LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಬೆಂಗಳೂರಿನಲ್ಲಿ ಬಿಜೆಪಿ ದೂರು

ಬೆಂಗಳೂರು: ಭಾರತ ದೇಶದಲ್ಲಿ ಮೀಸಲಾತಿ ಬಗ್ಗೆ ಅಮೆರಿಕದಲ್ಲಿ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ನೀಡಿರುವ ಹೇಳಿಕೆ ವಿಚಾರಕ್ಕೆ ಸಂಬಂಧಿಸಿ ಬೆಂಗಳೂರಿನ ಹೈಗ್ರೌಂಡ್ಸ್ ಠಾಣೆಯಲ್ಲಿ ಬಿಜೆಪಿ ನಾಯಕರು ಇಂದು ಶನಿವಾರ ದೂರು ನೀಡಿದ್ದಾರೆ.

ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ವಿಧಾನಪರಿಷತ್ ಸದಸ್ಯ ಎನ್.ರವಿಕುಮಾರ್, ರಾಜಕುಮಾರ್ ಪಾಟೀಲ್, ಬಿಜೆಪಿ ಕಾನೂನು ಪ್ರಕೋಷ್ಠದ ಸಂಚಾಲಕ ವಸಂತಕುಮಾರ್​ ಸೇರಿ ಬಿಜೆಪಿ ನಾಯಕರು ಹೈಗ್ರೌಂಡ್ಸ್ ಠಾಣೆಗೆ ದೂರು ನೀಡಿದ್ದಾರೆ.

ಇತ್ತೀಚೆಗೆ ಅಮೆರಿಕ ಪ್ರವಾಸ ಕೈಗೊಂಡ ಸಮಯದಲ್ಲಿ ರಾಹುಲ್‌ ಗಾಂಧಿ ಅವರು, ‘ಭಾರತದಲ್ಲಿ ಸಮಾನತೆಯ ಸ್ಥಿತಿ ಮೂಡಿದ ನಂತರ ಮೀಸಲಾತಿ ವ್ಯವಸ್ಥೆಯ ರದ್ದತಿ ಕುರಿತು ಕಾಂಗ್ರೆಸ್‌ ಪಕ್ಷ ಚಿಂತಿಸಲಿದೆ’ ಎಂದು ಹೇಳಿದ್ದರು. ನಂತರದ ಮಾಧ್ಯಮ ಸಂವಾದದಲ್ಲಿ, ‘ನಾನು ಮೀಸಲಾತಿಗೆ ವಿರುದ್ಧವಾಗಿ ಇದ್ದೇನೆ ಎಂಬಂತೆ ನನ್ನ ಹೇಳಿಕೆಯನ್ನು ತಪ್ಪಾಗಿ ಬಿಂಬಿಸಲಾಗಿದೆ. ಮೀಸಲಾತಿ ಮಿತಿಯನ್ನು ನಾವು ಶೇ 50 ಮೀರಿ ವಿಸ್ತರಿಸಲಿದ್ದೇವೆ’ ಎಂದು ಸ್ಪಷ್ಟಪಡಿಸಿದ್ದರು.

ರಾಹುಲ್ ಗಾಂಧಿಯವರ ಈ ಹೇಳಿಕೆಗೆ ಬಿಜೆಪಿ ವಿರೋಧ ವ್ಯಕ್ತಪಡಿಸಿತ್ತು. ಸಂವಿಧಾನವನ್ನು ಗೌರವಿಸುವ ಯಾರೊಬ್ಬರೂ ರಾಹುಲ್‌ ಗಾಂಧಿ ಅವರ ನಡೆಯನ್ನು ಒಪ್ಪುವುದಿಲ್ಲ. ಸಾಂವಿಧಾನಿಕ ಹುದ್ದೆಯಲ್ಲಿರುವ ವ್ಯಕ್ತಿಯೊಬ್ಬರ ಇಂತಹ ನಿಲುವು ಅವರ ಸಂವಿಧಾನ ವಿರೋಧಿ ಮನಃಸ್ಥಿತಿ ತೋರಿಸುತ್ತದೆ ಎಂದು ಉಪ ರಾಷ್ಟ್ರಪತಿ ಜಗದೀಪ್‌ ಧನ್‌ಕರ್ ಅವರು ಸಹ ರಾಹುಲ್‌ ಗಾಂಧಿ ಅವರನ್ನು ಟೀಕಿಸಿದ್ದಾರೆ.

ರಾಹುಲ್ ಗಾಂಧಿ ಅವರ ನಾಲಗೆ ಕತ್ತರಿಸುವ ವ್ಯಕ್ತಿಗೆ 11 ಲಕ್ಷ ರೂಪಾಯಿ ನೀಡುವುದಾಗಿ ಮಹಾರಾಷ್ಟ್ರದ ಮುಖ್ಯಮಂತ್ರಿ ಏಕನಾಥ್‌ ಶಿಂಧೆ ಬಣದ ಶಾಸಕ ಸಂಜಯ್‌ ಗಾಯಕ್‌ವಾಡ್‌ ಹೇಳಿದ್ದಾರೆ. ಇನ್ನು ಇತ್ತೀಚೆಗೆ ವಿಧಾನ ಪರಿಷತ್ತಿನ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರ ನೇತೃತ್ವದಲ್ಲಿ ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಲ್ಲಿ ಪ್ರತಿಭಟನೆ ನಡೆಸಲಾಗಿತ್ತು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸ್ವಚ್ಛತೆಯೇ ಸೇವೆ-2026' ಅಭಿಯಾನ ಆರಂಭ: ಸಾರ್ವಜನಿಕರ ಸಹಭಾಗಿತ್ವಕ್ಕೆ ಕರೆಸ್ವಚ್ಛತೆಯೇ ಸೇವೆ-2026' ಅಭಿಯಾನ ಆರಂಭ: ಸಾರ್ವಜನಿಕರ ಸಹಭಾಗಿತ್ವಕ್ಕೆ ಕರೆವಿ.ಶ್ರೀ.ಕೃ. ವಿಶ್ವವಿದ್ಯಾಲಯದಲ್ಲಿ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ: ಅಭಿವೃದ್ಧಿಗೆ ಎಲ್ಲರ ಸಹಭಾಗಿತ್ವ ಅಗತ್ಯಕರಕುಶಲತೆಯ ಜೊತೆ ಶಿಕ್ಷಣವೂ ಅನಿವಾರ್ಯ: ಲಿಡ್ಕರ್ ಅಧ್ಯಕ್ಷ ಮುಂಡರಗಿ ನಾಗರಾಜತಾಳಿಕೋಟೆ ತಾಲೂಕು ಕೂಡ ಶೀಘ್ರ ಬರಪೀಡಿತ ಪಟ್ಟಿಗೆ : ಶಾಸಕ ನಾಡಗೌಡತೇರದಾಳ ಹಾಗೂ ರಬಕವಿ /ಬನಹಟ್ಟಿ ತಾಲೂಕುಗಳು ಬರಗಾಲ ಪಟ್ಟಿಗೆ, ಸಿಎಂ ಡಿಕೆ ಶಿವಕುಮಾರ್ ಅವರಿಗೆ ಅಭಿನಂದನೆ.ರೋಗಿಗಳಿಗೆ ಹಾಲುಹಣ್ಣು ವಿತರಿಸಿ ಬಿಜೆಪಿ ಕಾರ್ಯಕರ್ತರಿಂದ ’ಸೇವಾ ಸಂಕಲ್ಪಹಕ್ಕುಪತ್ರ ಪಡೆದ ಫಲಾನುಭವಿಗಳಿಗೆ ಫಾರಂ-2 ಇ-ಖಾತಾ ಮಾಡಿಕೊಡಲು ಆಗ್ರಹಸೆ.20ರಂದು ಬಳ್ಳಾರಿಯಲ್ಲಿ ಹಿಂದೂ ಮಹಾ ಗಣಪತಿ ಭವ್ಯ ಶೋಭಾಯಾತ್ರೆಜನರ ಮನೆ ಬಾಗಿಲಿಗೆ ಸರ್ಕಾರದ ಸೇವೆ ಸಿಎಂ ಕನಸು; ಜನರಿಗೆ ತೊಂದರೆ ನೀಡಿದರೆ ಕ್ರಮ: ನಾರಾ ಭರತ್ ರೆಡ್ಡಿ