Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

KRS ಪಕ್ಷದ ಬಳ್ಳಾರಿ ಜಿಲ್ಲಾ ಅಧ್ಯಕ್ಷರಾಗಿ ಪಿ. ಪ್ರಕಾಶ್ ರೆಡ್ಡಿ ನೇಮಕ

ಬಳ್ಳಾರಿ, ಜೂ.1: ಕರ್ನಾಟಕ ರಾಷ್ಟ್ರ ಸಮಿತಿ (KRS) ಪಕ್ಷದ ಬಳ್ಳಾರಿ ಜಿಲ್ಲಾ ಅಧ್ಯಕ್ಷರಾಗಿ ಕೊರ್ಲಗುಂದಿ ಗ್ರಾಮದ ಪಿ. ಪ್ರಕಾಶ್ ರೆಡ್ಡಿ ಅವರನ್ನು ರಾಜ್ಯ ಘಟಕ ನೇಮಕ ಮಾಡಿದೆ.
ಪಿ. ಪ್ರಕಾಶ್ ರೆಡ್ಡಿ ಅವರು ಈ ಹಿಂದೆ ಕಂಪ್ಲಿ ತಾಲೂಕು ಅಧ್ಯಕ್ಷರಾಗಿ, ಬಳ್ಳಾರಿ ತಾಲೂಕು ಅಧ್ಯಕ್ಷರಾಗಿ ಹಾಗೂ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ಪಕ್ಷದಲ್ಲಿ ವಿವಿಧ ಹುದ್ದೆಗಳನ್ನು ನಿರ್ವಹಿಸಿ ಸಂಘಟನೆಯನ್ನು ಬಲಪಡಿಸುವಲ್ಲಿ ಸೇವೆ ಸಲ್ಲಿಸಿದ್ದರು.
ಈ ಹಿಂದೆ ಜಿಲ್ಲಾ ಅಧ್ಯಕ್ಷರಾಗಿದ್ದ ಕೊಳಗಲ್ ಗ್ರಾಮದ ವಿ. ಯುಗಂಧರ್ ಅವರು ಕಾರಣಾಂತರಗಳಿಂದ ರಾಜೀನಾಮೆ ನೀಡಿದ್ದ ಹಿನ್ನೆಲೆಯಲ್ಲಿ, ಮೇ 23, 2026ರಂದು ನಡೆದ ಜಿಲ್ಲಾ ಸಮಿತಿ ಸಭೆಯಲ್ಲಿ ಜಿಲ್ಲಾ ಸಮಿತಿ ಸದಸ್ಯರು ಸರ್ವಾನುಮತದಿಂದ ಪಿ. ಪ್ರಕಾಶ್ ರೆಡ್ಡಿ ಅವರ ಹೆಸರನ್ನು ಆಯ್ಕೆ ಮಾಡಿದರು. ಈ ಪ್ರಸ್ತಾವನೆಯನ್ನು ಜಿಲ್ಲಾ ಉಸ್ತುವಾರಿಗಳು ಹಾಗೂ ರಾಜ್ಯ ಕಾರ್ಯಾಧ್ಯಕ್ಷರಾದ ರಘು ಜಾಣಗೆರೆ ಅವರು ರಾಜ್ಯ ಸಮಿತಿಗೆ ಕಳುಹಿಸಿದ್ದರು.
ಅದರ ಆಧಾರದ ಮೇಲೆ KRS ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿಯಾದ ರಘುಪತಿ ಭಟ್ ಅವರು ಪಿ. ಪ್ರಕಾಶ್ ರೆಡ್ಡಿ ಅವರನ್ನು ಬಳ್ಳಾರಿ ಜಿಲ್ಲಾ ಅಧ್ಯಕ್ಷರನ್ನಾಗಿ ನೇಮಕಗೊಳಿಸಿ ಅಧಿಕೃತ ಆದೇಶ ಹೊರಡಿಸಿದ್ದಾರೆ.
ನೇಮಕಾತಿ ಹಿನ್ನೆಲೆಯಲ್ಲಿ ಪಕ್ಷದ ರಾಜ್ಯ ಹಾಗೂ ಜಿಲ್ಲಾ ನಾಯಕರಿಗೆ ಪಿ. ಪ್ರಕಾಶ್ ರೆಡ್ಡಿ ಕೃತಜ್ಞತೆ ಸಲ್ಲಿಸಿದ್ದು, ಜಿಲ್ಲೆಯಲ್ಲಿ ಪಕ್ಷದ ಸಂಘಟನೆಯನ್ನು ಮತ್ತಷ್ಟು ಬಲಪಡಿಸಲು ಶ್ರಮಿಸುವುದಾಗಿ ತಿಳಿಸಿದ್ದಾರೆ.

Advertisement
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಡಿ.ಕೆ.ಶಿವಕುಮಾರ ಅವರಿಗೆ ಶುಭಕೋರಿದ ಡಾ.ಪ್ರಭಾಕರ ಕೋರೆKRS ಪಕ್ಷದ ಬಳ್ಳಾರಿ ಜಿಲ್ಲಾ ಅಧ್ಯಕ್ಷರಾಗಿ ಪಿ. ಪ್ರಕಾಶ್ ರೆಡ್ಡಿ ನೇಮಕಪ್ರತಿಯೊಂದು ಜೀವರಾಶಿಗೂ ನೀರು ಬಹಳ ಅವಶ್ಯ : ಡಾ. ತೋಂಟದ ಸಿದ್ಧರಾಮ ಮಹಾಸ್ವಾಮಿಗಳು ಯಶವಂತರಾಯಗೌಡ ಪಾಟೀಲ ಅವರಿಗೆ  ಮಂತ್ರಿ ಭಾಗ್ಯ ಒಲಿದು ಬರಲಿನಿವೃತ್ತ ಸಹಾಯಕನಿಗೆ ಸನ್ಮಾನಆರ್ ಬಿ ತಿಮ್ಮಾಪುರಿಗೆ ಉಪಮುಖ್ಯಮಂತ್ರಿ ಸ್ಥಾನ ಸಿಗಲಿ: ಮದಾರ ಮುಲ್ಲಾ.ಹೈಕಮಾಂಡ್ ಜವಾಬ್ದಾರಿ ನೀಡಿದರೆ ಸಮರ್ಥವಾಗಿ ನಿಭಾಯಿಸುವೆ: ರಾಜು ಕಾಗೆಕರ್ನಾಟಕ ನವನಿರ್ಮಾಣ ಸೇನೆ ಜಿಲ್ಲಾಧ್ಯಕ್ಷ ವಿಜಯಕುಮಾರ್ ಕಲವಲೂರು  ಆಗ್ರಹಶಾಲಾ ಪ್ರಾರಂಭೋತ್ಸವಕ್ಕೆ ಶಾಸಕ ಉಮೇಶ ಮೇಟಿ ಚಾಲನೆ ಅಖಿಲ ಭಾರತ ಗಾಣಿಗ ವಿದ್ಯಾ ಹಾಗೂ ಉದ್ಯೋಗವರ್ಧಕ ಟ್ರಸ್ಟ್‌ ವತಿಯಿಂದ 14 ರಂದು ರಾಜ್ಯ ಮಟ್ಟದ ವಧು ವರರ  ಉಚಿತ  ಸಮಾವೇಶ