Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಚಿಕ್ಕಮಣೂರದ ಭೀಮ ನಗರ ಸರಕಾರಿ ಶಾಲೆಯ ದುಸ್ಥಿತಿ

ಇಂಡಿ : ತಾಲೂಕಿನ ಚಿಕ್ಕಮಣೂರದ ಭೀಮ ನಗರ ಸರಕಾರಿ ಶಾಲೆಯ ಸ್ಥಿತಿ ದುಸ್ಥಿತಿಯಲ್ಲಿದೆ. ಇಲ್ಲಿ ಒಂದರಿಂದ ಏಳನೆಯ ತರಗತಿಯ ವರೆಗೆ ವರ್ಗಗಳು ಇವೆ. ಈ ಶಾಲೆಯಲ್ಲಿ ೧೦೫ ಮಕ್ಕಳು ಓದುತ್ತಿದ್ದಾರೆ.
ಇಲ್ಲಿ ಆರು ಕೊಠಡಿಗಳಿವೆ. ಅದರಲ್ಲಿ ಒಂದು ಮಾತ್ರ ಒಳ್ಳೆಯ ಸ್ಥಿತಿಯಲ್ಲಿದ್ದು ಎರಡು ಕೋಣೆಗಳು ಪೂರ್ಣವಾಗಿ ಬಿದ್ದಿವೆ. ಮತ್ತು ಎರಡು ಕೋಣೆಗಳು ಮಳೆ ಬಂದರೆ ಸಂಪೂರ್ಣ ಸೋರುತ್ತಿವೆ. ಒಂದು ಮೇಲ್ಛಾವಣೆಯಿಂದ ಸಿಮೆಂಟ ಉದುರಿ ಬಿಳುತ್ತಿದೆ. ಹೀಗಾಗಿ ಒಂದೇ ಕೋಣೆಯಲ್ಲಿ ಮಾತ್ರ ಎಲ್ಲ ವಿದ್ಯಾರ್ಥಿಗಳು ಓದುವ ಅನಿವಾರ್ಯತೆ ಎದುರಾಗಿದೆ.
ಒಂದು ಕೋಣೆಯಲ್ಲಿ ತರಗತಿಗಳು ತೆಗೆದುಕೊಂಡು ಎರಡು ತರಗತಿಗಳಿಗೆ ಕೋಣೆಗೆ ಹತ್ತಿದ ಕಂಪೌಂಡದಲ್ಲಿ ಮತ್ತು ಎರಡು ತರಗತಿಗಳಿಗೆ ಗಿಡದ ಕೆಳಗೆ ತರಗತಿ ನಡೆಸುತ್ತಿದ್ದಾರೆ.
ಇಲ್ಲಿ ಮಳೆಯಾದರೆ ಮೊದಲು ಶಿಕ್ಷಕರು ವಿದ್ಯಾರ್ಥಿಗಳನ್ನು ಮನೆಗೆ ಕಳುಹಿಸುತ್ತಾರೆ.
ಶಾಲೆಯ ಎಸ್.ಡಿ.ಎಂ.ಸಿ ಅಧ್ಯಕ್ಷ ಗಡ್ಡಿಲಿಂಗ ಪೂಜಾರಿ ಶಾಲೆಗೆ ಕೋಣೆ ಕಟ್ಟಿಸಿ ಕೊಡುವಂತೆ ಗ್ರಾ.ಪಂ ಅಧ್ಯಕ್ಷರಿಗೆ, ಗ್ರಾ.ಪಂ ಪಿಡಿಒ, ತಾಪಂ ಇಒ ಮತ್ತು ಶಿಕ್ಷಣ ಇಲಾಖೆ ಅಧಿಕಾರಿ ಹಲವಾರು ಬಾರಿ ಮನವಿ ಮಾಡಿದ್ದಾರೆ. ಆದರೆ ಏನೂ ಪ್ರಯೋಜನವಾಗಿಲ್ಲ.
ಕೋಟ್
ಈ ಶಾಲೆಗೆ ಕೋಣೆಗಳನ್ನು ಕಟ್ಟಿಸಿ ಕೋಡಬೇಕು. ಇಲ್ಲದಿದ್ದರೆ ಎಲ್ಲ ಎಸ್.ಡಿ.ಎಂ.ಸಿ ಸದಸ್ಯರು ಮತ್ತು ಪಾಲಕರ ಜೊತೆ ಗ್ರಾಮಸ್ಥರ ಸಹಕಾರದೊಂದಿಗೆ ಶಾಲೆಯ ಎದುರು ಇಲ್ಲವೆ ಶಿಕ್ಷಣ ಇಲಾಖೆ ಎದುರು ಧರಣಿ ಸತ್ಯಾಗ್ರಹ ಮಾಡಲಾಗುವದು.
ಗಡ್ಡಿಲಿಂಗ ಪೂಜಾರಿ ಎಸ್.ಡಿ.ಎಂ.ಸಿ ಅಧ್ಯಕ್ಷರು ಸರಕಾರಿ ಪ್ರೌಢಶಾಲೆ ಭೀಮ ನಗರ ಚಿಕ್ಕಮಣೂರ
ಕೋಟ್
ಈ ಹಿಂದಿನ ಕ್ಷೇತ್ರಶಿಕ್ಷಣಾಧಿಕಾರಿಗಳಿಗೆ ಹಲವಾರು ಬಾರಿ ಲಿಖಿತ ಮತ್ತು ಮೌಖಿಕ ಮನವಿ ಮಾಡಿದ್ದೇವೆ. ಅವರು ಸೌಜನ್ಯಕ್ಕೂ ಶಾಲೆಯ ಪರಿಸ್ಥಿಯ ಕುರಿತು ಮೇಲಾಧಿಕಾರಿಗಳಿಗೆ ಪತ್ರ ಬರೆಯದೇ ಇರುವದು ಅತ್ಯಂತ ದುರ್ದೈವ.
ಬಾದಶಹಾ ಶೇಖ ಎಸ್.ಡಿ.ಎಂ.ಸಿ ಸದಸ್ಯರು ಸರಕಾರಿ ಪ್ರೌಢಶಾಲೆ ಭೀಮ ನಗರ ಚಿಕ್ಕಮಣೂರ
ಫೋಟೊ ಕ್ಯಾಫ್ಸನ್ ೧೭ ಇಂಡಿ ೦೧ : ಇಂಡಿ ತಾಲೂಕಿನ ಭೀಮ ನಗರ ಶಾಲೆಯ ಸ್ಥಿತಿ
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ