Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬಿಜೆಪಿ ಜಿಲ್ಲಾ ಕಾರ್ಯಾಲಯದಲ್ಲಿ ಬಿಜೆಪಿ ಸಂಸ್ಥಾಪನ ದಿನ ಆಚರಣೆ

ಗದಗ, ಏ.06:  ಭಾರತೀಯ ಜನತಾ ಪಾರ್ಟಿ ಗದಗ ಜಿಲ್ಲಾ ಕಾರ್ಯಾಲಯದಲ್ಲಿ ಬಿಜೆಪಿ ಸಂಸ್ಥಾಪನ ದಿನಚಾರಣೆಯನ್ನು ಜಿಲ್ಲಾ ಬಿಜೆಪಿ ಅಧ್ಯಕ್ಷರ ನೇತೃತ್ವದಲ್ಲಿ ಸ್ಥಾಪನೆ ದಿನ ಆಚರಿಸಲಾಯಿತು.

ಬಿಜೆಪಿ ಗದಗ ಜಿಲ್ಲಾಧ್ಯಕ್ಷರಾದ ರಾಜು ಕುರುಡಗಿ ರವರು ಮಾತನಾಡುತ್ತ ೧೯೮೦ ಏಪ್ರಿಲ್ ೬ ರಲ್ಲಿ ಭಾರತೀಯ ಜನತಾ ಪಕ್ಷ ಅಂತಾ ಉದಯವಾಯಿತು ಅದಕ್ಕಿಂತ ಪೂರ್ವದಲ್ಲಿ ೧೯೫೧ ರಲ್ಲಿ ಜನಸಂಘವನ್ನು ಶ್ಯಾಮ್ ಪ್ರಸಾದ ಮುಖರ್ಜಿ ಹಾಗು ಪಂಡಿತ್ ದೀನ ದಯಾಳ ಉಪಾಧ್ಯಯರ ನೇತೃತ್ವದಲ್ಲಿ ಜನಸಂಘ
ಪ್ರಾರಂಭವಾಯಿತು. ೧೯೭೫ ರಲ್ಲಿ ಅಂದಿನ ಪ್ರಧಾನಿ ಶ್ರೀಮತಿ ಇಂದಿರಾ ಗಾಂಧಿಯವರು ದೇಶದಲ್ಲಿ ತುರ್ತು ಪರಿಸ್ಥೀತಿಯನ್ನ ಜಾರಿಗೆ ತಂದು ದೇಶದಲ್ಲಿರುವ ಎಲ್ಲ ವಿರೋಧ ಪಕ್ಷದ ದುರಿಣರನ್ನ ಜೇಲಿಗೆ ಕಳುಹಿಸಿ ಆಡಳಿತವನ್ನು ನಡೆಸಿದರು. ತುರ್ತು ಪರಿಸ್ಥೀತಿ ಹಿಂದೆ ಪಡೆದ ನಂತರ ಜಯಪ್ರಕಾಶ ನಾರಾಯಣ ರವರ
ನೇತೃತ್ವದಲ್ಲಿ ದೇಶದ ಎಲ್ಲ ರಾಜಕೀಯ ಪಕ್ಷಗಳು ಜನತಾ ಪಕ್ಷದಲ್ಲಿ ವಿಲಿನವಾದವು ಅದರಂತೆ ಜನಸಂಘವು ಕೂಡಾ ಜನತಾ ಪಕ್ಷದಲ್ಲಿ ವಿಲಿನವಾಯಿತು.

ನಂತರ ಜನತಾ ಪಕ್ಷದ ದಿಂದ  ಹೊರಬಂದ ಜನಸಂಘದ ನಾಯಕರುಗಳು ೧೯೮೦ ಏಪ್ರೀಲ್ ೬ ರಂದು ಭಾರತೀಯ ಜನತಾ ಪಾರ್ಟಿಯಾಗಿ ಉದಯವಾಯಿತು. ಅಲ್ಲಿಂದ ಇಲ್ಲಿಯ ವರೆಗೆ ಬಿಜೆಪಿ ಪಕ್ಷ ಹೆಮ್ಮರವಾಗಿ ಬೆಳೆದು ಕಳೆದ ೧೦ ವರ್ಷಗಳಿಂದ ದೇಶದ ಅಧಿಕಾರದ ಚುಕ್ಕಾಣಿಯನ್ನು ಹಿಡಿಯಿತು. ಅದಕ್ಕು ಪೂರ್ವದಲ್ಲಿ ಅಟಲ್ ಬಿಹಾರಿ ವಾಜಪೇಯಿ ರವರ ನೇತೃತ್ವದಲ್ಲಿ ಸಮ್ಮಿಶ್ರ ಸರ್ಕಾರದಲ್ಲಿ ಅಧಿಕಾರವನ್ನು ನಡೆಸಿದರು ಈ ರೀತಿಯಾಗಿ ಬಿಜೆಪಿ ಪಕ್ಷ ಬೆಳೆದು ಬಂದಿದೆ ಎಂದು ಮಾತನಾಡಿದರು.

ಈ ಸಂದರ್ಭದಲ್ಲಿ ಹಿರಿಯರಾದ ಜಗನ್ನಾಥಸಾ ಭಾಂಡಗೆ, ರಾಜಕುಮಾರ ಬಸವಾ, ಪಕ್ಕಿರೇಶ ರಟ್ಟಿಹಳ್ಳಿ, ಅನೀಲ ಅಬ್ಬಿಗೇರಿ, ಕೆ.ಪಿ.ಕೋಟಿಗೌಡ್ರ, ರಾಜು ಹೊಂಗಲ, ಭದ್ರೇಶ ಕುಸ್ಲಾಪೂರ, ಬೂದಪ್ಪ ಹಳ್ಳಿ, ದ್ಯಾಮಣ್ಣ ನೀಲಗುಂದ, ಸಂತೋಷ ಅಕ್ಕಿ, ನಿಂಗಪ್ಪ ಹುಗ್ಗಿ, ಮಹಾದೇವಪ್ಪ ಚಿಂಚಲಿ, ರಮೇಶ ಮಜ್ಜಿಗುಡ್ಡ, ಸುಭಾಸ ಸುಂಕದ, ವಿನೋದ ಹಂಸನೂರ ಹಾಗು ಇನ್ನೂ ಹಲವಾರು ಪ್ರಮುಖರುಗಳು ಉಪಸ್ಥೀತರಿದ್ದರು.

 

 
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ