Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕಾಂಗ್ರೆಸ್‌ನವರು ರಿಸೈನ್‌ ಮಾಡಿ ತಾಕತ್ತಿದ್ದರೆ ಮತ್ತೇ ಚುನಾವಣೆ ಎದುರಿಸಲಿ : ಬಿಜೆಪಿ ಸವಾಲ್‌

ಬೆಂಗಳೂರು, ಸೆಪ್ಟೆಂಬರ್ 6: ಇವಿಎಂ ಯಂತ್ರಗಳ  ವಿರುದ್ಧ ಅಪಸ್ವರ, ಬಿಜೆಪಿ ವಿರುದ್ಧ ಮತಗಳ್ಳತನ ಆರೋಪ ಮಾಡಿ ರಾಹುಲ್ ಗಾಂಧಿ ಅಭಿಯಾನ ಕೈಗೊಂಡಿದ್ದಾರೆ. ಇದೀಗ ತಮ್ಮ ನಾಯಕನ ಹೋರಾಟಕ್ಕೆ ಬಲ ತುಂಬಲು ಸಿದ್ದರಾಮಯ್ಯ ಸರ್ಕಾರ ಮುಂದಾಗಿದೆ. ಮಹಾನಗರ ಪಾಲಿಕೆಗಳು, ಜಿಲ್ಲಾ ಪಂಚಾಯ್ತಿ, ತಾಲೂಕು ಪಂಚಾಯ್ತಿ, ನಗರಸಭೆ, ಪುರಸಭೆ ಹೀಗೆ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಇವಿಎಂ ಮತಯಂತ್ರ ಬಳಕೆಗೆ ಕೊಕ್ ಕೊಟ್ಟು, ಹಳೆ ಪದ್ಧತಿಯಂತೆ ಬ್ಯಾಲೆಟ್‌ ಪೇಪರ್, ಅಂದರೆ ಮತಪತ್ರ ಬಳಕೆ ನಿರ್ಧರಿಸಿದೆ. ಗುರುವಾರ ನಡೆದಚ ಸಂಪುಟ ಸಭೆಯಲ್ಲಿ ಈ ಬಗ್ಗೆ ನಿರ್ಣಯಕೈಗೊಂಡಿದೆ. ಅಲ್ಲದೆ, ಪ್ರತ್ಯೇಕ ಮತದಾರರ ಪಟ್ಟಿ ಸಿದ್ಧಗೊಳಿಸುವುದು, ಪರಿಷ್ಕರಣೆ ಮಾಡುವ ಅಧಿಕಾರವನ್ನೂ ರಾಜ್ಯ ಚುನಾವಣಾ ಆಯೋಗಕ್ಕೆ ನೀಡಿದೆ. ಈ ಎಲ್ಲಾ ನಿರ್ಣಯಗಳನ್ನು ಚುನಾವಣಾ ಆಯೋಗಕ್ಕೆ ಶಿಫಾರಸು ಮಾಡಲಾಗಿದೆ. ಆದರೆ, ಈ ನಿರ್ಧಾರ ವಿಪಕ್ಷಗಳ ಕೆಂಗಣ್ಣಿಗೆ ಗುರಿಯಾಗಿದೆ.









ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಟ್ವೀಟ್ ಮಾಡಿ, ಸಿದ್ದರಾಮಯ್ಯನವರು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿ, ಬ್ಯಾಲೆಟ್ ಮೂಲಕ ಮತ್ತೆ ಚುನಾವಣೆ ಎದುರಿಸಿ ಗೆದ್ದು ಬರಲಿ ಎಂದು ಸವಾಲು ಹಾಕಿದ್ದಾರೆ. ಮತ್ತೆ ಮತಪತ್ರದತ್ತ ಮುಖ ಮಾಡುತ್ತಿರುವುದು ಮೂರ್ಖತನದ ಪರಮಾವಧಿ ಎಂದು ಜಗದೀಶ್ ಶೆಟ್ಟರ್ ಕಿಡಿಕಾರಿದ್ದಾರೆ.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ