Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬಿಂದಾಸ್ ಗೂಗ್ಲಿ ಸಂತೋಷ್ ಕುಮಾರ್ ಚಿತ್ರ ಯುವ ಸರ್ಕಾರ್







ಶ್ರೀಮತಿ ಪಾರ್ವತಮ್ಮ ರಾಜ್ ಕುಮಾರ್ ಅವರ ತಂಗಿಯ ಪುತ್ರ ಸಂತೋಷ್ ಕುಮಾರ್  ಈ ಹಿಂದೆ ಬಿಂದಾಸ್ ಗೂಗ್ಲಿ, ಕ್ಯಾಂಪಸ್ ಕ್ರಾಂತಿ ಸೇರಿದಂತೆ ಮೂರು ಚಿತ್ರಗಳನ್ನು ನಿರ್ದೇಶಿಸಿದ್ದರು‌.  ಇದೀಗ  ಅವರು ಸದ್ದಿಲ್ಲದೆ ತಮ್ಮ ನಿರ್ದೇಶನದ 4 ನೇ ಚಿತ್ರದ ಚಿತ್ರೀಕರಣ ಮುಗಿಸಿ ಪೋಸ್ಟ್ ಪ್ರೊಡಕ್ಷನ್ ಕೆಲಸಗಳನ್ನು ಕೊನೇ ಹಂತಕ್ಕೆ ತಂದಿದ್ದಾರೆ. ಆ ಚಿತ್ರದ ಹೆಸರು 'ಯುವ ಸರ್ಕಾರ್'.

     ತನ್ನ ಹಿಂದಿನ ಸಿನಿಮಾಗಳಂತೆ ಈ ಚಿತ್ರವನ್ನೂ ಸಹ ಸಂತೋಷ್ ಯೂಥ್ ಬೇಸ್ ಸಬ್ಜೆಕ್ಟ್ ಇಟ್ಟುಕೊಂಡೇ ಮಾಡಿದ್ದಾರೆ.  ಚಿತ್ರದ ಟೀಸರ್ ನ ವೀಕ್ಷಿಸಿ ಮೆಚ್ಚಿಕೊಂಡ  ಶಿವಣ್ಣ ಮಾತನಾಡಿ  "ಸಂತೋಷ್ ನಮ್ಮ ಚಿಕ್ಕಮ್ಮನ ಮಗ, ಯುವಜನರಿಗೆ ಹತ್ತಿರವಾಗುವಂಥ ಒಂದೊಳ್ಳೆ ಕಂಟೆಂಟ್ ಇಟ್ಟುಕೊಂಡು ಈ ಸಿನಿಮಾ ಮಾಡಿದ್ದಾರೆ" ಎಂದು ಶುಭ ಹಾರೈಸಿದರು.

     ಪ್ರೇಮಿಗಳ ದಿನದ ಅಂಗವಾಗಿ ಈ ಚಿತ್ರದ ರೊಮ್ಯಾಂಟಿಕ್ ಹಾಡನ್ನು ಹಿರಿಯ ನಿರ್ಮಾಪಕ  ಎಸ್.ಎ.ಚಿನ್ನೇಗೌಡ್ರು ಹಾಗೂ ಎಸ್.ಎ.ಗೋವಿಂದರಾಜ್ ಬಿಡುಗಡೆ ಮಾಡಿ ಮಾತನಾಡುತ್ತಾ "ಸಂತೋಷ್  ನಮ್ಮ ಕುಟುಂಬದವನು, ನನ್ನ ಪ್ರೀತಿಯ ತಂಗಿ ಮಗ, ಈಗಿನ ಹುಡುಗರಿಗೆ ಉತ್ತಮ ಸಂದೇಶ ಇಟ್ಟುಕೊಂಡು ಈ ಚಿತ್ರ ಮಾಡಿದ್ದಾನೆ. ಒಳ್ಳೇದಾಗಲಿ" ಎಂದು  ಶುಭ ಹಾರೈಸಿದರು. ನಂತರ ಚಿತ್ರದ ಟೀಸರನ್ನು ಭಾಮ ಹರೀಶ್, ಎ.ಗಣೇಶ್,‌ ಮಾಧವಿ ಸೇರಿ ಬಿಡುಗಡೆ ಮಾಡಿದರು.

   ಈ ಚಿತ್ರದಲ್ಲಿ ವೀರೇನ್ ಕೇಶವ್ ಅವರು ನಾಯಕನಾಗಿ ನಟಿಸಿದ್ದು, ನಾಯಕಿಯರಾಗಿ ಬಿಗ್ ಬಾಸ್ ಜಾಹ್ನವಿ, ಶೃತಿ ದೇಶಪಾಂಡೆ ಹಾಗೂ ಅಲ್ಫಿಯಾ ನಟಿಸಿದ್ದಾರೆ. ಈ ಚಿತ್ರವನ್ನು  ಕನ್ನಡ, ಹಿಂದಿ ಹಾಗೂ ತಮಿಳು ಭಾಷೆಯಲ್ಲಿ ನೇರವಾಗಿ ಚಿತ್ರೀಕರಿಸಲಾಗಿದೆ. ಹಾಗಾಗಿ ಚಿತ್ರದಲ್ಲಿ ಮೂರು ಭಾಷೆಯ ಕಲಾವಿದರೂ ನಟಿಸಿದ್ದಾರೆ. ನಟ ಧರ್ಮಕೀರ್ತಿರಾಜ್ ಹಾಗೂ ತಂದೆ ಕೀರ್ತಿರಾಜ್ ಕೂಡ ಚಿತ್ರದಲ್ಲಿ  ಪ್ರಮುಖ ಪಾತ್ರ ನಿರ್ವಹಿಸಿದ್ದಾರೆ.


       ಈ ಸಂದರ್ಭದಲ್ಲಿ ಮಾತನಾಡಿದ ನಿರ್ದೇಶಕ, ನಿರ್ಮಾಪಕ ಸಂತೋಷ್ ಕುಮಾರ್  "ತಾಯಿ ಮಗನ ಮಧ್ಯೆ ನಡೆಯುವ ಎಮೋಷನಲ್  ಕಥೆಯಿದು. ತಮಿಳಲ್ಲಿ 'ಯುವನ್ ರಾಬಿನ್ ಹುಡ್, ಹಿಂದಿಯಲ್ಲಿ ಅದೇ 'ಯುವ ಸರ್ಕಾರ್' ಎಂಬ ಹೆಸರನ್ನಿಟ್ಟಿದ್ದೇವೆ. ಆಕೆ ತನ್ನ ಮಗನನ್ನು ಗಾಂಧಿಯ ತರಹ ಬೆಳೆಸುತ್ತಾಳೆ, ಆದರೆ ಆ ಮಗ ಯಾಕೆ ರಾಬಿನ್ ಹುಡ್ ರೀತಿ ಆಗ್ತಾನೆ ಅನ್ನೋದೇ ಈ ಚಿತ್ರದ ಕಥೆ. ಆ ರಾಬಿನ್ ಹುಡ್ ಬಡವರಿಗೆ ಸಹಾಯ ಮಾಡ್ತಿದ್ದ, ಆತನನ್ನು ಒಬ್ಬ ದರೋಡೆಕೋರನ ಥರ ತೋರಿಸಿದ್ದರು. ಆದರೆ ನಾವಿಲ್ಲಿ ಜನಸ್ನೇಹಿಯಾಗಿ  ತೋರಿಸಿದ್ದೇವೆ. ನೇರವಾಗಿ ಮೂರು ಭಾಷೆಯಲ್ಲಿ ಚಿತ್ರೀಕರಿಸಿದ್ದೇವೆ.

ಅಸಹಾಯಕರಿಗೆ ಸಹಾಯ ಮಾಡುವುದೇ ಆತನ ವ್ಯಕ್ತಿತ್ವ. ಆತನ‌ ತಂದೆ ಒಬ್ಬ ದರೋಡೆಕೋರ‌, ಈ‌ ಕಲಿಯುಗದಲ್ಲಿ  ಗಾಂಧಿ ಥರ ಇರಲಿಕ್ಕಾಗಲ್ಲ ಎಂದು ನಾಯಕ ಒಳ್ಳೆಯ ಕೆಲಸ ಮಾಡ್ತಾ ಹೋಗ್ತಾನೆ. ಮಧುವಂತಿ ಅವರ ಅಡ್ವೋಕೇಟ್ ಪಾತ್ರ ಮಾಡಿದ್ದಾರೆ. ಸದ್ಯ ಚಿತ್ರದ ಪೋಸ್ಟ್ ಪ್ರೊಡಕ್ಷನ್ ಕೆಲಸ ನಡೆಯುತ್ತಿದೆ. ಚಿತ್ರದಲ್ಲಿ 5 ಹಾಡುಗಳಿದ್ದು,

4 ಫೈಟ್ ಗಳಿವೆ. ಇದೊಂದು ಇನ್ ಸ್ಪೈರ್ ಮಾಡುವಂಥ ಸಿನಿನಾ. ಚೆನ್ನೈ, ಚಿಕ್ಕಮಗಳೂರು, ಮೇಲುಕೋಟೆಯ ಸುತ್ತಮುತ್ತ  ಚಿತ್ರದ ಚಿತ್ರೀಕರಣ ನಡೆಸಲಾಗಿದ್ದು, ಏಪ್ರಿಲ್ ನಲ್ಲಿ ಚಿತ್ರದ ಫಸ್ಟ್ ಕಾಪಿ ಹೊರಬರಲಿದೆ. ಮೇ ಜೂನ್ ನಲ್ಲಿ ರಿಲೀಸ್ ಮಾಡುವ ಯೋಜನೆಯಿದೆ. ವೈಜಿ ಅವರು ಒಬ್ಬ ರಾಜಕಾರಣಿಯಾಗಿ ಕಾಣಿಸಿಕೊಂಡಿದ್ದಾರೆ" ಎಂದು ವಿವರಿಸಿದರು.

     ಉಳಿದಂತೆ ಚಿತ್ರದ ನಾಯಕ ವೀರೆನ್ ಕೇಶವ್, ಧರ್ಮ ಕೀರ್ತಿರಾಜ್, ನಾಯಕಿಯರು ತಮ್ಮ ಪಾತ್ರಗಳ ಕುರಿತಂತೆ ಮಾತನಾಡಿದರು. ಡಾ.ಶಿವಪ್ಪ ಮಾತನಾಡುತ್ತ "ಸಂತೋಷ್ ಅವರಿಗೆ ಮಾರ್ಗದರ್ಶಕನಾಗಿ ಅವರ ಜತೆ ಇದ್ದೇನೆ. ಸಿನಿಮಾ ಬಗ್ಗೆ ಅವರಿಗಿರುವ ಕಾಳಜಿ ದೊಡ್ಡದು" ಎಂದರು. ಬಿಗ್ ಬಾಸ್ ಅಶ್ವಿನಿಗೌಡ ಕೂಡ ಅತಿಥಿಯಾಗಿ ಭಾಗವಹಿಸಿದ್ದರು.






Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ