ಸದನದಲ್ಲಿ ಮೊಬೈಲ್ ನಿಷೇಧವನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವಂತೆ ಸ್ಪೀಕರ್ ಅವರನ್ನು ಒತ್ತಾಯಿಸಿದ ಸಿಎಂ ನಿತೀಶ್ ಕುಮಾರ್, “ಸದನದಲ್ಲಿ ಇದನ್ನು ಈಗಾಗಲೇ ನಿಷೇಧಿಸಲಾಗಿದೆ. ಮೊಬೈಲ್ ಫೋನ್ನೊಂದಿಗೆ ಬರುವವರನ್ನು ಸದನದಿಂದ ಹೊರಗೆ ಕಳುಹಿಸಬೇಕೆಂದು ನಾನು ನಿಮ್ಮನ್ನು (ಸ್ಪೀಕರ್) ವಿನಂತಿಸುತ್ತೇನೆ” ಎಂದು ಹೇಳಿದರು.
“ಈ ಹಿಂದೆ ನಾನು ಕೂಡ ಬಹಳ ಮೊಬೈಲ್ ಬಳಸುತ್ತಿದ್ದೆ. ಅದರಿಂದ ತೊಂದರೆ ಆಗುತ್ತದೆ ಎಂದು ತಿಳಿದ ನಂತರ ನಾನು 2019ರಲ್ಲಿ ಮೊಬೈಲ್ ಬಳಸುವುದನ್ನು ನಿಲ್ಲಿಸಿದ್ದೇವೆ. ಮೊಬೈಲ್ ಬಳಕೆ ಅಧಿಕವಾದರೆ ಮುಂದಿನ 10 ವರ್ಷಗಳಲ್ಲಿ ಜಗತ್ತು ಅಂತ್ಯಗೊಳ್ಳುತ್ತದೆ” ಎಂದು ನಿತೀಶ್ ಕುಮಾರ್ ಹೇಳಿದ್ದರು. ಬಿಹಾರದ ಸಿಎಂ ರಾಜ್ಯ ವಿಧಾನಸಭೆಯೊಳಗೆ ಆರ್ಜೆಡಿ ಶಾಸಕರಿಗೆ ಛೀಮಾರಿ ಹಾಕುತ್ತಿರುವ ವಿಡಿಯೋ ಆನ್ಲೈನ್ನಲ್ಲಿ ವೈರಲ್ ಆಗಿದೆ. ಇದಾದ ಬಳಿಕ ವಿರೋಧ ಪಕ್ಷಗಳ ನಾಯಕರು ವಿಧಾನಸಭೆಯೊಳಗೆ ಮೊಬೈಲ್ ಫೋನ್ ಬಳಕೆಯ ಬಗ್ಗೆ ಬಿಹಾರ ಸಿಎಂ ಆಕ್ಷೇಪ ವ್ಯಕ್ತಪಡಿಸಿದ್ದಕ್ಕಾಗಿ ಟೀಕಿಸಿದ್ದಾರೆ.
ಕಾಂಗ್ರೆಸ್ ನಾಯಕ ಅಭಿಷೇಕ್ ಮನು ಸಿಂಘ್ವಿ ಇಂದು ನಿತೀಶ್ ಕುಮಾರ್ ಆಕ್ಷೇಪ ವ್ಯಕ್ತಪಡಿಸುತ್ತಿರುವ ವಿಡಿಯೋವನ್ನು ಹಂಚಿಕೊಂಡಿದ್ದು, ಬಿಹಾರ ಸಿಎಂ ನಿತೀಶ್ ಕುಮಾರ್ ಅವರ ವಿರುದ್ಧ ವಾಗ್ದಾಳಿ ನಡೆಸಿದರು. “ಮೊಬೈಲ್ ಫೋನ್ಗಳಿಂದಾಗಿ 10 ವರ್ಷಗಳಲ್ಲಿ ಜಗತ್ತು ಕೊನೆಗೊಳ್ಳುತ್ತದೆ ಎಂದು ವಿಧಾನಸಭೆಯಲ್ಲಿ ಸಿಎಂ ಒಬ್ಬರು ಹೇಳುತ್ತಿದ್ದಾರೆ?! ಹುಚ್ಚುತನ ಮತ್ತು ಅಸಂಬದ್ಧ ಮಾತುಗಳಿಗೂ ಒಂದು ಮಿತಿ ಇದೆ!” ಎಂದು ಅವರು ಹೇಳಿದ್ದಾರೆ.