LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಬಳ್ಳಾರಿ: ಲೋಕಾಯುಕ್ತ ಜನಸಂಪರ್ಕ ಸಭೆ ಹಾಗೂ ಕುಂದುಕೊರತೆಗಳ ಅಹವಾಲು ಸ್ವೀಕಾರ


ಬಳ್ಳಾರಿ,ಜೂ.16 : ಕರ್ನಾಟಕ ಲೋಕಾಯುಕ್ತ ಬಳ್ಳಾರಿ ವತಿಯಿಂದ ಜೂನ್ ತಿಂಗಳಿನಲ್ಲಿ ಜಿಲ್ಲೆಯ ವಿವಿಧ ತಾಲ್ಲೂಕು ಕೇಂದ್ರಗಳಲ್ಲಿ ಸಾರ್ವಜನಿಕ ಕುಂದುಕೊರತೆಗಳ ಅಹವಾಲು ಆಲಿಕೆ ಹಾಗೂ ಜನಸಂಪರ್ಕ ಸಭೆಯನ್ನು ಹಮ್ಮಿಕೊಳ್ಳಲಾಗಿದೆ.
ಕರ್ನಾಟಕ ಲೋಕಾಯುಕ್ತ ಬಳ್ಳಾರಿಯ ಪೊಲೀಸ್ ಅಧೀಕ್ಷಕ ವಾಸುದೇವರಾಮ್ ಎನ್. ಅವರ ಮಾರ್ಗದರ್ಶನದಲ್ಲಿ, ಪೊಲೀಸ್ ಉಪಾಧೀಕ್ಷಕ ಎಸ್.ಎಸ್.ಬೀಳಗಿ, ಪೊಲೀಸ್ ನಿರೀಕ್ಷಕರುಗಳಾದ ಸುರೇಶ್ ಎಂ.ಭಾವಿಮನಿ ಮತ್ತು ಗುರಣ್ಣ ಎಸ್.ಹೆಬ್ಬಾಳ್ ಅವರ ನೇತೃತ್ವದಲ್ಲಿ ಈ ಸಭೆಗಳು ನಡೆಯಲಿವೆ.
ಸಾರ್ವಜನಿಕರು ಗೌರವಾನ್ವಿತ ಲೋಕಾಯುಕ್ತರಿಗೆ ಅರ್ಜಿಗಳನ್ನು ಸಲ್ಲಿಸಲು ಅನುಕೂಲವಾಗುವಂತೆ ನಮೂನೆ/ಫಾರಂ ನಂ: 1 ಮತ್ತು 2 ಗಳನ್ನು ಸಹ ನೀಡಲಾಗುತ್ತದೆ.
*ತಾಲ್ಲೂಕುವಾರು ಸಭೆ:*
ಸಂಡೂರು ತಾಲ್ಲೂಕು: ಜೂ.19 ರಂದು ಬೆಳಿಗ್ಗೆ 10.30 ರಿಂದ ಮಧ್ಯಾಹ್ನ 1.30 ಗಂಟೆಯ ವರೆಗೆ ಸಂಡೂರಿನ ತಹಶೀಲ್ದಾರರ ಕಚೇರಿ ಸಭಾಂಗಣ.
ಕAಪ್ಲಿ ತಾಲ್ಲೂಕು: ಜೂ.19 ರಂದು ಮಧ್ಯಾಹ್ನ 03 ರಿಂದ ಸಂಜೆ 5.30 ಗಂಟೆಯ ವರೆಗೆ ಕಂಪ್ಲಿಯ ತಹಶೀಲ್ದಾರರ ಕಚೇರಿಯಲ್ಲಿರುವ ಸಭಾಂಗಣ.
ಸಿರುಗುಪ್ಪ ತಾಲ್ಲೂಕು: ಜೂ.20 ರಂದು ಬೆಳಿಗ್ಗೆ 10.30 ರಿಂದ ಮಧ್ಯಾಹ್ನ 1.30 ಗಂಟೆಯವರೆಗೆ ಸಿರುಗುಪ್ಪದ ಸಿ.ಡಿ.ಪಿ.ಓ ಕಚೇರಿಯಲ್ಲಿರುವ ಸಭಾಂಗಣ.
ಕುರುಗೋಡು ತಾಲ್ಲೂಕು: ಜೂ.20 ರಂದು ಮಧ್ಯಾಹ್ನ 3 ಗಂಟೆಯಿAದ ಸಂಜೆ 5 ಗಂಟೆಯ ವರೆಗೆ ಕುರುಗೋಡಿನ ತಹಶೀಲ್ದಾರರ ಕಚೇರಿಯಲ್ಲಿರುವ ಸಭಾಂಗಣ.
ಬಳ್ಳಾರಿ ತಾಲ್ಲೂಕು: ಜೂ.23 ರಂದು ಬೆಳಿಗ್ಗೆ 10.30 ರಿಂದ ಮಧ್ಯಾಹ್ನ 1.30 ಗಂಟೆಯವರೆಗೆ ಬಳ್ಳಾರಿಯ ಹೊಸ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿರುವ ಸಭಾಂಗಣ.
*ಸಾರ್ವಜನಿಕರಲ್ಲಿ ವಿನಂತಿ:*
ಸಾರ್ವಜನಿಕರು ತಮ್ಮ ವ್ಯಾಪ್ತಿಯಲ್ಲಿ ಸರ್ಕಾರಿ ಕಚೇರಿಗಳ ಕೆಲಸ ಕಾರ್ಯಗಳಿಗೆ ಸಂಬAಧಿಸಿದAತೆ ಯಾವುದೇ ಕುಂದುಕೊರತೆಗಳಿದ್ದಲ್ಲಿ, ಸಾರ್ವಜನಿಕರು ಮೇಲ್ಕಂಡ ದಿನಾಂಕ, ಸಮಯ ಹಾಗೂ ನಿಗದಿತ ಸ್ಥಳಗಳಲ್ಲಿ ಹಾಜರಿದ್ದು, ತಮ್ಮ ಅರ್ಜಿಗಳನ್ನು ಸಲ್ಲಿಸಿ ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಕರ್ನಾಟಕ ಲೋಕಾಯುಕ್ತ ಬಳ್ಳಾರಿಯ ಪೊಲೀಸ್ ಅಧೀಕ್ಷಕ ವಾಸುದೇವರಾಮ್ ಎನ್. ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್