ಹೈಕೋರ್ಟ್ನಲ್ಲಿ ನಿರೀಕ್ಷಣಾ ಜಾಮೀನಿಗಾಗಿ ಭವಾನಿ ರೇವಣ್ಣ ಪರ ವಕೀಲ ಗಿರೀಶ್ ಕುಮಾರ್ ಬಿ.ಎಂ. ಅರ್ಜ ಸಲ್ಲಿಸಿದ್ದಾರೆ. ಸದ್ಯ ಕೇಸ್ ಸ್ವೀಕರಿಸಿ ಕೋರ್ಟ್ ಎಫ್ಆರ್ ನಂಬರ್ ನೀಡಿದೆ. ಇನ್ನು ಕೇಸ್ ನಂಬರ್ ನೀಡಿದ ಬಳಿಕ ಪೀಠಕ್ಕೆ ಅರ್ಜಿ ರವಾನೆಯಾಗುತ್ತದೆ. ಸೋಮವಾರ ಬೆಳಗ್ಗೆ 11:30ಕ್ಕೆ ಭವಾನಿ ರೇವಣ್ಣ ಪರ ಅರ್ಜಿ ಸಲ್ಲಿಕೆ ಮಾಡಲಾಗಿದೆ.
ಪ್ರಜ್ವಲ್ ರೇವಣ್ಣ ಸೆಕ್ಸ್ ಸ್ಕ್ಯಾಂಡಲ್ಗೆ ಸಂಬಂಧಿಸಿ ಮಹಿಳೆಯೊಬ್ಬಳ ಅಪಹರಣಕ್ಕೆ ಕುಮ್ಮಕ್ಕು ನೀಡಿದ ಪ್ರಕರಣದಲ್ಲಿ ಭವಾನಿ ರೇವಣ್ಣ ಪೊಲೀಸರ ಕಣ್ಣಿಂದ ತಪ್ಪಿಸಿಕೊಂಡು ಓಡಾಡುತ್ತಿದ್ದಾರೆ. ಭವಾನಿಯನ್ನು ವಶಕ್ಕೆ ಪಡೆಯಲು ಪೊಲೀಸರ ನಾಲ್ಕು ವಿಶೇಷ ತಂಡಗಳನ್ನು ರಚಿಸಲಾಗಿದೆ. ಅವರ ವಿರುದ್ಧ ಅರೆಸ್ಟ್ ವಾರಂಟ್ ಕೂಡ ಜಾರಿ ಮಾಡಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ.
ಪ್ರಕರಣಕ್ಕೆ ಸಂಬಂಧಿಸಿ ನಿಯಮದ 41a ಅಡಿ ಭವಾನಿ ರೇವಣ್ಣಗೆ ಎಸ್ ಐ ಟಿ ಕಚೇರಿಗೆ ವಿಚಾರಣೆಗೆ ಹಾಜರಾಗುವಂತೆ ನೊಟೀಸ್ ನೀಡಲಾಗಿತ್ತು. ಪ್ರಜ್ವಲ್ಗೂ 41a ಅಡಿ ನೊಟೀಸ್ ನೀಡಿದ್ದ ಎಸ್ಐಟಿ ಆ ಬಳಿಕ ಬಂಧಿಸಿತ್ತು. ಪ್ರಜ್ವಲ್ ರೇವಣ್ಣ ವಿಚಾರಣೆಗೆ ಹಾಜರಾಗದ ಹಿನ್ನೆಲೆ ಅರೆಸ್ಟ್ ವಾರೆಂಟ್ ಜಾರಿ ಮಾಡಲಾಗಿತ್ತು. ಈಗ ಭವಾನಿ ರೇವಣ್ಣಗೂ ಅರೆಸ್ಟ್ ವಾರೆಂಟ್ ಜಾರಿ ಮಾಡುವ ಸಾಧ್ಯತೆ ಇದೆ. ತಾವೇ ಎಸ್ ಐ ಟಿ ಕಚೇರಿಗೆ ಬರುವುದಾಗಿ ಹೇಳಿದ್ದ ಭವಾನಿ ರೇವಣ್ಣ ಆ ಬಳಿಕ ಬರದೇ ತಲೆತಪ್ಪಿಸಿಕೊಂಡು ಓಡಾಡುತ್ತಿದ್ದಾರೆ. ಭವಾನಿ ರೇವಣ್ಣ ವಿರುದ್ಧ ಜನಾಕ್ರೋಶವೂ ಹೆಚ್ಚುತ್ತಿದೆ. ಭವಾನಿ ರೇವಣ್ಣಗಾಗಿ ಪೊಲೀಸರು ಹುಡುಕಾಟ ಮುಂದುವರಿಸಿದ್ದಾರೆ.