Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಭೋಜ್​ಪುರಿ ಗಾಯಕ ಪವನ್​ಸಿಂಗ್ ಬಿಜೆಪಿ​ ಪಕ್ಷದಿಂದ ಉಚ್ಛಾಟನೆ

ಕಾರಕಟ್​ ,22: ಭಾರತೀಯ ಜನತಾ ಪಕ್ಷ(ಬಿಜೆಪಿ) ಭೋಜ್​ಪುರಿ ಗಾಯಕ ಹಾಗೂ ನಟ ಪವನ್​ಸಿಂಗ್​ ಅವರನ್ನು ಪಕ್ಷದಿಂದ ಹೊರಹಾಕಿದೆ. ಲೋಕಸಭಾ ಚುನಾವಣೆಯಲ್ಲಿ ಎನ್​ಡಿಎ ಅಧಿಕೃತ ಅಭ್ಯರ್ಥಿ ವಿರುದ್ಧ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದಕ್ಕಾಗಿ ಪವನ್​ ಸಿಂಗ್ ಅವರನ್ನು ಪಕ್ಷದಿಂದ ಉಚ್ಛಾಟಿಸಲಾಗಿದೆ.

ಕಾರಕಟ್​ ಲೋಕಸಭಾ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುವ ನಿರ್ಧಾರವನ್ನು ಪವನ್​ಸಿಂಗ್ ಈ ಹಿಂದೆಯೇ ಪ್ರಕಟಿಸಿದ್ದರು. ಬಿಹಾರದ ಕಾರಕಟ್​ ಲೋಕಸಭಾ ಕ್ಷೇತ್ರದಿಂದ ಎನ್​ಡಿಎ ಅಧಿಕೃತ ಅಭ್ಯರ್ಥಿ ಉಪೇಂದ್ರ ಕುಶ್ವಾಹ ವಿರುದ್ಧ ಪವನ್ ಸಿಂಗ್ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದಾರೆ.

ಪವನ್​ಸಿಂಗ್ ತಾಯಿ ಪ್ರತಿಮಾ ದೇವಿ ಕಾರಕಟ್​ ಲೋಕಸಭಾ ಕ್ಷೇತ್ರದಿಂದ ತಮ್ಮ ಉಮೇದುವಾರಿಕೆಯನ್ನು ಹಿಂಪಡೆದಿದ್ದಾರೆ. ಆದರೆ ಬಿಜೆಪಿಯ ಒತ್ತಡದ ನಡುವೆಯೂ ಅವರ ಪುತ್ರ ಕ್ಷೇತ್ರದಲ್ಲಿ ನಿಂತಿದ್ದಾರೆ.

ಬಿಜೆಪಿ ಮೊದಲು ಪವನ್​ ಸಿಂಗ್ ಅವರನ್ನು ಪಶ್ಚಿಮ ಬಂಗಾಳದ ಅಸನ್ಸೋಲ್​ನಿಂದ ಕಣಕ್ಕಿಳಿಸಿತ್ತು. ಆ ವೇಳೆ ಪವನ್​ ಸಿಂಗ್ ತುಂಬಾ ಸಂಭ್ರಮಿಸಿದ್ದರು. ಆದರೆ ಅವರ ಹಾಡುಗಳಿಗೆ ಸಂಬಂಧಿಸಿದಂತೆ ಬಂಗಾಳದಲ್ಲಿ ಪ್ರತಿಭಟನೆಗಳು ನಡೆದ ಬಳಿಕ ಹಿಂದೆ ಸರಿದರು. ಪಶ್ಚಿಮ ಬಂಗಾಳದ ಅಸನ್ಸೋಲ್​ನಿಂದ ಬಿಜೆಪಿ ಟಿಕೆಟ್ ತಿರಸ್ಕರಿಸಿ ಕಾರಕಟ್​ನಿಂದ ಸ್ವತಂತ್ರ ಅಭ್ಯರ್ಥಿಯಾಗಿ ಚುನಾವಣೆಗೆ ಸ್ಪರ್ಧಿಸಲು ಸಿಂಗ್ ನಿರ್ಧರಿಸಿದ್ದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ