Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಪಶ್ಚಿಮ ಬಂಗಾಳದಲ್ಲಿ ಟಿಎಂಟಿ ಮುಂದೆ: ಬಿಜೆಪಿಗೆ ನಿರಾಸೆ

ಕೋಲ್ಕತ್ತಾ(ಪಶ್ಚಿಮ ಬಂಗಾಳ): ಈ ಬಾರಿ ಕುತೂಹಲಕ್ಕೆ ಕಾರಣವಾಗಿದ್ದ ಪಶ್ಚಿಮ ಬಂಗಾಳ ಲೋಕಸಮರದಲ್ಲಿ ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಭಾರೀ ಮುನ್ನಡೆ ಸಾಧಿಸಿದೆ. ಒಟ್ಟು 42 ಕ್ಷೇತ್ರಗಳ ಪೈಕಿ 32 ರಲ್ಲಿ ಟಿಎಂಸಿ ಮುಂದಿದ್ದರೆ, 9ರಲ್ಲಿ ಬಿಜೆಪಿ ಮತ್ತು ಒಂದರಲ್ಲಿ ಮಾತ್ರ ಕಾಂಗ್ರೆಸ್ ಮುನ್ನಡೆ ಪಡೆದಿದೆ.


ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಭರ್ಜರಿ ಪ್ರಚಾರ ನಡೆಸಿದ್ದರಿಂದ ಈ ಬಾರಿ ಕಮಲ ಕಳೆದ ಬಾರಿಗಿಂತ ಹೆಚ್ಚು ಕ್ಷೇತ್ರದಲ್ಲಿ ಅರಳಲಿದೆ ಎಂದು ಅಂದಾಜಿಸಲಾಗಿತ್ತು. ಎಕ್ಸಿಟ್ ಪೋಲ್​ನಲ್ಲಿಯೂ ಬಿಜೆಪಿ ಮುಂದಿತ್ತು. ಆದರೆ ಈಗ ಮತ ಎಣಿಕೆಯಲ್ಲಿ ಬಿಜೆಪಿಗೆ ಹಿನ್ನಡೆಯಾಗಿದೆ. 2019ರಲ್ಲಿ 18 ಕ್ಷೇತ್ರಗಳಲ್ಲಿ ಬಿಜೆಪಿ ಗೆದ್ದಿತ್ತು. ಇದೇ ಹಿನ್ನೆಲೆಯಲ್ಲಿ ಈ ಬಾರಿ ಪಶ್ಚಿಮ ಬಂಗಾಳದ ಮೇಲೆ ಕಮಲ ಪಡೆಗೆ ಭಾರೀ ನಿರೀಕ್ಷೆ ಇತ್ತು. ಆದರೆ ಪಶ್ಚಿಮ ಬಂಗಾಳ ಮತದಾರರು ತೀರ್ಪು ಬದಲಿಸಿದ್ದಾರೆ.


2019ರಲ್ಲಿ 22 ಕ್ಷೇತ್ರಗಳಲ್ಲಿ ಟಿಎಂಸಿ ಗೆದ್ದಿತ್ತು. ಆದರೆ ಈ ಬಾರಿ ಹೆಚ್ಚುವರಿಯಾಗಿ 10 ಕ್ಷೇತ್ರ ಪಡೆದು, ಪಶ್ಚಿಮ ರಾಜ್ಯದಲ್ಲಿ ತಾವೇ ಮುಂದು ಎಂಬುದನ್ನು ಮಮತಾ ತೋರಿಸಿದ್ದಾರೆ. ಸದ್ಯ ಮಧ್ಯಾಹ್ನ 12 ಗಂಟೆಯ ಸುಮಾರಿಗೆ ಬಹರಂಪುರ ಕ್ಷೇತ್ರದಲ್ಲಿ ಮಾಜಿ ಕ್ರಿಕೆಟಿಗ ಟಿಎಂಸಿಯ ಅಭ್ಯರ್ಥಿ ಯೂಸೂಫ್ ಪಠಾಣ್ ಹಾಗೂ ಕಾಂಗ್ರೆಸ್​ನ ಅಧಿರಂಜನ್ ಚೌಧರಿ ಹಿನ್ನಡೆ ಅನುಭವಿಸಿದ್ದಾರೆ. ಇಲ್ಲಿ ಬಿಜೆಪಿಯ ಅಭ್ಯರ್ಥಿ ನಿರ್ಮಲ ಕುಮಾರ್ ಸಹಾ 1559 ಮತಗಳಿಂದ ಮುಂದಿದ್ದಾರೆ.


ದೇಶಾದ್ಯಂತ ಲೋಕಸಭೆ ಚುನಾವಣೆಯ ಮತ ಎಣಿಕೆ ನಡೆಯುತ್ತಿದೆ. ಮಧ್ಯಾಹ್ನ 12ರ ವೇಳೆಗೆ 543 ಕ್ಷೇತ್ರಗಳಲ್ಲಿ ಬಿಜೆಪಿ 244, ಕಾಂಗ್ರೆಸ್ 64, ಎಸ್​ಪಿ 33, ಟಿಎಂಸಿ 32, ಡಿಎಂಕೆ 21 ರಲ್ಲಿ ಮುನ್ನಡೆ ಕಾಯ್ದುಕೊಂಡಿವೆ.

Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ