LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಚಿಕ್ಕಮಣೂರದ ಭೀಮ ನಗರ ಸರಕಾರಿ ಶಾಲೆಯ ದುಸ್ಥಿತಿ

ಇಂಡಿ : ತಾಲೂಕಿನ ಚಿಕ್ಕಮಣೂರದ ಭೀಮ ನಗರ ಸರಕಾರಿ ಶಾಲೆಯ ಸ್ಥಿತಿ ದುಸ್ಥಿತಿಯಲ್ಲಿದೆ. ಇಲ್ಲಿ ಒಂದರಿಂದ ಏಳನೆಯ ತರಗತಿಯ ವರೆಗೆ ವರ್ಗಗಳು ಇವೆ. ಈ ಶಾಲೆಯಲ್ಲಿ ೧೦೫ ಮಕ್ಕಳು ಓದುತ್ತಿದ್ದಾರೆ.
ಇಲ್ಲಿ ಆರು ಕೊಠಡಿಗಳಿವೆ. ಅದರಲ್ಲಿ ಒಂದು ಮಾತ್ರ ಒಳ್ಳೆಯ ಸ್ಥಿತಿಯಲ್ಲಿದ್ದು ಎರಡು ಕೋಣೆಗಳು ಪೂರ್ಣವಾಗಿ ಬಿದ್ದಿವೆ. ಮತ್ತು ಎರಡು ಕೋಣೆಗಳು ಮಳೆ ಬಂದರೆ ಸಂಪೂರ್ಣ ಸೋರುತ್ತಿವೆ. ಒಂದು ಮೇಲ್ಛಾವಣೆಯಿಂದ ಸಿಮೆಂಟ ಉದುರಿ ಬಿಳುತ್ತಿದೆ. ಹೀಗಾಗಿ ಒಂದೇ ಕೋಣೆಯಲ್ಲಿ ಮಾತ್ರ ಎಲ್ಲ ವಿದ್ಯಾರ್ಥಿಗಳು ಓದುವ ಅನಿವಾರ್ಯತೆ ಎದುರಾಗಿದೆ.
ಒಂದು ಕೋಣೆಯಲ್ಲಿ ತರಗತಿಗಳು ತೆಗೆದುಕೊಂಡು ಎರಡು ತರಗತಿಗಳಿಗೆ ಕೋಣೆಗೆ ಹತ್ತಿದ ಕಂಪೌಂಡದಲ್ಲಿ ಮತ್ತು ಎರಡು ತರಗತಿಗಳಿಗೆ ಗಿಡದ ಕೆಳಗೆ ತರಗತಿ ನಡೆಸುತ್ತಿದ್ದಾರೆ.
ಇಲ್ಲಿ ಮಳೆಯಾದರೆ ಮೊದಲು ಶಿಕ್ಷಕರು ವಿದ್ಯಾರ್ಥಿಗಳನ್ನು ಮನೆಗೆ ಕಳುಹಿಸುತ್ತಾರೆ.
ಶಾಲೆಯ ಎಸ್.ಡಿ.ಎಂ.ಸಿ ಅಧ್ಯಕ್ಷ ಗಡ್ಡಿಲಿಂಗ ಪೂಜಾರಿ ಶಾಲೆಗೆ ಕೋಣೆ ಕಟ್ಟಿಸಿ ಕೊಡುವಂತೆ ಗ್ರಾ.ಪಂ ಅಧ್ಯಕ್ಷರಿಗೆ, ಗ್ರಾ.ಪಂ ಪಿಡಿಒ, ತಾಪಂ ಇಒ ಮತ್ತು ಶಿಕ್ಷಣ ಇಲಾಖೆ ಅಧಿಕಾರಿ ಹಲವಾರು ಬಾರಿ ಮನವಿ ಮಾಡಿದ್ದಾರೆ. ಆದರೆ ಏನೂ ಪ್ರಯೋಜನವಾಗಿಲ್ಲ.
ಕೋಟ್
ಈ ಶಾಲೆಗೆ ಕೋಣೆಗಳನ್ನು ಕಟ್ಟಿಸಿ ಕೋಡಬೇಕು. ಇಲ್ಲದಿದ್ದರೆ ಎಲ್ಲ ಎಸ್.ಡಿ.ಎಂ.ಸಿ ಸದಸ್ಯರು ಮತ್ತು ಪಾಲಕರ ಜೊತೆ ಗ್ರಾಮಸ್ಥರ ಸಹಕಾರದೊಂದಿಗೆ ಶಾಲೆಯ ಎದುರು ಇಲ್ಲವೆ ಶಿಕ್ಷಣ ಇಲಾಖೆ ಎದುರು ಧರಣಿ ಸತ್ಯಾಗ್ರಹ ಮಾಡಲಾಗುವದು.
ಗಡ್ಡಿಲಿಂಗ ಪೂಜಾರಿ ಎಸ್.ಡಿ.ಎಂ.ಸಿ ಅಧ್ಯಕ್ಷರು ಸರಕಾರಿ ಪ್ರೌಢಶಾಲೆ ಭೀಮ ನಗರ ಚಿಕ್ಕಮಣೂರ
ಕೋಟ್
ಈ ಹಿಂದಿನ ಕ್ಷೇತ್ರಶಿಕ್ಷಣಾಧಿಕಾರಿಗಳಿಗೆ ಹಲವಾರು ಬಾರಿ ಲಿಖಿತ ಮತ್ತು ಮೌಖಿಕ ಮನವಿ ಮಾಡಿದ್ದೇವೆ. ಅವರು ಸೌಜನ್ಯಕ್ಕೂ ಶಾಲೆಯ ಪರಿಸ್ಥಿಯ ಕುರಿತು ಮೇಲಾಧಿಕಾರಿಗಳಿಗೆ ಪತ್ರ ಬರೆಯದೇ ಇರುವದು ಅತ್ಯಂತ ದುರ್ದೈವ.
ಬಾದಶಹಾ ಶೇಖ ಎಸ್.ಡಿ.ಎಂ.ಸಿ ಸದಸ್ಯರು ಸರಕಾರಿ ಪ್ರೌಢಶಾಲೆ ಭೀಮ ನಗರ ಚಿಕ್ಕಮಣೂರ
ಫೋಟೊ ಕ್ಯಾಫ್ಸನ್ ೧೭ ಇಂಡಿ ೦೧ : ಇಂಡಿ ತಾಲೂಕಿನ ಭೀಮ ನಗರ ಶಾಲೆಯ ಸ್ಥಿತಿ

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್