿಂದ ಗುರುವಾರ ಹೊಸ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಆತ್ಮೀಯವಾಗಿ ಸನ್ಮಾನಿಸಲಾಯಿತು.
ಈ ವೇಳೆ ಮಾತನಾಡಿದ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಅವರು, ಸುದೀಕ್ಷಾ ಅವರ ಈ ಸಾಧನೆ ಇಡೀ ದೇಶಕ್ಕೆ ಹಾಗೂ ವಿಶೇಷವಾಗಿ ನಮ್ಮ ಬಳ್ಳಾರಿ ಜಿಲ್ಲೆಗೆ ಅತ್ಯಂತ ಸಂತೋಷ ಮತ್ತು ಹೆಮ್ಮೆಯ ವಿಷಯವಾಗಿದೆ. ಅವರ ಅಪೂರ್ವ ಪ್ರತಿಭೆಯನ್ನು ಗೌರವಿಸುವ ಸಲುವಾಗಿ ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ವತಿಯಿಂದ ಇಂದು ಸನ್ಮಾನ ಮಾಡಲಾಗಿದೆ. ಇದರೊಂದಿಗೆ ಸಾಂಕೇತಿಕವಾಗಿ ಜಿಲ್ಲಾ ಕ್ರೀಡಾ ಇಲಾಖೆ ವತಿಯಿಂದ ರೂ.50 ಸಾವಿರ ಚೆಕ್ ಕೂಡ ನೀಡಲಾಗಿದೆ ಎಂದು ತಿಳಿಸಿದರು.
ಸುದೀಕ್ಷಾ ಅವರು, ಬಳ್ಳಾರಿಯ ಜಿಲ್ಲಾ ಕ್ರೀಡಾಂಗಣದಲ್ಲಿಯೇ ಶ್ರೀ ರಾಮಸ್ವಾಮಿ ಅವರ ಮಾರ್ಗದರ್ಶನದಲ್ಲಿ ತಮ್ಮ ಅಥ್ಲೆಟಿಕ್ಸ್ ತರಬೇತಿ ಹಾಗೂ ಸಿದ್ಧತೆಗಳನ್ನು ನಡೆಸಿದ್ದರು ಎಂಬುದು ಜಿಲ್ಲೆಗೆ ಹೆಮ್ಮೆಯ ಸಂಗತಿಯಾಗಿದೆ. ಬಳ್ಳಾರಿಯ ಇತರ ಉದಯೋನ್ಮುಖ ಕ್ರೀಡಾ ಪ್ರತಿಭೆಗಳಿಗೆ ಸುದೀಕ್ಷಾ ಅವರು ದೊಡ್ಡ ಮಾದರಿಯಾಗಿದ್ದಾರೆ. ಅವರು ತಮ್ಮ ಜೀವನದಲ್ಲಿ ಇನ್ನೂ ಎತ್ತರದ ಸಾಧನೆಗಳನ್ನು ಮಾಡಲಿ ಹಾಗೂ ಮುಂಬರುವ ದಿನಗಳಲ್ಲಿ ದೇಶಕ್ಕೆ ಒಲಿಂಪಿಕ್ ಪದಕವನ್ನು ತರಲಿ ಎಂದು ಹಾರೈಸಿದರು.
*ಅಥ್ಲೆಟಿಕ್ಸ್ ಕ್ರೀಡಾಪಟುಗಳಿಗೆ ಆರ್ಥಿಕ ನೆರವು ಮತ್ತು ಸ್ಪಾನ್ಸರ್‌ಶಿಪ್ ಒದಗಿಸಲು ಸಕಾರಾತ್ಮಕ ಭರವಸೆ:*
ದೇಶವನ್ನು ಪ್ರತಿನಿಧಿಸುವ ಅಥ್ಲೆಟಿಕ್ಸ್ ಕ್ರೀಡಾಪಟುಗಳು ಕ್ರೀಡಾರಂಗದಲ್ಲಿ ಮತ್ತಷ್ಟು ಸಾಧನೆ ಮಾಡಲು ಮತ್ತು ಆರ್ಥಿಕವಾಗಿ ಸಬಲರಾಗಲು ಅಗತ್ಯವಿರುವ ಎಲ್ಲಾ ರೀತಿಯ ಬೆಂಬಲವನ್ನು ಒದಗಿಸಲು ಜಿಲ್ಲಾಡಳಿತ ಬದ್ಧವಾಗಿದೆ ಎಂದು ಹೇಳಿದರು.
ಕ್ರೀಡಾಪಟುಗಳಿಗೆ ಅಗತ್ಯವಿರುವ ಸ್ಪಾನ್ಸರ್‌ಶಿಪ್ ಮತ್ತು ಅವರು ಆರ್ಥಿಕವಾಗಿ ಮುಂದೆ ಬರಲು ಅಥ್ಲೆಟಿಕ್ಸ್ ನಲ್ಲಿ ಏನೇನು ಅಗತ್ಯತೆಗಳಿವೆಯೋ, ಅವುಗಳನ್ನು ಒದಗಿಸುವ ನಿಟ್ಟಿನಲ್ಲಿ ಖಾಸಗಿ ಕಂಪನಿಗಳ ಸಹಯೋಗದೊಂದಿಗೆ ಎಲ್ಲಾ ರೀತಿಯ ಸಕಾರಾತ್ಮಕ ಕ್ರಮಗಳನ್ನು ಖಂಡಿತವಾಗಿಯೂ ಕೈಗೊಳ್ಳಲಾಗುವುದು ಎಂದು ಈ ಸಂದರ್ಭದಲ್ಲಿ ತಿಳಿಸಿದರು.
ಕ್ರೀಡಾಪಟುಗಳ ಪ್ರತಿಭೆಗೆ ಸೂಕ್ತ ಪ್ರೋತ್ಸಾಹ ಹಾಗೂ ಧನಸಹಾಯವನ್ನು ಒದಗಿಸುವ ಮೂಲಕ ಅವರ ಕ್ರೀಡಾ ವೃತ್ತಿಜೀವನಕ್ಕೆ ಬಲ ತುಂಬುವ ನಿಟ್ಟಿನಲ್ಲಿ  ಜಿಲ್ಲಾಡಳಿತದಿಂದ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಮ್ಮದ್ ಹಾರೀಸ್ ಸುಮೇರ್, ಅಪರ ಜಿಲ್ಲಾಧಿಕಾರಿ ಮಹಮ್ಮದ್ ಝುಬೇರ್. ಎನ್., ಸಹಾಯಕ ಆಯುಕ್ತ ರಾಜೇಶ್ ಹೆಚ್.ಡಿ., ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ರಾಜು
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ