Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸೆಪ್ಟೆಂಬರ್ 28ರಿಂದ ಕನ್ನಡದ ಬಿಗ್‌ಬಾಸ್‌ ಶೋ ಪ್ರಾರಂಭ; ಯಾರೆಲ್ಲ ದೊಡ್ಮನೆಗೆ ಎಂಟ್ರಿ?

ಬೆಂಗಳೂರು:   ‘ಬಿಗ್ ಬಾಸ್ ಕನ್ನಡ ಸೀಸನ್ 12’ರ ಆರಂಭಕ್ಕೆ ದಿನಗಣನೆ ಶುರುವಾಗಿದೆ. ಸೆಪ್ಟೆಂಬರ್ 28ರಂದು ಶೋ ಪ್ರಾರಂಭ ಆಗುತ್ತಿದೆ. ಈ ಶೋಗಾಗಿ ಫ್ಯಾನ್ಸ್ ಕಾದಿದ್ದಾರೆ. ಇದರ ಪ್ರೋಮೋ ಸೆಪ್ಟೆಂಬರ್ 2ರಂದು ರಿಲೀಸ ಆಯಿತು. ಈ ಪ್ರೋಮೋ ಶೂಟ್​ನ ಝಲಕ್​ನ ಕಲರ್ಸ್ ಕನ್ನಡ ವಾಹಿನಿ ಹಂಚಿಕೊಂಡಿದೆ.

ಬಿಗ್ ಬಾಸ್ 12 ಪ್ರೋಮೋ ಹೊರಬಿದ್ದ ಬೆನ್ನಲ್ಲೇ ಈ ಬಾರಿ ಮನೆಯೊಳಗೆ ಹೋಗುವ ಸ್ಪರ್ಧಿಗಳು ಇವರೇ ಎಂಬ ಗುಸುಗುಸು ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ. ಅದು ಯಾರೆಲ್ಲ ಅಂದ್ರೆ, ಈ ಸಾಲಿನಲ್ಲಿ ಕೇಳಿಬರುತ್ತಿರುವ ಮೊದಲ ಹೆಸರು ಸಾಗರ್ ಬಿಳಿಗೌಡ. ಸೀಸನ್ 11ರ ಸ್ಪರ್ಧಿ ಗೌತಮಿ ಜಾಧವ್ ಅವರ ಸತ್ಯ ಸೀರಿಯಲ್​ನಲ್ಲಿ ಸಾಗರ್ ಹೀರೋ ಆಗಿ ಕಾಣಿಸಿಕೊಂಡಿದ್ದರು. ಇನ್ನು ಎರಡನೇ ಹೆಸರು ಶ್ವೇತಾ ಪ್ರಸಾದ್. ಆರಂಭದಲ್ಲಿ ಧಾರಾವಾಹಿಗಳ ಮೂಲಕ ಶ್ವೇತಾ ಗಮನ ಸೆಳೆದವರು. ಆ ಬಳಿಕ ಅವರು ಆರ್​ಜೆ ಪ್ರದೀಪ್ ಜೊತೆ ವಿವಾಹ ಮಾಡಿಕೊಂಡಿದ್ದಾರೆ.


ಝೀ ಕನ್ನಡದಲ್ಲಿ ಪ್ರಸಾರ ಕಂಡ ಭರ್ಜರಿ ಬ್ಯಾಚುಲರ್ಸ್ ಸೀಸನ್ 2ನ ಸ್ಪರ್ಧಿ ಅನನ್ಯಾ ಅಮರ್ ಈ ಬಾರಿ ಬಿಗ್ ಬಾಸ್ ಮನೆಗೆ ಹೋಗಲಿದ್ದಾರೆ ಎನ್ನಲಾಗಿದೆ. ಇನ್ನು ಪತ್ರಿಕೋದ್ಯಮ ಕೋಟಾದಿಂದ ಈ ಬಾರಿ ಜಯಪ್ರಕಾಶ್ ಶೆಟ್ಟಿ ಬಿಗ್ ಬಾಸ್​ಗೆ ಬರಲಿದ್ದಾರೆ ಎಂಬ ಪೋಸ್ಟ್ ವೈರಲ್ ಆಗಿದೆ.


ಇವರ ಜೊತೆಗೆ ಕೆಜಿಎಫ್‌ ಸಿನಿಮಾದ ಮೂಲಕ ದೇಶಾದ್ಯಂತ ಸದ್ದು ಮಾಡಿದವರು ಅರ್ಚನಾ ಜೋಯಿಸ್‌ ಬಿಗ್ ಬಾಸ್​ಗೆ ಪ್ರವೇಶಿಸಲಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ. ಕಳೆದ ಕೆಲವು ವರ್ಷಗಳಿಂದ ಡಾ ಬ್ರೋ ಅಲಿಯಾಸ್ ಗಗನ್ ಶ್ರೀನಿವಾಸ್ ಕೂಡ ಈ ಪಟ್ಟಿಯಲ್ಲಿ ಇದ್ದಾರೆ. ಸೀತಾ ರಾಮ ಸೀರಿಯಲ್‌ನಲ್ಲಿ ನಟಿಸಿದ್ದ ಗಗನ್ ದೊಡ್ಮನೆಯೊಳಗೆ ಕಾಲಿಡಬಹುದು ಎಂಬ ಗುಸು-ಗುಸು ಇದೆ. ಜೊತೆಗೆ ಇದೇ ಧಾರಾವಾಹಿಯಲ್ಲಿ ವಿಲನ್ ಪಾತ್ರ ಮಾಡಿದ ದಿವಂಗತ ನಟ ಲೋಕೇಶ್ - ಗಿರಿಜಾ ಲೋಕೇಶ್ ದಂಪತಿಯ ಪುತ್ರಿ ಪೂಜಾ ಲೋಕೇಶ್ ಕೂಡ ಮನೆಯೊಳಗೆ ಕಾಲಿಡಬಹುದು. ನೂರು ಜನ್ಮಕೂ, ಗೀತಾ ಸೀರಿಯಲ್‌ನಲ್ಲೂ ನಟಿಸಿದ್ದ ಧನುಷ್ ಗೌಡ ಈ ಬಾರಿ ಬಿಗ್ ಬಾಸ್ ಸ್ಪರ್ಧಿಯಾಗಬಹುದು ಎನ್ನಲಾಗಿದೆ.

Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ