ಏಪ್ರಿಲ್ 4ರಂದು ನಗರದ ಅಂಬೇಡ್ಕರ್ ರಸ್ತೆಯ ವಿವಿ ಟವರ್ನಲ್ಲಿರುವ ನಿಗಮದ ಕಚೇರಿ ಸೇರಿದಂತೆ ಹಗರಣದ ಆರೋಪಿಗಳು ಮತ್ತು ಅನುಮಾನ ಇರುವವರಿಗೆ ಸಂಬಂಧಿಸಿದ ಸ್ಥಳಗಳಲ್ಲ ದಾಳಿ ಮಾಡಿ ಇಡಿ ಅಧಿಕಾರಿಗಳು ಶೋಧ ಮಾಡಿದ್ದರು. ಈ ವೇಳೆ ನಾಗರಾಜಪ್ಪ ಅಕ್ರಮ ವರ್ಗಾವಣೆಯಲ್ಲಿ ಭಾಗಿಯಾಗಿದ್ದು ಪತ್ತೆ ಆಗಿದೆ.
ನಕಲಿ ಫಲಾನುಭವಿಗಳ ಖಾತೆ ಬಳಸಿಕೊಂಡು ಕೆಬಿಡಿಸಿಯಿಂದ ಹಣವನ್ನು ಫ್ರೆಂಡ್ಸ್, ಕುಟುಂಬ ಸದಸ್ಯರ ಖಾತೆಗಳಿಗೆ ವರ್ಗಾವಣೆ ಮಾಡಿದ್ದಾರೆ. ಹಾಗಾಗಿ ದಾಳಿ ವೇಳೆ ಸಂಗ್ರಹಿಸಿದ ಪುರಾವೆಗಳ ಆಧಾರದಡಿ ಬಂಧಿಸಲಾಗಿದೆ. ಬಳಿಕ ಅವರನ್ನು ವಿಶೇಷ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು 14 ದಿನಗಳ ಇ.ಡಿ ಕಸ್ಟಡಿಗೆ ನೀಡಿ ಆದೇಶ ಹೊರಡಿಸಿದೆ.
ಏನು ಹಗರಣ?
2021-22ನೇ ಸಾಲಿನಲ್ಲಿ ಉದ್ಯಮಿಗಳಿಗೆ ಸಾಲ ನೀಡುವಾಗ ಅಕ್ರಮ ನಡೆದಿದ್ದು, ಲಕ್ಷಾಂತರ ರೂ ಸಾಲ ಕೊಡಿಸುವುದಾಗಿ ಸಾರ್ವಜನಿಕ ದಾಖಲೆ ದುರ್ಬಳಕೆ ಜೊತೆಗೆ 10 ಕೋಟಿ ರೂ. ಹೆಚ್ಚು ಹಣ ಅಕ್ರಮವಾಗಿ ವರ್ಗಾವಣೆ ಮಾಡಿದ ಆರೋಪ ಕೇಳಿಬಂದಿತ್ತು.