, ಹೊಸಪೇಟೆ: ಇಂದು ನಗರದ ಡಾ.ಪುನೀತ್ ರಾಜಕುಮಾರ್ ವೃತ್ತದಲ್ಲಿ ಶ್ರೀ ಶಿವಶರಣ ಮಾದರ ಚೆನ್ನಯ್ಯ ಸೇವಾ ಸಮಿತಿ ವಿಜಯನಗರ ಜಿಲ್ಲೆ ವತಿಯಿಂದ ಶ್ರೀ ಡಾ.ಬಸವಮೂರ್ತಿ ಮಾದರ ಚೆನ್ನಯ್ಯ ಸ್ವಾಮೀಜಿಗಳ ಹುಟ್ಟು ಹಬ್ಬದ ಅಂಗವಾಗಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಮಾತಂಗ ಗುರುಪೀಠ ಹಂಪಿಯ ಶ್ರೀ ಪೂರ್ಣಾನಂದ ಭಾರತಿ ಸ್ವಾಮೀಜಿ ರವರ ದಿವ್ಯ ಸಾನಿಧ್ಯದಲ್ಲಿ ಮತ್ತು ಜಿಲ್ಲಾಧ್ಯಕ್ಷರಾದ ಹೆಚ್. ಶ್ರೀನಿವಾಸ ರವರ ನೇತೃತ್ವದಲ್ಲಿ ಸಿಹಿ ಹಂಚಿ ಸಂಭ್ರಮಾಚರಣೆಯನ್ನು ಹಮ್ಮಿಕೊಳ್ಳಲಾಗಿತ್ತು.
ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ ಕೇಂದ್ರ ಮಾಜಿ ಸಚಿವರಾದ ಎ.ನಾರಾಯಣಸ್ವಾಮಿ ರವರು ಮಾತನಾಡಿ ರಾಜ್ಯದ ಅನೇಕ ಜಿಲ್ಲೆಗಳಲ್ಲಿ ಶ್ರೀ ಮಾದರ ಚೆನ್ನಯ್ಯ ಸ್ವಾಮಿಜಿಗಳ ಹುಟ್ಟು ಹಬ್ಬವನ್ನು ಅನೇಕ ಕಾರ್ಯಕರ್ತರು ಆಚರಿಸುತ್ತಿದ್ದಾರೆ ವಿಶೇಷವಾಗಿ ವಿಜಯನಗರ ಜಿಲ್ಲೆಯಲ್ಲಿ ಅನ್ನ ಸಂತರ್ಪಣೆ ಮಾಡುವುದರ ಮೂಲಕ ಅರ್ಥಪೂರ್ಣವಾದಂತಹ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಸ್ವಾಮೀಜಿ ರವರಿಗೆ ದೇವರು ಆರೋಗ್ಯ ಆಯಸ್ಸು, ಸಮಾಜವನ್ನು ಮುನ್ನಡೆಸುವಂತಹ ಶಕ್ತಿಯನ್ನು ದಯಪಾಲಿಸಲಿ ಎಂದು ಮತ್ತು ವಿಜಯನಗರ ಜಿಲ್ಲೆ ಮಾದರ ಚೆನ್ನಯ್ಯ ಸೇವಾ ಸಮಿತಿ ಬಲಿಷ್ಠಗೊಳ್ಳಲಿ ಎಂದು ಮಾತನಾಡಿದರು.
ಈ ಸಂದರ್ಭದಲ್ಲಿ ಹೊಸಪೇಟೆ ನಗರಸಭೆ ಅಧ್ಯಕ್ಷರಾದ ಎನ್ ರೂಪೇಶ್ ಕುಮಾರ್,ವಿಭಾಗೀಯ ಮುಖ್ಯಸ್ಥರಾದ ಎಚ್ ಪೂಜಪ್ಪ, ಮುಖಂಡರಾದ ಎಂ.ಸಿ.ವೀರ ಸ್ವಾಮಿ, ಕೆ. ಪಿ .ಉಮಾಪತಿ, ಎಚ್. ಶೇಷು, ಎಚ್.ಜಗನ್ನಾಥ ರಾಜಲು,ಸೇವಾ ಸಮಿತಿ ಪ್ರಧಾನ ಕಾರ್ಯದರ್ಶಿಗಳಾದ ಭರತ್ ಕುಮಾರ್. ಸಿ.ಆರ್. ಮತ್ತು ಎಚ್. ರವಿಕಿರಣ, ಎಚ್ಎಸ್. ವೆಂಕಪ್ಪ, ವಿಜಯ್ ಕುಮಾರ್, ಸೇಲ್ವಂ, ದುರ್ಗೇಶ್,ವಿಜಯ್ ಕುಮಾರ್, ಕರಿಯಪ್ಪ,ದುರ್ಗಪ್ಪ, ಉದಯ್ ಕುಮಾರ್, ವಿಜಯನಗರ ಜಿಲ್ಲೆ, ಶ್ರೀ ಶಿವಶರಣ ಮಾದಾರ್ ಚನ್ನಯ್ಯ ಸೇವಾ ಸಮಿತಿಯ ಎಲ್ಲಾ ಪದಾಧಿಕಾರಿಗಳು ಹಾಗೂ ಮಾದಿಗ ಸಮುದಾಯದ ಮುಖಂಡರು, ಯುವಕರು ಮತ್ತು ಮತ್ತಿತರರು ಭಾಗವಹಿಸಿದ್ದರು.