Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಜಂಗಲರಾಜ್‌ ವಿರುದ್ಧ ಬಿಹಾರ ಜನತೆ ಮತದಾನ - ಶಾಸಕ ಗುಡಗುಂಟಿ

ಜಮಖಂಡಿ;ಜಂಗಲರಾಜನ ಕಹಿ ಅನುಭವದ ವಿರುದ್ಧ ಬಿಹಾರ ಜನತೆ ಮತದಾನ ಮಾಡಿದ್ದಾರೆ ಎಂದು ಶಾಸಕ ಜಗದೀಶ ಗುಡಗುಂಟಿ ಹೇಳಿದರು. ಶನಿವಾರ ನಗರದ ಹನುಮಾನ ಚೌಕ್‌ನಲ್ಲಿ ಬಿಜೆಪಿವತಿಯಿಂದ ಏರ್ಪಡಿಸಿದ್ದ ವಿಜಯೋತ್ಸವ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದರು. ಬಿಹಾರದ ಜನತೆ ಅಭಿವೃದ್ಧಿ, ರಕ್ಷಣೆ, ಉದ್ಯೋಗ, ಆರ್ಥಿಕ ಪರಿಸ್ಥಿತಿ ಸುಧಾರಿಸಲು ಮತದಾನ ಮಾಡಿದ್ದು 203 ಸ್ಥಾನಗಳನ್ನು ಗೆಲ್ಲುವ ಮೂಲಕ ಎನ್‌ಡಿಎ ಐತಿಹಾಸಿಕ ದಾಖಲೆ ಮಾಡಿದೆ. ರಾಜ್ಯ ಸರ್ಕಾರದ ಪಂಚಗ್ಯಾರಂಟಿಗಳ ನೆಪದಲ್ಲಿ ಅಭಿವೃದ್ಧಿ ಕಾಮಗಾರಿಗಳನ್ನು ನಿರ್ಲಕ್ಷಿಸಿದೆ. ಇದರಿಂದ ಸಾರ್ವಜನಿಕರಿಗೆ ಮೂಲಭೂತ ಸೌಲಭ್ಯಗಳು ದೊರೆಯುತ್ತಿಲ್ಲ. ಮುಂದಿನ ದಿನಗಳಲ್ಲಿ ರಾಜ್ಯದಲ್ಲೂ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಲಿದೆ ಎಂದು ಹೇಳಿದರು. ರಾಜ್ಯ ಮಹಿಳಾ ಘಟಕದ ಉಪಾಧ್ಯಕ್ಷೆ ವಿಜಯಲಕ್ಷ್ಮೀ ತುಂಗಳ ಮಾತನಾಡಿ ಬಿಹಾರದ ಪ್ರಜ್ಞಾವಂತ ಮತದಾರರು ಪ್ರಭುದ್ಧತೆ ಯಿಂದ ಮತ ಚಲಾಯಿಸಿದ್ದಾರೆ. ಅಭಿವೃದ್ದಿಗೆ ಮತಗಳು ದೊರೆತಿವೆ. ನಿತಿಶ ಕುಮಾರ ಅವರ ಜನಪರ ಆಡಿತಕ್ಕೆ ಮತ್ತೆ ಮತದಾರರು ಅವಕಾಶ ನೀಡಿದ್ದಾರೆ ಎಂದು ಹೇಳಿದರು.

ಮುಖಂಡರಾದ ಏಗಪ್ಪ ಸವದಿ ಮಾತನಾಡಿ ಕಾಂಗ್ರೆಸ್‌ನ ಮುಖಂಡರ ಶತ ಪ್ರಯತ್ನಕ್ಕೆ ಬಿಹಾರದ ಪ್ರಜ್ಞಾವಂತ ಜನರು ಸೊಪ್ಪು ಹಾಕಿಲ್ಲ ಎಂಬುದನ್ನು ಕಾಂಗ್ರೆಸ್‌ ಅರ್ಥ ಮಾಡಿಕೊಳ್ಳಬೇಕು, ದೇಶವು ಹಿಂದು ರಾಷ್ಟ್ರವಾಗಿದೆ ಹಾಗೂ ಉಳಿಯುತ್ತದೆ. ದೇಶದ ಸಮಗ್ರ ಅಭಿವೃದ್ಧಿ ಕೆವಲ ಬಿಜೆಪಿಯಿಂದ ಮಾತ್ರಸಾಧ್ಯ ಎಂಬುದು ಎಲ್ಲರಿಗೂ ತಿಳಿದಿದೆ. ರಾಜ್ಯದಲ್ಲಿ ಅಧಿಕಾರ ನಡೆಸುತ್ತಿರುವ ಕಾಂಗ್ರೆಸ್‌ ಅಭಿವೃದ್ಧಿಯತ್ತ ಗಮನ ಹರಿಸಿಲ್ಲ ಹಗಲು ದರೋಡೆ ನಡೆದಿದೆ ಎಂದು ಆರೋಪಿಸಿದರು. ಮುಖಂಡರಾದ ಸಿ.ಟಿ.ಉಪಾಧ್ಯಾಯ ಅಜಯ ಕಡಪಟ್ಟಿ,ರಾಜಾಸಾಬ ಕಡಕೋಳ, ಶಂಕರ ಕಾಳೆ, ಗಣೇಶ ಶಿರಗಣ್ಣವರ ಮುಂತಾದವರು ಮಾತನಾಡಿದರು. ಗ್ರಾಮೀಣ ಮಂಡಲ ಅಧ್ಯಕ್ಷ ಮಲ್ಲು ದಾನಗೌಡ, ಗೀತಾ ಸೂರ್ಯವಂಶಿ, ನಾಗರಾಜ, ಶ್ರೀಧರ ಕಂಬಿ, ಸುನೀಲ, ವಿನಾಯಕ ಗವಳಿ, ಗುರುಪಾದಪ್ಪ ಮೆಂಡಿಗೇರಿ, ಸೇರಿದಂತೆ ಅನೇಕ ಕಾರ್ಯಕರ್ತರು ಮುಖಂಡರು ಇದ್ದರು. ನಗರದ ಹನುಮಾನ ಚೌಕ್‌ನಿಂದ ನಗರದ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿದ ಕಾರ್ಯಕರ್ತರು ಪಟಾಕಿ ಸಿಡಿಸಿ ಸಿಹಿ ಹಂಚಿ ವಿಜಯೋತ್ಸವ ಆಚರಿಸಿದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ