Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಅಮ್ಮನ ಸನ್ನಿದಿಯಲ್ಲಿ ಬಿಲ್ಲಾರಿ ಮುಹೂರ್ತ

      ಬಹುತೇಕ ಹೊಸಬರೇ ಸೇರಿ ಸಿದ್ದಪಡಿಸುತ್ತಿರುವ ’ಬಿಲ್ಲಾರಿ’ ಚಿತ್ರದ ಮುಹೂರ್ತ ಸಮಾರಂಭವು ಶ್ರೀ ಬಂಡೆ ಮಹಾಂಕಾಳಿ ದೇವಸ್ಥಾನದಲ್ಲಿ ಅದ್ದೂರಿಯಾಗಿ ನಡೆಯಿತು.


     ಕರ್ನಾಟಕ ಚಲನಚಿತ್ರ ನಿರ್ಮಾಪಕರ ಸಂಘದ ಅಧ್ಯಕ್ಷ ಉಮೇಶ್ ಬಣಕಾರ್ ಮೊದಲ ದೃಶ್ಯಕ್ಕೆ ಕ್ಲಾಪ್ ಮಾಡಿ ತಂಡಕ್ಕೆ ಶುಭ ಹಾರೈಸಿದರು. ನಿರ್ಮಾಪಕ ತಾಯಿ ಲಕ್ಷೀಧನಪಾಲ್ ಕ್ಯಾಮಾರ ಆನ್ ಮಾಡಿದರು. ಎವಿಕೆ ಪ್ರೊಡಕ್ಷನ್ ಅಡಿಯಲ್ಲಿ ರಿಶ್ವಿಕ್‌ಶೆಟ್ಟಿ ಕತೆ ಬರೆದು ನಿರ್ಮಾಣ ಮಾಡುವುದರ ಜತೆಗೆ ನಾಯಕನಾಗಿ ಅಭಿನಯಿಸುತ್ತಿದ್ದಾರೆ. ಗೋಕಾಕ್ ಮೂಲದ ಪಿ.ಎಲ್.ಭರಮಣ್ಣ ಚಿತ್ರಕತೆ-ನಿರ್ದೆಶನದ ಜವಬ್ದಾರಿಯನ್ನು ಹೊತ್ತುಕೊಳ್ಳುತ್ತಿದ್ದಾರೆ. ಶಿಲ್ಪಗೌಡ ಸಹ ನಿರ್ಮಾಪಕಿಯಾಗಿದ್ದಾರೆ.


      ನಿರ್ದೇಶಕ ಭರಮಣ್ಣ ಹೇಳುವಂತೆ "ಇದೊಂದು ಕಾಲ್ಪನಿಕ ಅಂಶಗಳನ್ನು ಒಳಗೊಂಡಿದೆ. ನಿಘಂಟಿನಲ್ಲಿ ಬಿಲ್ಲಾರಿಗೆ ಬೇರೆ ಅರ್ಥ ಇರಲಿದೆ. ಆದರೆ ನಮ್ಮ ಸಿನಿಮಾದಲ್ಲಿ ಪಾತ್ರದ ಹೆಸರು ಶೀರ್ಷಿಕೆಯಾಗಿದೆ. ಬಿಲ್ಸ್ ಬುಡಕಟ್ಟು ಜನಾಂಗದ ರಾಜನ ಐತಿಹಾಸಿಕ ಸೆಸ್ಪೆನ್ಸ್, ಥ್ರಿಲ್ಲರ್ ಕಥೆಯಾಗಿದೆ. ಭಾರತದಲ್ಲಿ ಇವರುಗಳು ಹನ್ನೊಂದು ಲಕ್ಷ ಜನಸಂಖ್ಯೆ ಇರಲಿದ್ದು, ಹೆಚ್ಚಿನ ಭಾಗ ಗುಜರಾತ್, ರಾಜಸ್ತಾನದಲ್ಲಿ ವಾಸವಾಗಿದ್ದಾರೆ. ಬೆಂಗಳೂರು, ಅರಸಿಕೆರೆ, ಹಾಸನ, ಅಣ್ಣಿಗೇರಿ, ಗಜೇಂದ್ರಗಡ, ಯಾಣ ಸುಂದರ ತಾಣಗಳಲ್ಲಿ ಚಿತ್ರೀಕರಣ ನಡೆಸಲು ಯೋಜನೆ ಹಾಕಲಾಗಿದೆ. ಕ್ಲೈಮಾಕ್ಸ್‌ದಲ್ಲಿ ಸಿದ್ದಾಂತದೊಂದಿಗೆ ಭಾಗ-2 ಬರಲಿದೆ ಎಂಬುದಾಗಿ ತೋರಿಸಲಾಗುವುದು. ಇನ್ನು ಹೆಚ್ಚಿನ ವಿವರ ನೀಡಿದರೆ, ಸಿನಿಮಾದ ಹೂರಣ ಬಿಟ್ಟುಕೊಟ್ಟಂತೆ ಆಗುತ್ತದೆ" ಎಂದು ಕುತೂಹಲ ಕಾಯ್ದಿರಿಸಿದರು.


       ರಾಜ ಮತ್ತು ಅಧಿಕಾರಿಯಾಗಿ ರಿಶ್ವಿಕ್‌ಶೆಟ್ಟಿ ನಾಯಕ. ಭಟ್ಟರ ಮಗಳಾಗಿ ಮೈಸೂರು ಕಡೆಯವರಾದ ಚೈತ್ರಾಲೋಕನಾಥ್ ನಾಯಕಿ. ಉಳಿದಂತೆ ನಾಗೇಂದ್ರಅರಸ್, ಪ್ರಕಾಶ್ ತುಮ್ಮಿನಾಡು, ಎಂ ಕೆ ಮಠ, ಕೆಂಪೆಗೌಡ, ಬಲರಾಮ್ ಪಂಚಾಲ್, ಮಜಾಭಾರತದ ಚಂದ್ರಪ್ರಭಾ, ’ಕಾಂತಾರ’ ಖ್ಯಾತಿಯ ನವೀನ್ ಬೊಂದೆಲ್ ಸಂಭಾಷಣೆ ಹಾಗೂ ನಟನೆ. ಇವರೊಂದಿಗೆ ಹಿರಿಯ ಕಲಾವಿದರು ನಟಿಸುತ್ತಿದ್ದಾರೆ.


      ನಾಲ್ಕು ಹಾಡುಗಳ ಪೈಕಿ, ಒಂದು ಗೀತೆಗೆ ಪ್ರಮೋದ್ ಮರವಂತೆ  ಪ್ರೇಮಗೀತೆಗೆ ಪದಗಳನ್ನು ಪೋಣಿಸಿದ್ದಾರೆ. ಸಂಗೀತ ಸುಭಾಷ್, ಛಾಯಾಗ್ರಹಣ ಅಗಸ್ತ್ಯ.ಯು.ಗೌಡ, ಕಲೆ ತಿರುಪತಿ.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ