Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ನನ್ನ ವೃತ್ತಿಜೀವನದ ಬಿಗ್ ಬಜೆಟ್ ಚಿತ್ರ ಕೃಷ್ಣಂ ಪ್ರಣಯ ಸಖಿ ಗೋಲ್ಡನ್ ಸ್ಟಾರ್ ಗಣೇಶ್  

     ತ್ರಿಶೂಲ್ ಎಂಟರ್ಟೈನ್ಮೆಂಟ್ ಲಾಂಛನದಲ್ಲಿ ಪ್ರಶಾಂತ್ ಜಿ ರುದ್ರಪ್ಪ  ನಿರ್ಮಿಸಿರುವ, ಶ್ರೀನಿವಾಸರಾಜು ನಿರ್ದೇಶನದ ಹಾಗೂ ಗೋಲ್ಡನ್ ಸ್ಟಾರ್ ಗಣೇಶ್ ನಾಯಕರಾಗಿ ನಟಿಸಿರುವ 'ಕೃಷ್ಣಂ ಪ್ರಣಯ ಸಖಿ' ಚಿತ್ರದ ಎರಡು ಹಾಡುಗಳು ಬಿಡುಗಡೆಯಾಗಿದ್ದು ಪ್ರೇಕ್ಷಕರ ಮನ ಗೆದ್ದಿದೆ.

     ಆಗಸ್ಟ್ ಹದಿನೈದರಂದು ಬಹು ನಿರೀಕ್ಷಿತ ಈ ಚಿತ್ರ ಬಿಡುಗಡೆಯಾಗಲಿದೆ.


     "ದಂಡುಪಾಳ್ಯ ಚಿತ್ರದ ನಿರ್ದೇಶಕ ಶ್ರೀನಿವಾಸರಾಜು ಅವರು ಚಿತ್ರದ ಕಥೆ ಹೇಳಲು ಬರುತ್ತಿದ್ದಾರೆ ಎಂದಾಗ, ಅವರು ನನ್ನ ಜಾನರ್ ಬದಲಾಯಿಸುವ ಕಥೆ ಮಾಡಿರಬಹುದು ಅಂದುಕೊಂಡೆ. ಆದರೆ  ಆರಂಭದಲ್ಲೇ ಅವರು ಎಂಟು ನಾಯಕಿಯರು ಎಂದಾಗ,‌ ಓ ಇದು ನನ್ನ ಜಾನರ್ ನ ಚಿತ್ರ ಅನಿಸಿತು. 'ಕೃಷ್ಣಂ ಪ್ರಣಯ ಸಖಿ' ಉತ್ತಮ ಕಥಾಹಂದರ ಹೊಂದಿರುವ ಚಿತ್ರ.  ಕನ್ನಡ ಚಿತ್ರರಂಗದ ಹಿರಿಯ ನಟರೊಂದಿಗೆ ಈ ಚಿತ್ರದಲ್ಲಿ ನಟಿಸಿದ್ದು ಸಂತೋಷವಾಯಿತು. ನೋಡುಗರಿಗೂ ಈ ಚಿತ್ರ ಇಷ್ಟವಾಗುತ್ತದೆ. ಅಂತಹ ಉತ್ತಮ ಚಿತ್ರ ಮಾಡಿದ್ದಾರೆ ಶ್ರೀನಿವಾಸರಾಜು.  ಪ್ರಶಾಂತ್ ಅದ್ದೂರಿಯಾಗಿ ನಿರ್ಮಾಣ ಮಾಡಿದ್ದಾರೆ . 'ಕೃಷ್ಣಂ ಪ್ರಣಯ ಸಖಿ' ನನ್ನ ಈವರೆಗಿನ ವೃತ್ತಿಜೀವನದ ಬಿಗ್ ಬಜೆಟ್ ನ ಚಿತ್ರ.  ನೋಡಿ ಪ್ರೋತ್ಸಾಹಿಸಿ ಎಂದು ಗೋಲ್ಡನ್ ಸ್ಟಾರ್ ಗಣೇಶ್ ಮನವಿ ಮಾಡಿದರು.


     "ಇದು ಗಣೇಶ್ ಅವರಿಗೆ ಸೂಕ್ತವಾದ ಕಥೆ. ಅವರ ಹಾಗೂ ಚಿತ್ರದಲ್ಲಿ ನಟಿಸಿರುವ ಎಲ್ಲಾ ಕಲಾವಿದರ ಅಭಿನಯ ಉತ್ತಮವಾಗಿ ಮೂಡಿಬಂದಿದೆ. ತಂತ್ರಜ್ಞರ ಕಾರ್ಯವೈಖರಿ ಕೂಡ ಚೆನ್ನಾಗಿದೆ.  ಅರ್ಜುನ್ ಜನ್ಯ ಸಂಗೀತ ನೀಡಿರುವ ಆರು ಹಾಡುಗಳು ಈ ಚಿತ್ರದಲ್ಲಿದ್ದು, ಎರಡು ಹಾಡುಗಳು ಈಗಾಗಲೇ ಆನಂದ್ ಆಡಿಯೋ ಮೂಲಕ ಬಿಡುಗಡೆಯಾಗಿದೆ. ಇತ್ತೀಚಿಗೆ ಬಿಡುಗಡೆಯಾದ 'ಚಿನ್ನಮ್ಮ' ಹಾಡಂತೂ ಈಗಾಗಲೇ ಅಧಿಕ ಸಂಖ್ಯೆಯಲ್ಲಿ ವೀಕ್ಷಣೆಯಾಗಿದೆ" ಎಂದು ನಿರ್ದೇಶಕ ಶ್ರೀನಿವಾಸರಾಜು ತಿಳಿಸಿದರು.


      ಚಿತ್ರ ಉತ್ತಮವಾಗಿ ಮೂಡಿಬಂದಿರುವುದಕ್ಕೆ ನಿರ್ಮಾಪಕರ ಪುತ್ರಿ ಪ್ರೇರಣಾ ಪ್ರಶಾಂತ್ ಧನ್ಯವಾದ ತಿಳಿಸಿದ ನಾಯಕಿಯರಾದ ಮಾಳವಿಕಾ ನಾಯರ್ ಹಾಗೂ ಶರಣ್ಯ ಶೆಟ್ಟಿ ತಮ್ಮ ಪಾತ್ರಗಳ ಬಗ್ಗೆ ಮಾಹಿತಿ ನೀಡಿದರು. ಹಿರಿಯ ನಟರಾದ ಶ್ರೀನಿವಾಸಮೂರ್ತಿ, ಸಾಧುಕೋಕಿಲ, ರಂಗಾಯಣ ರಘು, ಶಿವಧ್ವಜ್, ಗಿರಿ ಮುಂತಾದವರು 'ಕೃಷ್ಣಂ ಪ್ರಣಯ ಸಖಿ' ಚಿತ್ರದ ಕುರಿತು ಮಾತನಾಡಿದರು.

Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ