LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Entertainment News

ಬಿಂದಾಸ್ ಗೂಗ್ಲಿ ಸಂತೋಷ್ ಕುಮಾರ್ ಚಿತ್ರ ಯುವ ಸರ್ಕಾರ್







ಶ್ರೀಮತಿ ಪಾರ್ವತಮ್ಮ ರಾಜ್ ಕುಮಾರ್ ಅವರ ತಂಗಿಯ ಪುತ್ರ ಸಂತೋಷ್ ಕುಮಾರ್  ಈ ಹಿಂದೆ ಬಿಂದಾಸ್ ಗೂಗ್ಲಿ, ಕ್ಯಾಂಪಸ್ ಕ್ರಾಂತಿ ಸೇರಿದಂತೆ ಮೂರು ಚಿತ್ರಗಳನ್ನು ನಿರ್ದೇಶಿಸಿದ್ದರು‌.  ಇದೀಗ  ಅವರು ಸದ್ದಿಲ್ಲದೆ ತಮ್ಮ ನಿರ್ದೇಶನದ 4 ನೇ ಚಿತ್ರದ ಚಿತ್ರೀಕರಣ ಮುಗಿಸಿ ಪೋಸ್ಟ್ ಪ್ರೊಡಕ್ಷನ್ ಕೆಲಸಗಳನ್ನು ಕೊನೇ ಹಂತಕ್ಕೆ ತಂದಿದ್ದಾರೆ. ಆ ಚಿತ್ರದ ಹೆಸರು 'ಯುವ ಸರ್ಕಾರ್'.

     ತನ್ನ ಹಿಂದಿನ ಸಿನಿಮಾಗಳಂತೆ ಈ ಚಿತ್ರವನ್ನೂ ಸಹ ಸಂತೋಷ್ ಯೂಥ್ ಬೇಸ್ ಸಬ್ಜೆಕ್ಟ್ ಇಟ್ಟುಕೊಂಡೇ ಮಾಡಿದ್ದಾರೆ.  ಚಿತ್ರದ ಟೀಸರ್ ನ ವೀಕ್ಷಿಸಿ ಮೆಚ್ಚಿಕೊಂಡ  ಶಿವಣ್ಣ ಮಾತನಾಡಿ  "ಸಂತೋಷ್ ನಮ್ಮ ಚಿಕ್ಕಮ್ಮನ ಮಗ, ಯುವಜನರಿಗೆ ಹತ್ತಿರವಾಗುವಂಥ ಒಂದೊಳ್ಳೆ ಕಂಟೆಂಟ್ ಇಟ್ಟುಕೊಂಡು ಈ ಸಿನಿಮಾ ಮಾಡಿದ್ದಾರೆ" ಎಂದು ಶುಭ ಹಾರೈಸಿದರು.

     ಪ್ರೇಮಿಗಳ ದಿನದ ಅಂಗವಾಗಿ ಈ ಚಿತ್ರದ ರೊಮ್ಯಾಂಟಿಕ್ ಹಾಡನ್ನು ಹಿರಿಯ ನಿರ್ಮಾಪಕ  ಎಸ್.ಎ.ಚಿನ್ನೇಗೌಡ್ರು ಹಾಗೂ ಎಸ್.ಎ.ಗೋವಿಂದರಾಜ್ ಬಿಡುಗಡೆ ಮಾಡಿ ಮಾತನಾಡುತ್ತಾ "ಸಂತೋಷ್  ನಮ್ಮ ಕುಟುಂಬದವನು, ನನ್ನ ಪ್ರೀತಿಯ ತಂಗಿ ಮಗ, ಈಗಿನ ಹುಡುಗರಿಗೆ ಉತ್ತಮ ಸಂದೇಶ ಇಟ್ಟುಕೊಂಡು ಈ ಚಿತ್ರ ಮಾಡಿದ್ದಾನೆ. ಒಳ್ಳೇದಾಗಲಿ" ಎಂದು  ಶುಭ ಹಾರೈಸಿದರು. ನಂತರ ಚಿತ್ರದ ಟೀಸರನ್ನು ಭಾಮ ಹರೀಶ್, ಎ.ಗಣೇಶ್,‌ ಮಾಧವಿ ಸೇರಿ ಬಿಡುಗಡೆ ಮಾಡಿದರು.

   ಈ ಚಿತ್ರದಲ್ಲಿ ವೀರೇನ್ ಕೇಶವ್ ಅವರು ನಾಯಕನಾಗಿ ನಟಿಸಿದ್ದು, ನಾಯಕಿಯರಾಗಿ ಬಿಗ್ ಬಾಸ್ ಜಾಹ್ನವಿ, ಶೃತಿ ದೇಶಪಾಂಡೆ ಹಾಗೂ ಅಲ್ಫಿಯಾ ನಟಿಸಿದ್ದಾರೆ. ಈ ಚಿತ್ರವನ್ನು  ಕನ್ನಡ, ಹಿಂದಿ ಹಾಗೂ ತಮಿಳು ಭಾಷೆಯಲ್ಲಿ ನೇರವಾಗಿ ಚಿತ್ರೀಕರಿಸಲಾಗಿದೆ. ಹಾಗಾಗಿ ಚಿತ್ರದಲ್ಲಿ ಮೂರು ಭಾಷೆಯ ಕಲಾವಿದರೂ ನಟಿಸಿದ್ದಾರೆ. ನಟ ಧರ್ಮಕೀರ್ತಿರಾಜ್ ಹಾಗೂ ತಂದೆ ಕೀರ್ತಿರಾಜ್ ಕೂಡ ಚಿತ್ರದಲ್ಲಿ  ಪ್ರಮುಖ ಪಾತ್ರ ನಿರ್ವಹಿಸಿದ್ದಾರೆ.


       ಈ ಸಂದರ್ಭದಲ್ಲಿ ಮಾತನಾಡಿದ ನಿರ್ದೇಶಕ, ನಿರ್ಮಾಪಕ ಸಂತೋಷ್ ಕುಮಾರ್  "ತಾಯಿ ಮಗನ ಮಧ್ಯೆ ನಡೆಯುವ ಎಮೋಷನಲ್  ಕಥೆಯಿದು. ತಮಿಳಲ್ಲಿ 'ಯುವನ್ ರಾಬಿನ್ ಹುಡ್, ಹಿಂದಿಯಲ್ಲಿ ಅದೇ 'ಯುವ ಸರ್ಕಾರ್' ಎಂಬ ಹೆಸರನ್ನಿಟ್ಟಿದ್ದೇವೆ. ಆಕೆ ತನ್ನ ಮಗನನ್ನು ಗಾಂಧಿಯ ತರಹ ಬೆಳೆಸುತ್ತಾಳೆ, ಆದರೆ ಆ ಮಗ ಯಾಕೆ ರಾಬಿನ್ ಹುಡ್ ರೀತಿ ಆಗ್ತಾನೆ ಅನ್ನೋದೇ ಈ ಚಿತ್ರದ ಕಥೆ. ಆ ರಾಬಿನ್ ಹುಡ್ ಬಡವರಿಗೆ ಸಹಾಯ ಮಾಡ್ತಿದ್ದ, ಆತನನ್ನು ಒಬ್ಬ ದರೋಡೆಕೋರನ ಥರ ತೋರಿಸಿದ್ದರು. ಆದರೆ ನಾವಿಲ್ಲಿ ಜನಸ್ನೇಹಿಯಾಗಿ  ತೋರಿಸಿದ್ದೇವೆ. ನೇರವಾಗಿ ಮೂರು ಭಾಷೆಯಲ್ಲಿ ಚಿತ್ರೀಕರಿಸಿದ್ದೇವೆ.

ಅಸಹಾಯಕರಿಗೆ ಸಹಾಯ ಮಾಡುವುದೇ ಆತನ ವ್ಯಕ್ತಿತ್ವ. ಆತನ‌ ತಂದೆ ಒಬ್ಬ ದರೋಡೆಕೋರ‌, ಈ‌ ಕಲಿಯುಗದಲ್ಲಿ  ಗಾಂಧಿ ಥರ ಇರಲಿಕ್ಕಾಗಲ್ಲ ಎಂದು ನಾಯಕ ಒಳ್ಳೆಯ ಕೆಲಸ ಮಾಡ್ತಾ ಹೋಗ್ತಾನೆ. ಮಧುವಂತಿ ಅವರ ಅಡ್ವೋಕೇಟ್ ಪಾತ್ರ ಮಾಡಿದ್ದಾರೆ. ಸದ್ಯ ಚಿತ್ರದ ಪೋಸ್ಟ್ ಪ್ರೊಡಕ್ಷನ್ ಕೆಲಸ ನಡೆಯುತ್ತಿದೆ. ಚಿತ್ರದಲ್ಲಿ 5 ಹಾಡುಗಳಿದ್ದು,

4 ಫೈಟ್ ಗಳಿವೆ. ಇದೊಂದು ಇನ್ ಸ್ಪೈರ್ ಮಾಡುವಂಥ ಸಿನಿನಾ. ಚೆನ್ನೈ, ಚಿಕ್ಕಮಗಳೂರು, ಮೇಲುಕೋಟೆಯ ಸುತ್ತಮುತ್ತ  ಚಿತ್ರದ ಚಿತ್ರೀಕರಣ ನಡೆಸಲಾಗಿದ್ದು, ಏಪ್ರಿಲ್ ನಲ್ಲಿ ಚಿತ್ರದ ಫಸ್ಟ್ ಕಾಪಿ ಹೊರಬರಲಿದೆ. ಮೇ ಜೂನ್ ನಲ್ಲಿ ರಿಲೀಸ್ ಮಾಡುವ ಯೋಜನೆಯಿದೆ. ವೈಜಿ ಅವರು ಒಬ್ಬ ರಾಜಕಾರಣಿಯಾಗಿ ಕಾಣಿಸಿಕೊಂಡಿದ್ದಾರೆ" ಎಂದು ವಿವರಿಸಿದರು.

     ಉಳಿದಂತೆ ಚಿತ್ರದ ನಾಯಕ ವೀರೆನ್ ಕೇಶವ್, ಧರ್ಮ ಕೀರ್ತಿರಾಜ್, ನಾಯಕಿಯರು ತಮ್ಮ ಪಾತ್ರಗಳ ಕುರಿತಂತೆ ಮಾತನಾಡಿದರು. ಡಾ.ಶಿವಪ್ಪ ಮಾತನಾಡುತ್ತ "ಸಂತೋಷ್ ಅವರಿಗೆ ಮಾರ್ಗದರ್ಶಕನಾಗಿ ಅವರ ಜತೆ ಇದ್ದೇನೆ. ಸಿನಿಮಾ ಬಗ್ಗೆ ಅವರಿಗಿರುವ ಕಾಳಜಿ ದೊಡ್ಡದು" ಎಂದರು. ಬಿಗ್ ಬಾಸ್ ಅಶ್ವಿನಿಗೌಡ ಕೂಡ ಅತಿಥಿಯಾಗಿ ಭಾಗವಹಿಸಿದ್ದರು.






Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್