ಕ್ರಮೇಣ, ಭಾರತ್ ಅಕ್ಕಿ ಜತೆಗೆ ಆಯಾ ರಾಜ್ಯ ಮತ್ತು ಪ್ರದೇಶವಾರು ಬೇಡಿಕೆಗೆ ತಕ್ಕಂತೆ ಕಡಿಮೆ ಬೆಲೆಯಲ್ಲಿ ಭಾರತ್ ಬೇಳೆ, ಭಾರತ್ ಗೋಧಿ, ಭಾರತ್ ಹಿಟ್ಟು ವಿತರಣೆ ಆರಂಭಿಸಿದೆ.
ದೇಶದ ಪ್ರಮುಖ ನಗರಗಳು ಹಾಗೂ ಮಾರುಕಟ್ಟೆಗಳಲ್ಲಿ ಈರುಳ್ಳಿ ಬೆಲೆ ಗಗನಮುಖಿ ಆಗುತ್ತಿದ್ದಂತೆಯೇ ಕೆಜಿಗೆ 35 ರೂ. ದರದಲ್ಲಿ ಈರುಳ್ಳಿ ಪೂರೈಸಿ ಗ್ರಾಹಕರ ಕೈಗಿಟ್ಟಿತು. ಗಣೇಶ ಚತುರ್ಥಿ, ದಸರಾ, ದೀಪಾವಳಿ ಹಬ್ಬದ ದಿನಗಳಲ್ಲಿ ದೆಹಲಿ, ಬೆಂಗಳೂರು ಸೇರಿದಂತೆ ಇತರ ನಗರಗಳಲ್ಲಿ ಈರುಳ್ಳಿ ಜತೆಗೆ “ಭಾರತ್ ಬ್ರ್ಯಾಂಡ್” ಅಡಿ ಕಡಿಮೆ ಬೆಲೆಗೆ ಆಹಾರೋತ್ಪನ್ನ ಪೂರೈಸಲಾಗಿತ್ತು.
ಭಾರತ್ ಅಕ್ಕಿ, ಭಾರತ್ ಬೇಳೆ, ಭಾರತ್ ಗೋಧಿ ಹಿಟ್ಟು, ಅಕ್ಕಿ ಹಿಟ್ಟು ಹೀಗೆ ಅಗತ್ಯ ಆಹಾರ ಉತ್ಪನ್ನಗಳನ್ನು ಅತ್ಯಂತ ಕಡಿಮೆ ಬೆಲೆಗೆ ಮೊಬೈಲ್ ವಾಹನಗಳಲ್ಲಿ ವಿತರಿಸಲಾಗುತ್ತಿದೆ.