ಭರತ್ ಭೂಷಣ್ ಅವರನ್ನು ಹಾಡಹಗಲೇ ಹೆಂಡತಿ, ಮಗುವಿನ ಕಣ್ಣೇದುರೇ ಶೂಟ್ ಮಾಡಿ ಹತ್ಯೆ ಮಾಡಿದ್ದಾರೆ. ಈ ರೀತಿಯ ಘಟನೆ ಮತ್ತೆ ಮರುಕಳಿಸದಂತೆ ನೋಡಿಕೊಳ್ಳಬೇಕು. ನಮ್ಮ ದೇಶದಲ್ಲಿ ಉಗ್ರರು ಇರದಂತೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಸಿದ್ದರಾಮಯ್ಯ ಆಗ್ರಹಿಸಿದರು.
ಭಯೋತ್ಪಾದಕರ ದಾಳಿಯಲ್ಲಿ ಭರತ್ ಭೂಷಣ್, ಮಂಜುನಾಥ್ ಮೃತಪಟ್ಟಿದ್ದಾರೆ. ಅವರ ಕುಟುಂಬದವರಿಗೆ ತಲಾ 10 ಲಕ್ಷ ರೂ. ಪರಿಹಾರ ನೀಡುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಅಲ್ಲದೆ, ಭರತ್ ಭೂಷಣ್, ಮಂಜುನಾಥ್ ಅಂತ್ಯಕ್ರಿಯೆಗೆ ಸರ್ಕಾರದಿಂದ ವ್ಯವಸ್ಥೆ ಮಾಡಲಾಗುತ್ತದೆ. ಭರತ್ ಅಂತಿಮ ಸಂಸ್ಕಾರದಲ್ಲಿ ರಾಮಲಿಂಗಾರೆಡ್ಡಿ ಭಾಗಿಯಾಗುತ್ತಾರೆ. ಮಂಜುನಾಥ್ ಅಂತ್ಯಕ್ರಿಯೆಯಲ್ಲಿ ಮಧು ಬಂಗಾರಪ್ಪ ಭಾಗಿಯಾಗುತ್ತಾರೆ ಎಂದು ಅವರು ಹೇಳಿದರು.