Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಭೀಮ್​ ಸೇನಾ ಮುಖ್ಯಸ್ಥ ಸತ್ಪಾಲ್ ಗೆ ಬಿಷ್ಣೋಯಿ ಜೀವ ಬೆದರಿಕೆ


ಗುರುಗ್ರಾಮ್​: ವಿದೇಶದಿಂದಲೇ ಭೀಮ್​ ಸೇನಾ ಮುಖ್ಯಸ್ಥ ಸತ್ಪಾಲ್​ ತನ್ವಾರ್ ಎಂಬವರಿಗೆ ಜೀವ ಬೆದರಿಕೆ ಹಾಕಿದ ಆರೋಪದಡಿ ಗ್ಯಾಂಗ್​ಸ್ಟರ್​ ಲಾರೆನ್ಸ್​ ಬಿಷ್ಣೋಯಿ ಸಹೋದರ ಅನ್ಮೊಲ್​ ಬಿಷ್ಣೋಯಿ ವಿರುದ್ಧ ಗುರುಗ್ರಾಮ್​ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.


ಜಿಂಬಾಬ್ವೆ ಮತ್ತು ಕೀನ್ಯಾ ದೇಶಗಳ ಸಂಖ್ಯೆಗಳನ್ನು ಬಳಸಿಕೊಂಡು ಯುಎಸ್ಎ ಮತ್ತು ಕೆನಡಾದಿಂದ ಬೆದರಿಕೆ ಕರೆಗಳನ್ನು ಮಾಡುತ್ತಿದ್ದಾನೆ ಎಂದು ಆರೋಪಿಸಲಾಗಿದೆ. ಈ ದೂರಿನ ಹಿನ್ನೆಲೆಯಲ್ಲಿ ಪೊಲೀಸರು ತನಿಖೆಗಾಗಿ ಎಸ್‌ಟಿಎಫ್, ಕ್ರೈಂ ಮತ್ತು ಸೈಬರ್ ಕ್ರೈಂ ಘಟಕಗಳ ಸದಸ್ಯರ ತಂಡ ರಚಿಸಿದ್ದಾರೆ. ಅನ್ಮೋಲ್​ ಬಿಷ್ಣೋಯಿಯನ್ನು ಭಾರತಕ್ಕೆ ಕರೆತರಲು ಪ್ರಯತ್ನಿಸಲಾಗುತ್ತಿದೆ ಎಂದು ಪೊಲೀಸರು ಹೇಳಿದ್ದಾರೆ.


ಅಕ್ಟೋಬರ್​​ 30ರಂದು ಸತ್ಪಾಲ್ ತನ್ವಾರ್​​ಗೆ ಕರೆ ಮಾಡಿ, ಆತನನ್ನು ತುಂಡು ತುಂಡಾಗಿ ಕತ್ತರಿಸುವುದಾಗಿ ಬೆದರಿಕೆ ಹಾಕಿದ್ದಾರೆ. 6 ನಿಮಿಷ 41 ಸೆಕೆಂಡ್​ಗಳ ಕಾಲ ಕರೆ ಮಾಡಲಾಗಿದ್ದು, ಮೊದಲಿಗೆ ತನ್ವರ್ ಅವರ ಮಹಿಳಾ ಸೆಕ್ರೆಟರಿ ಫೋನ್​ ಸ್ವೀಕರಿಸಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.






ಸೆಕ್ಟರ್​ 37 ಪೊಲೀಸ್​ ಠಾಣೆಯಲ್ಲಿ ಅನ್ಮೋಲ್​ ಬಿಷ್ಣೋಯಿ ವಿರುದ್ಧ ಭಾರತೀಯ ನ್ಯಾಯ ಸಂಹಿತೆ ಅಡಿ ಪ್ರಕರಣ ದಾಖಲಿಸಲಾಗಿದೆ.


ಅಮೆರಿಕದಲ್ಲಿ ತಲೆಮರೆಸಿಕೊಂಡಿರುವ ಅನ್ಮೋಲ್​ ಬಿಷ್ಣೋಯಿ ಸುಳಿವು ನೀಡಿದವರಿಗೆ/ಆತನನ್ನು ಸೆರೆ ಹಿಡಿಯಲು ಸಹಾಯ ಮಾಡಿದವರಿಗೆ 10 ಲಕ್ಷ ರೂ ಬಹುಮಾನ ನೀಡುವುದಾಗಿ ರಾಷ್ಟ್ರೀಯ ತನಿಖಾ ಸಂಸ್ಥೆ ಘೋಷಿಸಿದೆ.(ಪಿಟಿಐ)



Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ