ಬೆಳಗಾವಿ. ರಾಜ್ಯ ಸರ್ಕಾರದ ಭ್ರಷ್ಟ ಸಚಿವ ಬಿ.ನಾಗೇಂದ್ರ ರಾಜಿನಾಮೆಗೆ ಆಗ್ರಹಿಸಿ ನಡೆದ ನಗರದ ಕನ್ನಡ ಸಾಹಿತ್ಯ ಪರಿಷತ ಕಾರ್ಯಾಲಯದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಬಿಜೆಪಿ ಮುಖಂಡ ಎಂ.ಬಿ.ಜಿರಲಿ ಮಾತನಾಡಿ ಪ್ರಸಕ್ತ ಮುಖ್ಯಮಂತ್ರಿ ಡಿ ಕೆ ಶಿವಕುಮಾರ ನೇತೃತ್ವ ಸರ್ಕಾರದಲ್ಲಿ ದೊಡ್ಡ ಪ್ರಮಾಣದ ಭ್ರಷ್ಟಾಚಾರ ಮಾಡಿ ಜೈಲಿಗೆ ಹೋದ ಸಚಿವರನ್ನು ಮತ್ತೆ ಮಂತ್ರಿಗಳಾಗಿ ಆಯ್ಕೆ ಮಾಡಿದ್ದು ಕರ್ನಾಟಕದ ದುರಂತ ಎಂದರು.
ಬಿಜೆಪಿ ಜಿಲ್ಲಾಧ್ಯಕ್ಷ ಸುಭಾಷ ಪಾಟೀಲ ಮಾತನಾಡಿ ಇಲ್ಲಿಯವರೆಗೆ ಒಬ್ಬ ಮಹಿಳೆಯರಿಗೆ ಸಚಿವ ಸ್ಥಾನ ನೀಡದಿರುವದು ರಾಜ್ಯದ ಮಹಿಳೆಯರಿಗೆ ಮಾಡಿದ ಅನ್ಯಾಯ ಎಂದರು.
ಮಾಜಿ ವಿಧಾನ ಪರಿಷತ ಮುಖ್ಯ ಸಚ್ಚೇತಕ ಮಹಾಂತೇಶ ಕವಟಗಿಮಠ ಮಾತನಾಡಿ ಭ್ರಷ್ಟ ಸಚಿವರನ್ನು ಮತ್ತೆ ಸಚಿವರಾಗಿ ಮಾಡಿರುವದು ಸತ್ಯ ಹೇಳಿದರೆ ಪಕ್ಷದ ಇಮೇಜ್ ಹಾಳಾಗುತ್ತದೆ ಇದಕ್ಕಾಗಿ ಅಂಜಿ ಮತ್ತೆ ನಾಗೇಂದ್ರ ಅವರನ್ನು ಮಂತ್ರಿ ಮಾಡಿದ್ದು ಕಾಂಗ್ರೆಸ್ ಹೈಕಮಾಂಡ ಎಂದರು .
ಈ ಸಂದರ್ಭದಲ್ಲಿಮಾಜಿ ಶಾಸಕ ಸಂಜಯ ಪಾಟೀಲ,ಬಿಜೆಪಿ ಮಹಾನಗರ ಅಧ್ಯಕ್ಷರಾದ ಗೀತಾ ಸುತಾರ, ಡಾ ರವಿ ಪಾಟೀಲ, ಜಿಲ್ಲಾ ಮಾಧ್ಯಮ ಪ್ರಮುಖ ಸಚಿನ್ ಕಡಿ, ಪ್ರಕೋಷ್ಠಗಳ ಜಿಲ್ಲಾ ಸಂಯೋಜಕ ಮಹೇಶ ಮೋಹಿತೆ, ಮುಖಂಡರಾದ ರಾಜೇಂದ್ರ ಹರಕುಣಿ, ಉಜ್ವಲಾ ಬಡವನಾಚೆ, ಬಾಳೇಶ ಚವ್ವನ್ನವರ್ ಉಪಸ್ಥಿತರಿದ್ದರು.