Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ವಿಡಿಯೋದಲ್ಲಿ ಹಲವರ ವಿರುದ್ಧ ಆರೋಪಿಸಿ ಬಿಜೆಪಿ ಕಾರ್ಯಕರ್ತ ಸೂಸೈಡ್‌

ಅನೇಕಲ್, ಏಪ್ರಿಲ್ 18: ಬೆಂಗಳೂರಿನ ನಾಗವಾರದಲ್ಲಿ ಬಿಜೆಪಿ ಕಾರ್ಯಕರ್ತ  ವಿನಯ್ ಸೋಮಯ್ಯ ಆತ್ಮಹತ್ಯೆ ಮಾಡಿಕೊಂಡ ಪ್ರಕರಣದ ನೆನಪು ಹಸಿಯಾಗಿರುವಾಗಲೇ ಬೆಂಗಳೂರು ನಗರ ಜಿಲ್ಲೆ ಆನೇಕಲ್ ಟ್ಟಣದ ಎಸ್.ವಿ.ಎಂ ಸ್ಕೂಲ್ ಬಳಿ ಬಿಜೆಪಿ ಕಾರ್ಯಕರ್ತ ಪ್ರವೀಣ್ ಗೌಡ ಬೇಲೂರು (35) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಫೇಸ್​​ಬುಕ್ ವಿಡಿಯೋ ಮಾಡಿ ಹಲವರ ಹೆಸರುಗಳನ್ನು ಪ್ರಸ್ತಾಪಿಸಿದ ಅವರು, ಆ ನಂತರ ಮರಕ್ಕೆ ನೇಣು ಬಿಗಿದುಕೊಂಡು ಸಾವಿಗೆ ಶರಣಾಗಿದ್ದಾರೆ. ತಮ್ಮ ಸಾವಿಗೆ ಇವರೇ ಕಾರಣ ಎಂದು ಹಲವರನ್ನು ಹೆಸರಿಸಿರುವ ಅವರು, ಆ ಪೈಕಿ ಕಿರಣ್ ಎಂಬಾತನ ವಿರುದ್ಧ ಗಂಭೀರ ಆರೋಪಗಳನ್ನು ಮಾಡಿದ್ದಾರೆ.

ಸಮಂದೂರ್ ಕಿರಣ್, ಗೋಕುಲ್ ಫ್ಯಾಷನ್ ಹರೀಶ್​​, ಭಾಸ್ಕರ್, ನಾರಾಯಣಪ್ಪ, ದೊಡ್ಡಹಾಗಡೆ ಮಧುಗೌಡ, ಸರವಣ ಇವರೇ ನನ್ನ ಸಾವಿಗೆ ಕಾರಣ. ಯಾರನ್ನು ಬಿಟ್ಟರೂ ಕಿರಣ್​​​​​ನನ್ನು ದಯವಿಟ್ಟು ಬಿಡಬೇಡಿ. ಕಿರಣ್ ಹಲವು ಹೆಣ್ಣು ಮಕ್ಕಳಿಗೆ ಫೋನ್ ಮಾಡಿ ಟಾರ್ಚರ್ ಕೊಡುತ್ತಿದ್ದಾನೆ. ಕಿರಣ್​​ ಮಾಡಿರುವ ಇಂತಹ ಕೆಲಸಗಳೆಲ್ಲಾ ನನ್ನ ಮೇಲೆ ಬಂದಿವೆ. ಹಣದ ವಿಚಾರವಾಗಿ ಮಾತುಕತೆಗೆ ಕರೆಸಿಕೊಂಡು ಹಲ್ಲೆ ನಡೆಸಿದ್ದಾರೆ ಎಂದು ಫೇಸ್​​ಬುಕ್ ವಿಡಿಯೋದಲ್ಲಿ ಪ್ರವೀಣ್ ಗೌಡ ಆರೋಪಿಸಿದ್ದಾರೆ.

ಆನೇಕಲ್ ಬಿಜೆಪಿ ಮಂಡಲ ಅಧ್ಯಕ್ಷ ಮುನಿರಾಜುಗೌಡ ವಿರುದ್ಧವೂ ಆರೋಪ ಮಾಡಲಾಗಿದೆ. ಬಿಜೆಪಿ ಮುಖಂಡ ನಾಯನಹಳ್ಳಿ ಮುನಿರಾಜು ಮನೆಗೆ ಕರೆದಿದ್ದರು. ಆ ಸಂದರ್ಭದಲ್ಲಿ ಆನೇಕಲ್ ಕೌನ್ಸಿಲರ್ ಭಾಗ್ಯಮ್ಮ ಹಾಗೂ ಆಕೆಯ ಪತಿ ಶ್ರೀನಿವಾಸ್ ಇದ್ದರು. ಏಕಾಏಕಿ ಹತ್ತಾರು ಮಂದಿಯನ್ನು ಕರೆಸಿಕೊಂಡಿದ್ದ ಭಾಗ್ಯಮ್ಮ ಶ್ರೀನಿವಾಸ್, ಮೊಬೈಲ್ ಕಿತ್ತುಕೊಂಡು 2 ಗಂಟೆಗಳ ಕಾಲ ನನ್ನ ಮೇಲೆ ಹಲ್ಲೆ ನಡೆಸಿದ್ದಾರೆ. ಮನಸೋ ಇಚ್ಛೆ ನನ್ನ ಮೇಲೆ ಹಲ್ಲೆ ನಡೆಸಿದ್ದಾರೆಂದು ಪ್ರವೀಣ್ ಆರೋಪಿಸಿದ್ದಾರೆ.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ