ಅಧಿಕಾರಿಗಳ ನಿರ್ಲಕ್ಷ್ಯದಿಂದಾಗಿ ಹಣ ವಸೂಲಾತಿಯಾಗುತ್ತಿಲ್ಲ. ನಗರ ಸಭೆಗೆ ತನ್ನ ಆದಾಯ ಮೂಲವೇ ತೆರಿಗೆ ಹಣ, ಆದರೆ ಅದನ್ನೇ ವಸೂಲಿ ಮಾಡದೆ ಹಾಗೇ ಬಿಟ್ಟರೆ ನಗರದ ಅಭಿವೃದ್ಧಿಯಾದರೂ ಹೇಗೆ ಆಗುತ್ತದೆ ಎಂದು ಸಾರ್ವಜನಿಕರು ಪ್ರಶ್ನಿಸಿದ್ದಾರೆ.
ಪ್ರತಿ ತಿಂಗಳು ಸ್ವಲ್ಪ ಸ್ವಲ್ಪ ತೆರಿಗೆ ವಸೂಲಿ ಮಾಡಿದ್ದರೇ ಇಷ್ಟೊತ್ತಿಗಾಗಲೇ ತೆರಿಗೆ ಹಣ ನಗರಸಭೆಗೆ ಬರುತ್ತಿತ್ತು ಆದರೆ ಅಧಿಕಾರಿಗಳ ನಿರ್ಲಕ್ಷ್ಯದಿಂದಾಗಿ ಕೋಟ್ಯಾಂತರ ರೂಪಾಯಿ ತೆರಿಗೆ ಹಣ ವಸೂಲಾಗದೆ ಹಾಗೆ ಉಳಿದಿದೆ. ಇದು ಸಹಜವಾಗಿಯೇ ಸಾರ್ವಜನಿಕರ ಆಕ್ರೋಶಕ್ಕೂ ಕೂಡಾ ಕಾರಣವಾಗಿದೆ. 2010 ರಿಂದ 2025ರ ಜನವರಿವರೆಗೆ ಬ್ರಿಮ್ಸ್ ಆಸ್ಪತ್ರೆಯಿಂದ ನೀರಿನ ಕರ ಹಾಗೂ ಆಸ್ತಿಕರ ಒಟ್ಟು 9.77 ಲಕ್ಷ ರೂ. ನಗರಸಭೆಗೆ ಬರಬೇಕಿದೆ.