LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Crime News

ವಿಡಿಯೋದಲ್ಲಿ ಹಲವರ ವಿರುದ್ಧ ಆರೋಪಿಸಿ ಬಿಜೆಪಿ ಕಾರ್ಯಕರ್ತ ಸೂಸೈಡ್‌

ಅನೇಕಲ್, ಏಪ್ರಿಲ್ 18: ಬೆಂಗಳೂರಿನ ನಾಗವಾರದಲ್ಲಿ ಬಿಜೆಪಿ ಕಾರ್ಯಕರ್ತ  ವಿನಯ್ ಸೋಮಯ್ಯ ಆತ್ಮಹತ್ಯೆ ಮಾಡಿಕೊಂಡ ಪ್ರಕರಣದ ನೆನಪು ಹಸಿಯಾಗಿರುವಾಗಲೇ ಬೆಂಗಳೂರು ನಗರ ಜಿಲ್ಲೆ ಆನೇಕಲ್ ಟ್ಟಣದ ಎಸ್.ವಿ.ಎಂ ಸ್ಕೂಲ್ ಬಳಿ ಬಿಜೆಪಿ ಕಾರ್ಯಕರ್ತ ಪ್ರವೀಣ್ ಗೌಡ ಬೇಲೂರು (35) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಫೇಸ್​​ಬುಕ್ ವಿಡಿಯೋ ಮಾಡಿ ಹಲವರ ಹೆಸರುಗಳನ್ನು ಪ್ರಸ್ತಾಪಿಸಿದ ಅವರು, ಆ ನಂತರ ಮರಕ್ಕೆ ನೇಣು ಬಿಗಿದುಕೊಂಡು ಸಾವಿಗೆ ಶರಣಾಗಿದ್ದಾರೆ. ತಮ್ಮ ಸಾವಿಗೆ ಇವರೇ ಕಾರಣ ಎಂದು ಹಲವರನ್ನು ಹೆಸರಿಸಿರುವ ಅವರು, ಆ ಪೈಕಿ ಕಿರಣ್ ಎಂಬಾತನ ವಿರುದ್ಧ ಗಂಭೀರ ಆರೋಪಗಳನ್ನು ಮಾಡಿದ್ದಾರೆ.

ಸಮಂದೂರ್ ಕಿರಣ್, ಗೋಕುಲ್ ಫ್ಯಾಷನ್ ಹರೀಶ್​​, ಭಾಸ್ಕರ್, ನಾರಾಯಣಪ್ಪ, ದೊಡ್ಡಹಾಗಡೆ ಮಧುಗೌಡ, ಸರವಣ ಇವರೇ ನನ್ನ ಸಾವಿಗೆ ಕಾರಣ. ಯಾರನ್ನು ಬಿಟ್ಟರೂ ಕಿರಣ್​​​​​ನನ್ನು ದಯವಿಟ್ಟು ಬಿಡಬೇಡಿ. ಕಿರಣ್ ಹಲವು ಹೆಣ್ಣು ಮಕ್ಕಳಿಗೆ ಫೋನ್ ಮಾಡಿ ಟಾರ್ಚರ್ ಕೊಡುತ್ತಿದ್ದಾನೆ. ಕಿರಣ್​​ ಮಾಡಿರುವ ಇಂತಹ ಕೆಲಸಗಳೆಲ್ಲಾ ನನ್ನ ಮೇಲೆ ಬಂದಿವೆ. ಹಣದ ವಿಚಾರವಾಗಿ ಮಾತುಕತೆಗೆ ಕರೆಸಿಕೊಂಡು ಹಲ್ಲೆ ನಡೆಸಿದ್ದಾರೆ ಎಂದು ಫೇಸ್​​ಬುಕ್ ವಿಡಿಯೋದಲ್ಲಿ ಪ್ರವೀಣ್ ಗೌಡ ಆರೋಪಿಸಿದ್ದಾರೆ.

ಆನೇಕಲ್ ಬಿಜೆಪಿ ಮಂಡಲ ಅಧ್ಯಕ್ಷ ಮುನಿರಾಜುಗೌಡ ವಿರುದ್ಧವೂ ಆರೋಪ ಮಾಡಲಾಗಿದೆ. ಬಿಜೆಪಿ ಮುಖಂಡ ನಾಯನಹಳ್ಳಿ ಮುನಿರಾಜು ಮನೆಗೆ ಕರೆದಿದ್ದರು. ಆ ಸಂದರ್ಭದಲ್ಲಿ ಆನೇಕಲ್ ಕೌನ್ಸಿಲರ್ ಭಾಗ್ಯಮ್ಮ ಹಾಗೂ ಆಕೆಯ ಪತಿ ಶ್ರೀನಿವಾಸ್ ಇದ್ದರು. ಏಕಾಏಕಿ ಹತ್ತಾರು ಮಂದಿಯನ್ನು ಕರೆಸಿಕೊಂಡಿದ್ದ ಭಾಗ್ಯಮ್ಮ ಶ್ರೀನಿವಾಸ್, ಮೊಬೈಲ್ ಕಿತ್ತುಕೊಂಡು 2 ಗಂಟೆಗಳ ಕಾಲ ನನ್ನ ಮೇಲೆ ಹಲ್ಲೆ ನಡೆಸಿದ್ದಾರೆ. ಮನಸೋ ಇಚ್ಛೆ ನನ್ನ ಮೇಲೆ ಹಲ್ಲೆ ನಡೆಸಿದ್ದಾರೆಂದು ಪ್ರವೀಣ್ ಆರೋಪಿಸಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್