Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬಿಜೆಪಿ ಹಾಗೂ ಜೆಡಿಎಸ್‌ ನಾಯಕರು ಹೆಜ್ಜೆ ಇಟ್ಟಲ್ಲೆಲ್ಲ ಪ್ರಶ್ನೆ ಕೇಳುತ್ತೇವೆ: ಡಿಸಿಎಂ ಸವಾಲ್

“ಬಿಜೆಪಿ ಹಾಗೂ ಜೆಡಿಎಸ್‌ ಒಗ್ಗೂಡಿ ಪಾದಯಾತ್ರೆ ನಡೆಸಲು ತೀರ್ಮಾನಿಸಿವೆ. ಇಷ್ಟು ದಿನ ಪಾದಯಾತ್ರೆಗೆ ಬೆಂಬಲ ನೀಡಲ್ಲ ಎಂದು ಜೆಡಿಎಸ್‌ ಹೇಳುತ್ತಿತ್ತು. ಈಗ ಎರಡೂ ಪಕ್ಷಗಳು ಒಗ್ಗೂಡಿ ಪಾದಯಾತ್ರೆ ಮಾಡುತ್ತಿವೆ. ಅವರ ಪಾದಯಾತ್ರೆಗೆ ನಮ್ಮ ಅಭ್ಯಂತರ ಇಲ್ಲ. ಆದರೆ, ನಗರದಲ್ಲಿ ಟ್ರಾಫಿಕ್‌ ಜಾಮ್‌ ದೃಷ್ಟಿಯಿಂದ ಅವರು ಪಾದಯಾತ್ರೆ ಮಾಡುವಂತಿಲ್ಲ. ಇನ್ನು, ಬಿಜೆಪಿ ಹಾಗೂ ಜೆಡಿಎಸ್‌ ಹಗರಣಗಳ ಕುರಿತು ನಾಳೆಯಿಂದ ನಮ್ಮ ಸಚಿವರು, ಶಾಸಕರು ಪ್ರಶ್ನೆ ಕೇಳುತ್ತಾರೆ. ಬಿಜೆಪಿ ಹಾಗೂ ಜೆಡಿಎಸ್‌ ನಾಯಕರು ಹೆಜ್ಜೆ ಇಟ್ಟಲ್ಲೆಲ್ಲ ಪ್ರಶ್ನೆ ಕೇಳುತ್ತೇವೆ. ಅವುಗಳಿಗೆ ಅವರು ಉತ್ತರಿಸಿಯೇ ಮುಂದೆ ಹೋಗಬೇಕು” ಎಂದು ಡಿಸಿಎಂ ಹೇಳಿದರು.

“ಬಿಜೆಪಿ ಹಾಗೂ ಜೆಡಿಎಸ್‌ ವಿರುದ್ಧ ಪ್ರಶ್ನೆ ಕೇಳುವ ಅಭಿಯಾನವನ್ನು ಶುಕ್ರವಾರದಿಂದಲೇ (ಆಗಸ್ಟ್‌ 2) ಆರಂಭಿಸುತ್ತೇವೆ. ನಾಳೆ ಬೆಳಗ್ಗೆ 11 ಗಂಟೆಗೆ ಬಿಡದಿಯಲ್ಲಿ ಸಭೆ ಮಾಡುವ ಮೂಲಕ ಪ್ರಶ್ನೆಗಳನ್ನು ಕೇಳುತ್ತೇವೆ. ಇನ್ನು ಆಗಸ್ಟ್‌ 3ರಂದು ರಾಮನಗರ, 4ರಂದು ಚನ್ನಪಟ್ಟಣ, 5ರಂದು ಮದ್ದೂರು, 6ಕ್ಕೆ ಮಂಡ್ಯ, 7 ಹಾಗೂ 9ರಂದು ಮೈಸೂರಿನಲ್ಲಿ ಸಭೆ ನಡೆಸಿ, ಬಿಜೆಪಿ ಹಾಗೂ ಜೆಡಿಎಸ್‌ ನಾಯಕರಿಗೆ ಅವರ ಹಗರಣಗಳ ಕುರಿತು ಪ್ರಶ್ನೆ ಕೇಳುತ್ತೇವೆ. ಅವುಗಳಿಗೆ ಅವರು ಉತ್ತರಿಸಬೇಕು” ಎಂದು ತಿಳಿಸಿದರು.

“ಬಿಜೆಪಿ ಅಧಿಕಾರದಲ್ಲಿದ್ದಾಗ ಏನೆಲ್ಲ ಹಗರಣ ಮಾಡಿದರು ಎಂಬುದರ ಕುರಿತು ಪ್ರತಿಯೊಂದು ಸಭೆಯಲ್ಲೂ ಪ್ರಶ್ನೆಗಳನ್ನು ಕೇಳುತ್ತೇವೆ. ಅವರ ಹಗರಣಗಳ ಕುರಿತು ದಾಖಲೆಗಳನ್ನು ಬಿಡುಗಡೆ ಮಾಡುತ್ತೇವೆ. ಪ್ರತಿಯೊಂದು ಸಭೆಯಲ್ಲೂ ಕಾಂಗ್ರೆಸ್‌ ನಾಯಕರು, ಮುಖಂಡರು ಹಾಗೂ ಕಾರ್ಯಕರ್ತರು ಭಾಗವಹಿಸಲಿದ್ದಾರೆ. ನಮ್ಮ ಪ್ರತಿ ಪ್ರಶ್ನೆಗಳಿಗೆ ಅವರು ಉತ್ತರಿಸಿಯೇ ಮುಂದೆ ಹೆಜ್ಜೆ ಇಡಬೇಕು. ಬಿಜೆಪಿಯವರು ಏನು ಸತ್ಯ ಹರಿಶ್ಚಂದ್ರನ ಮೊಮ್ಮಕ್ಕಳಾ” ಎಂದು ಡಿ.ಕೆ.ಶಿವಕುಮಾರ್‌ ಪ್ರಶ್ನಿಸಿದರು.

ಪಾದಯಾತ್ರೆ ಕುರಿತು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಮಾಹಿತಿ ನೀಡಿದ್ದಾರೆ. “ಆಗಸ್ಟ್‌ 3ರ ಶನಿವಾರ ಬೆಳಗ್ಗೆ 8.30ಕ್ಕೆ ನೈಸ್ ರೋಡ್ ಜಂಕ್ಷನ್‌ನಿಂದ ಪಾದಯಾತ್ರೆ ಪ್ರಾರಂಭ ಆಗುತ್ತದೆ. ರಾಜ್ಯದ ಎಲ್ಲ ಬಿಜೆಪಿ ಹಾಗೂ ಜೆಡಿಎಸ್ ಸಂಸದರು, ಶಾಸಕರು ಇರುತ್ತಾರೆ. ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಪಾದಯಾತ್ರೆಗೆ ಚಾಲನೆ ನೀಡಲಿದ್ದಾರೆ. ಕುಮಾರಸ್ವಾಮಿ ಅವರು ಕೂಡ ಬಂದು ಕಾರ್ಯಕ್ರಮ ಉದ್ಘಾಟನೆ ಮಾಡುತ್ತಾರೆ. ಭ್ರಷ್ಟ ಕಾಂಗ್ರೆಸ್ ಸರ್ಕಾರದ ವಿರುದ್ಧ ಜನಾಂದೋಲನ ಮಾಡುತ್ತಿದ್ದೇವೆ. ಇದನ್ನು ಯಶಸ್ವಿಗೊಳಿಸುತ್ತೇವೆ” ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ