ಮನೆ ಮನೆಗಳಿಗೆ ಅಂಬೇಡ್ಕರ್ ವಿಚಾರಧಾರೆ: ಸಂವಿಧಾನ ಪೀಠಿಕೆ ಓದುವ ‘ಭೀಮ ಸಮ್ಮೇಳನ’:
ಬಿಜೆಪಿ ಶಾಸಕರು, ವಿಧಾನ ಪರಿಷತ್ ಸದಸ್ಯರು ಮತ್ತು ಸಂಸದರು ತಮ್ಮ ಮನೆಗಳಲ್ಲಿ ನಡೆಸಲಿರುವ ಕಾರ್ಯಕ್ರಮ ಇದಾಗಿದ್ದು, ಎಸ್ಸಿ ಮತ್ತು ಎಸ್ಟಿ ಸಮುದಾಯದವರನ್ನು ತಮ್ಮ ಮನೆಗೆ ಕರೆಸಿಕೊಂಡು ಸನ್ಮಾನ ಮಾಡಲಿದ್ದಾರೆ.
ಮನೆ ಮನೆಗಳಿಗೆ ಅಂಬೇಡ್ಕರ್ ಅವರ ವಿಚಾರಧಾರೆ ಮುಟ್ಟಿಸುವುದು, ಪರಿಶಿಷ್ಟ ಜಾತಿ ಸಮುದಾಯದ ಕುಟುಂಬಗಳನ್ನು ಸೇರಿಸಿ ಭೀಮ ಸಂಗಮ ನಡೆಸುವುದು ಮತ್ತು ಸಂವಿಧಾನ ಪೀಠಿಕೆ ಓದುವ ಭೀಮ ಸಮ್ಮೇಳನ ಹಮ್ಮಿಕೊಳ್ಳಲು ಬಿಜೆಪಿ ತೀರ್ಮಾನಿಸಿದೆ.
ಬೆಂಗಳೂರಿನ ಮಲ್ಲೇಶ್ವರದಲ್ಲಿರುವ ಬಿಜೆಪಿ ರಾಜ್ಯ ಕಚೇರಿಯಲ್ಲಿ ಗುರುವಾರ ನಡೆದ ಸಂವಿಧಾನ ಗೌರವ ಅಭಿಯಾನ ಕಾರ್ಯಕ್ರಮದಲ್ಲಿ ಈ ನಿರ್ದೇಶನಗಳನ್ನು ನೀಡಲಾಗಿದೆ. ಅಲ್ಲದೇ, ದೇಶದ ಎಲ್ಲಾ ರಾಜ್ಯಗಳಲ್ಲೂ ಪಕ್ಷದ ಮುಖವಾಣಿಯಲ್ಲಿ ಸಂವಿಧಾನ ವಿಚಾರದಲ್ಲಿ ಕಾಂಗ್ರೆಸ್ ಮಾಡಿರುವ ತಪ್ಪುಗಳನ್ನು ಮುದ್ರಿಸುವಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಸೂಚನೆ ನೀಡಿದ್ದು, ರಾಜ್ಯದಲ್ಲೂ ಸಹ ಪಾಲನೆಯಾಗಲಿದೆ.