Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

KRS ಪಕ್ಷದ ಬಳ್ಳಾರಿ ಜಿಲ್ಲಾ ಅಧ್ಯಕ್ಷರಾಗಿ ಪಿ. ಪ್ರಕಾಶ್ ರೆಡ್ಡಿ ನೇಮಕ

ಬಳ್ಳಾರಿ, ಜೂ.1: ಕರ್ನಾಟಕ ರಾಷ್ಟ್ರ ಸಮಿತಿ (KRS) ಪಕ್ಷದ ಬಳ್ಳಾರಿ ಜಿಲ್ಲಾ ಅಧ್ಯಕ್ಷರಾಗಿ ಕೊರ್ಲಗುಂದಿ ಗ್ರಾಮದ ಪಿ. ಪ್ರಕಾಶ್ ರೆಡ್ಡಿ ಅವರನ್ನು ರಾಜ್ಯ ಘಟಕ ನೇಮಕ ಮಾಡಿದೆ.
ಪಿ. ಪ್ರಕಾಶ್ ರೆಡ್ಡಿ ಅವರು ಈ ಹಿಂದೆ ಕಂಪ್ಲಿ ತಾಲೂಕು ಅಧ್ಯಕ್ಷರಾಗಿ, ಬಳ್ಳಾರಿ ತಾಲೂಕು ಅಧ್ಯಕ್ಷರಾಗಿ ಹಾಗೂ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ಪಕ್ಷದಲ್ಲಿ ವಿವಿಧ ಹುದ್ದೆಗಳನ್ನು ನಿರ್ವಹಿಸಿ ಸಂಘಟನೆಯನ್ನು ಬಲಪಡಿಸುವಲ್ಲಿ ಸೇವೆ ಸಲ್ಲಿಸಿದ್ದರು.
ಈ ಹಿಂದೆ ಜಿಲ್ಲಾ ಅಧ್ಯಕ್ಷರಾಗಿದ್ದ ಕೊಳಗಲ್ ಗ್ರಾಮದ ವಿ. ಯುಗಂಧರ್ ಅವರು ಕಾರಣಾಂತರಗಳಿಂದ ರಾಜೀನಾಮೆ ನೀಡಿದ್ದ ಹಿನ್ನೆಲೆಯಲ್ಲಿ, ಮೇ 23, 2026ರಂದು ನಡೆದ ಜಿಲ್ಲಾ ಸಮಿತಿ ಸಭೆಯಲ್ಲಿ ಜಿಲ್ಲಾ ಸಮಿತಿ ಸದಸ್ಯರು ಸರ್ವಾನುಮತದಿಂದ ಪಿ. ಪ್ರಕಾಶ್ ರೆಡ್ಡಿ ಅವರ ಹೆಸರನ್ನು ಆಯ್ಕೆ ಮಾಡಿದರು. ಈ ಪ್ರಸ್ತಾವನೆಯನ್ನು ಜಿಲ್ಲಾ ಉಸ್ತುವಾರಿಗಳು ಹಾಗೂ ರಾಜ್ಯ ಕಾರ್ಯಾಧ್ಯಕ್ಷರಾದ ರಘು ಜಾಣಗೆರೆ ಅವರು ರಾಜ್ಯ ಸಮಿತಿಗೆ ಕಳುಹಿಸಿದ್ದರು.
ಅದರ ಆಧಾರದ ಮೇಲೆ KRS ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿಯಾದ ರಘುಪತಿ ಭಟ್ ಅವರು ಪಿ. ಪ್ರಕಾಶ್ ರೆಡ್ಡಿ ಅವರನ್ನು ಬಳ್ಳಾರಿ ಜಿಲ್ಲಾ ಅಧ್ಯಕ್ಷರನ್ನಾಗಿ ನೇಮಕಗೊಳಿಸಿ ಅಧಿಕೃತ ಆದೇಶ ಹೊರಡಿಸಿದ್ದಾರೆ.
ನೇಮಕಾತಿ ಹಿನ್ನೆಲೆಯಲ್ಲಿ ಪಕ್ಷದ ರಾಜ್ಯ ಹಾಗೂ ಜಿಲ್ಲಾ ನಾಯಕರಿಗೆ ಪಿ. ಪ್ರಕಾಶ್ ರೆಡ್ಡಿ ಕೃತಜ್ಞತೆ ಸಲ್ಲಿಸಿದ್ದು, ಜಿಲ್ಲೆಯಲ್ಲಿ ಪಕ್ಷದ ಸಂಘಟನೆಯನ್ನು ಮತ್ತಷ್ಟು ಬಲಪಡಿಸಲು ಶ್ರಮಿಸುವುದಾಗಿ ತಿಳಿಸಿದ್ದಾರೆ.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ